ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿ ಸಾವು ; ಮರಣೋತ್ತರ ಪರೀಕ್ಷಾ ವರದಿ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಸೇರಿದಂತೆ ಈವರೆಗೆ 17 ಆರೋಪಿಗಳು ಬಂಧನದಲ್ಲಿದ್ದಾರೆ. ಇನ್ನು ನಾಳೆ ಆರೋಪಿಗಳ ಕಸ್ಟಡಿ ಅವಧಿ ಮುಗಿಯಲಿದ್ದು, ಸ್ಥಳ ಮಹಜರು, ಸತತ ವಿಚಾರಣೆ ಸೇರಿದಂತೆ ತನಿಖೆ ನಡೆಯುತ್ತಲೇ ಇದೆ. ಇದೀಗ, ಕೊಲೆಯಾದ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದ್ದು, “ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿಯ ಸಾವು ಸಂಭವಿಸಿದೆ” ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ.

ರೇಣುಕಾಸ್ವಾಮಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ಸಲ್ಲಿಸಿರುವ ವರದಿಯಲ್ಲಿ ”Death is due to shock and Hemorrhage as a result to multiple blunt injuries sustained, ಅಂದರೆ ಶಾಕ್ ಹಾಗೂ ಬಲವಾದ ಹೊಡೆತಗಳ ಕಾರಣದಿಂದ ರಕ್ತಸ್ರಾವವಾಗಿ ಸಾವು ಸಂಭವಿಸಿದೆ” ಎಂಬ ವರದಿಯನ್ನ ವೈದ್ಯರು ನೀಡಿದ್ದಾರೆ.

ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿರುವ ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಆರೋಪಿಗಳನ್ನ ಹಾಜರುಪಡಿಸುವಾಗ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧಪಡಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ರೇಣುಕಾಸ್ವಾಮಿಯ ಸಾವಿಗೆ ವೈದ್ಯರು ನೀಡಿರುವ ಕಾರಣದ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

“ರೇಣುಕಾಸ್ವಾಮಿ ತೀವ್ರ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ಮೃತ ವ್ಯಕ್ತಿಯ ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ. ಈ ಗಾಯದ ಗುರುತುಗಳು ಮರದ ಕೋಲು, ಚರ್ಮದ ಬೆಲ್ಟ್ ಹಾಗೂ ಹಗ್ಗದಿಂದ ಹೊಡೆದ ಗುರುತುಗಳಾಗಿವೆ” ಎಂದು ಶವಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ರೇಣುಕಾಸ್ವಾಮಿ ಅವರ ತಲೆಯನ್ನು ಶೆಡ್ಡಿನಲ್ಲಿ ನಿಂತಿದ್ದ ಮಿನಿ ಟ್ರಕ್‌ಗೆ ಹೊಡೆಯಲಾಗಿದೆ ಎಂದು ಶವಪರೀಕ್ಷೆ ವರದಿ ಹೇಳಲಾಗಿದ್ದು, ಈ ವಾಹನವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲು ಬಳಸಿದ ಮರದ ಕೋಲುಗಳು, ಚರ್ಮದ ಬೆಲ್ಟ್ ಮತ್ತು ಹಗ್ಗವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಪಕ್ಷಕ್ಕೆ ದೊಣ್ಣೆ ಕೊಟ್ಟು ಬಡಿಸಿಕೊಳ್ಳುತ್ತಿರುವ ಸಾಹಿತಿಗಳು!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧನ ಮಾಡಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾ ಸ್ವಾಮಿಗೆ ದರ್ಶನ್ ಮತ್ತು ಗ್ಯಾಂಗ್ ತೀವ್ರ ಚಿತ್ರಹಿಂಸೆ ನೀಡಿತ್ತು ಎಂಬುದು ಸಹ ತನಿಖೆಯಿಂದ ಹೊರಬಂದಿದೆ.

ಜೂನ್‌ 20ಕ್ಕೆ ದರ್ಶನ್​ ಹಾಗೂ ಇನ್ನಿತರ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗಲಿದೆ. ಈ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇನ್ನಿತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...