ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ, ಮೂರು ತಿಂಗಳಲ್ಲಿ ನಿಮ್ಮ ಸರ್ಕಾರ ಇರಲ್ಲ: ಆರ್ ಅಶೋಕ್ ಗುಡುಗು

Date:

  • ‘ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ‌, ಗೂಂಡಾ ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ’
  • ‘ಉಚಿತ ಯೋಜನೆ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್‌ ಬ್ಯಾನ್ ಎನ್ನುತ್ತಿದ್ದಾರೆ

ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ನೆಗೆದು ಬಿದ್ದಿದೆ. ಇವರಿಗೆ ತಾಕತ್ ಧಮ್ ಇದ್ರೆ, ಬಜರಂಗದಳ ಆಗಲಿ ಅಥವಾ ಒಂದು ಆರ್‌ಎಸ್‌ಎಸ್‌ ​ಶಾಖೆಯನ್ನು ಬ್ಯಾನ್ ಮಾಡಿ ನೋಡಿ, ಬ್ಯಾನ್ ಮಾಡಿದ ಮೂರು ತಿಂಗಳಿಗೆ ನಿಮ್ಮ ಸರ್ಕಾರ ಇರಲ್ಲ ಎಂದು ಆರ್ ಅಶೋಕ್ ಗುಡುಗಿದರು.

ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಗೋವಿಂದ ಕಾರಜೋಳ ಜೊತೆಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಿಮ್ಮ ಗೂಟದ ಕಾರುಗಳೆಲ್ಲ ಎಲ್ಲವೂ ವಾಪಸು ಹೋಗಬೇಕು. ಈ ದೇಶದ ಪ್ರಧಾನಿಗಳು ಆರ್‌ಎಸ್‌ಎಸ್‌ನವರು. ಈ ಸಂಘಟನೆ ಹಿಂದೂಗಳ ಧ್ವನಿ. ಅದನ್ನು ಮುಟ್ಟಲು ನಿಮ್ಮಿಂದ ಆಗುವುದಿಲ್ಲ” ಎಂದು ಅಶೋಕ್ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಬಹಳ ದಿನ ಉಳಿಯಲ್ಲ

“ಉಚಿತ ಯೋಜನೆಗಳ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್‌ ಬ್ಯಾನ್ ವಿಚಾರ ಹೇಳುತ್ತಿದ್ದಾರೆ. ಆರ್‌ಎಸ್‌ಎಸ್‌ ಅನ್ನು ಬ್ಯಾನ್ ಮಾಡಲು ನಿಮ್ಮ ಅಪ್ಪ, ತಾತಾ, ಅಜ್ಜಿ ಕೈಯಲ್ಲೇ ಆಗಲಿಲ್ಲ. ಈಗ ಆಗುತ್ತಾ. ಕಾಂಗ್ರೆಸ್ ಡಬಲ್ ಸ್ಟೇರಿಂಗ್ ಸರ್ಕಾರವಾಗಿದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ. ಇದು ಗೂಂಡಾ ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ” ಎಂದರು.

“ಈಗಿನ ಕಾಂಗ್ರೆಸ್​ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗಿಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹೆಚ್ಚು ಮಾತನಾಡುತ್ತಿದ್ದಾರೆ. ಸಿಎಂ ಸೈಲೆಂಟ್​ ಆಗಿದ್ದರೆ, ಡಿಸಿಎಂ ವೈಲೆಂಟ್​ ಆಗಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸತ್‌ ಭವನ ಉದ್ಘಾಟನೆ | ಬಿಜೆಪಿ ಬಗ್ಗೆ ಮೃದು ಧೋರಣೆ ಎಂದು ಭಾವಿಸಬೇಕಿಲ್ಲ, ನಾವು ಹೋಗುತ್ತೇವೆ: ಎಚ್‌ಡಿಕೆ

ಯಾರೂ ಕರೆಂಟ್ ಬಿಲ್ ಕಟ್ಟಬೇಡಿ

ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರೂ ಗ್ಯಾರಂಟಿ ಕಾರ್ಡ್‌ ಹಿಡಿದು, ಸರ್ಕಾರ ಬಂದ 24 ಗಂಟೆ ಒಳಗೆ ಗ್ಯಾರಂಟಿ ಜಾರಿ ಅಂತ ಹೇಳಿದ್ದರು. ಆದರೆ, 240 ಗಂಟೆ ಕಳೆದರೂ ಗ್ಯಾರಂಟಿ ಯೋಜನೆ ಜಾರಿ ಆಗಿಲ್ಲ. ದಾರಿಯಲ್ಲಿ ಹೋಗುವವರಿಗೆಲ್ಲ ಉಚಿತ ಯೋಜನೆ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಇದೇ ದಾರಿಹೋಗುವವರಿಂದ ಮತ ಹಾಕಿಸಿಕೊಂಡಿದ್ದಾರೆ ಎನ್ನುವ ಅರಿವು ಅವರಿಗಿಲ್ಲ. ಈಗ ಗ್ಯಾರಂಟಿ ಯೋಜನೆಗಳಿಗೆ ಕಂಡಿಷನ್ ಹಾಕುತ್ತಿದ್ದಾರೆ. ಇದು ಮೋಸ. ಯಾರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಯಾರೂ ಬಸ್‌ನಲ್ಲಿ ಟಿಕೆಟ್ ತಗೋಬೇಡಿ” ಎಂದು ಕರೆ ನೀಡಿದರು.

“ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಅತ್ತೆ, ತಾಯಿ, ಮಾವನ ಮನೆಗೆ, ದೇವಸ್ಥಾನಕ್ಕೆ ಹೋಗಲು ಬಸ್ ಫ್ರೀ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದ್ರೆ ಈವರೆಗೆ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಗ್ಯಾರಂಟಿ ಘೋಷಣೆ ಮಾಡುವಾಗ ಯೋಚನೆ ಮಾಡಿರಲಿಲ್ಲವಾ” ಎಂದು ಆರ್ ಅಶೋಕ್ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...