ಬೆಂಗಳೂರು | ವೈಟ್‌ಬೋರ್ಡ್ ಟ್ಯಾಕ್ಸಿ ಹಾಗೂ ರ್‍ಯಾಪಿಡೋ ವಿರುದ್ಧ ಆಟೋ ಚಾಲಕರ ಮುಷ್ಕರ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವೈಟ್‌ಬೋರ್ಡ್ ಟ್ಯಾಕ್ಸಿ ಹಾಗೂ ರ್‍ಯಾಪಿಡೋ ಸೇರಿದಂತೆ ನಾನಾ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಸೋಮವಾರ ಆಟೋ ಮಾಲೀಕರ ಮತ್ತು ಚಾಲಕರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಹೋರಾಟಕ್ಕೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಯಶವಂತಪುರ ಹಾಗೂ ಮೆಜೆಸ್ಟಿಕ್ ಬಳಿ ಎಂದಿನಂತೆ ಆಟೋಗಳು ಸಂಚರಿಸುತ್ತಿವೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರಿಪೇಯ್ಡ್ ಆಟೋಗಳು ಜನರಿಗೆ ಸೇವೆ ನೀಡುತ್ತಿವೆ. ಪ್ರತಿಭಟನಾ ಸಮಯವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೇಳುತ್ತಿದ್ದಾರೆ. ಹೀಗಾಗಿ, ಪ್ರಯಾಣಿಕರು ಬಿಎಂಟಿಸಿ ಮತ್ತು ಮೆಟ್ರೋಗಳತ್ತ ಮುಖ ಮಾಡುತ್ತಿದ್ದಾರೆ.

ಪ್ರತಿಭಟನೆ ಕುರಿತು ಈ ದಿನ.ಕಾಮ್ ಜತೆಗೆ ಮಾತನಾಡಿದ ಆಟೋ ಡ್ರೈವರ್ ಯೂನಿಯನ್ (ಸಿಐಟಿಯು) ಅಧ್ಯಕ್ಷ ಶ್ರೀನಿವಾಸ್, “ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದೇವೆ. ಸಾವಿರಾರು ಜನ ಸೇರಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು. ಬೈಕ್ ಟ್ಯಾಕ್ಸಿ ಸೇವೆಯನ್ನು ಸರ್ಕಾರ ಸಂಪೂರ್ಣವಾಗಿ ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈಲ್ವೆ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ತೆರಳಿ ಮನವಿ ಸಲ್ಲಿಸಲಿದ್ದೇವೆ. ಒಂದು ವೇಳೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೇ, ಈ ಮುಷ್ಕರವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುತ್ತೇವೆ. ಬೆಂಗಳೂರಿನಲ್ಲಿ 21 ಆಟೋ ಚಾಲಕರ ಸಂಘಟನೆಗಳಿದ್ದು, ಎಲ್ಲ ಸಂಘಟನೆಗಳು ಈ ಬಂದ್ನಲ್ಲಿ ಪಾಲ್ಗೊಳ್ಳಲಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸೇರಿ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ. ನಗರದಲ್ಲಿ ಕೆಲವು ತಿಳುವಳಿಕೆ ಕೊರತೆ ಇರುವ ಜನ ಆಟೋ ಓಡಿಸುತ್ತಿದ್ದಾರೆ. ಅವರಿಗೆ ಮನವರಿಕೆ ಮಾಡುತ್ತಿದ್ದೇವೆ” ಎಂದರು.

ಚಾಲುಕ್ಯ ಆಟೋ ಸಂಘದ ಚಾಲಕ ಮಂಜುನಾಥ್ ಈ ದಿನ.ಕಾಮ್ ಜತೆಗೆ ಮಾತನಾಡಿ, “24 ಗಂಟೆ ಪ್ರತಿಭಟನೆ ಮಾಡಲು ತಿಳಿಸಿದ್ದಾರೆ. ಹಾಗಾಗಿ, ಆಟೋವನ್ನು ಸ್ಟಾಂಡ್‌ನಲ್ಲಿ ನಿಲ್ಲಿಸಿದ್ದೇವೆ. ರ್‍ಯಾಪಿಡೋವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು” ಎಂದು ಹೇಳಿದರು.

ಆಟೋ ಚಾಲಕ ವಿಜಯಕುಮಾರ ಈ ದಿನ.ಕಾಮ್ ಜತೆಗೆ ಮಾತನಾಡಿ, ”ನಗರದಲ್ಲಿ ಪ್ರತಿ ಏರಿಯಾಗಳಲ್ಲಿ ಆಟೋ ಸಂಚಾರವನ್ನು ನಿಷೇಧಿಸಲಾಗಿದೆ. ಆಟೋ ಓಡಿಸುತ್ತಿರುವವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ. ವೈಟ್‌ ಬೋರ್ಡ್‌ನವರು ಹೆಚ್ಚಿನ ಬಂಡವಾಳ ಹಾಕದೇ ದಿನಕ್ಕೆ 1,000ದಿಂದ 1,500 ವರೆಗೆ ದುಡಿಯುತ್ತಿದ್ದಾರೆ. ನಾವು ಆಟೋ ಚಾಲಕರು ಇನ್ಶುರೆನ್ಸ್, ಎಮಿಷನ್ ಸರ್ಟಿಫಿಕೇಟ್, ಮೀಟರ್ ಪಾಸಿಂಗ್, ಗಾಡಿ ಪಾಸಿಂಗ್ – ಇಷ್ಟೆಲ್ಲ ಮಾಡಿಯೂ ಕೂಡಾ ನಮಗೆ ಸಂಪಾದನೆ ಇಲ್ಲ. ಜೀವನ ನಡೆಸುವುದು ಕಷ್ಟಕರವಾಗಿದೆ” ಎಂದರು.

ಆಟೋ ಚಾಲಕ ರಮೇಶ್ ಈ ದಿನ.ಕಾಮ್ ಜತೆಗೆ ಮಾತನಾಡಿ, “ಮುಷ್ಕರದ ಹೆಸರಿನಲ್ಲಿ ಆಟೋ ನಿಲ್ಲಿಸಿದ್ದರೆ, ಜೀವನ ನಡೆಸುವುದು ಕಷ್ಟವಾಗುತ್ತದೆ. ಬೆಳಗಾದರೆ ತೊಂದರೆಗಳು ಬಂದು ನಿಲ್ಲುತ್ತವೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಮಕ್ಕಳಿಗೆ ಪರೀಕ್ಷೆ ನಡೆಯುತ್ತಿವೆ” ಎಂದು ತಿಳಿಸಿದರು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...