ಬೀದರ್‌ | ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ಆರೋಪ; 73 ಜನರ ವಿರುದ್ಧ ಪ್ರಕರಣ ದಾಖಲು

Date:

ಗ್ರಾಮದಲ್ಲಿ ನಡೆದ ಹನುಮಾನ ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.3ರಂದು ಭಾನುವಾರ ಸಂಜೆ ನಡೆದಿದೆ.

ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.3ರಂದು ಜರುಗಿದ ಹನುಮಾನ ಜಾತ್ರಾ ಮೆರವಣಿಗೆಯ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ದಲಿತ ಸಮುದಾಯದ ಯುವಕರು ಮತ್ತು ಸವರ್ಣೀಯರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಸವರ್ಣೀಯರು ಜಾತಿ ನಿಂದನೆ ಮಾಡಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಬಳಿಕ ದಲಿತ ಓಣಿಗೆ ನುಗ್ಗಿ ಕೆಲವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ. ‘ನಿಮಗೆ ಗ್ರಾಮದ ಒಳಗಡೆ ಬರಲು ಬಿಡುವುದಿಲ್ಲ. ಗ್ರಾಮದ ಎಲ್ಲ ರೀತಿಯ ಅಂಗಡಿಗಳನ್ನು ನಿಮಗಾಗಿ ಮುಚ್ಚುತ್ತೇವೆ’ ಎಂದು ಹೇಳಿ ಉದ್ದೇಶಪೂರ್ವಕವಾಗಿ ದಲಿತ ಯುವಕರ ಹಲ್ಲೆ ನಡೆಸಲಾಗಿದೆ ಎಂದು ದಲಿತ ಸಮುದಾಯದವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
bidar1 1

ಘಟನೆಯಲ್ಲಿ ದಲಿತ ಸಮುದಾಯದ ಕೆಲ ಯುವಕರು, ಮಹಿಳೆಯರು ಗಾಯಗೊಂಡಿದ್ದಾರೆ. ಸವರ್ಣಿಯರಿಂದ ಹಲ್ಲೆಗೊಳಗಾದ ದಲಿತ ಸಮುದಾಯವರು ನ.4ರಂದು ಖಟಕ ಚಿಂಚೋಳಿ ಠಾಣೆಗೆ ತೆರಳಿ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕೆಂದು ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್

ಘಟನೆ ಸಂಬಂಧ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ 73 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...