ಬೆಂಗಳೂರು | ಮುದ್ರಾ ಯೋಜನೆಯಡಿ ₹10 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ ₹1.63 ಲಕ್ಷ ವಂಚನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ಜಾಲಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಪೊಲೀಸರು ಈ ಬಗ್ಗೆ ಎಷ್ಟೆ ಎಚ್ಚರಿಕೆ ವಹಿಸಿ ಎಂದು ಹೇಳಿದರೂ ಕೂಡ ವಂಚಕರ ಜಾಲದಲ್ಲಿ ಜನರು ಸಿಲುಕುತ್ತಿದ್ದಾರೆ. ಇದೀಗ, ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ (ಪಿಎಂಎಂವೈ) ₹10 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ₹1.63ಲಕ್ಷ ಹಣ ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಿ.ನಾರಾಯಣಸ್ವಾಮಿ ವಂಚನೆಗೆ ಒಳಗಾದವರು. ಇವರು ಬೆಂಗಳೂರಿನ ಹುಳಿಮಾವು ನಿವಾಸಿ. ಇವರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.

ಏನಿದು ಘಟನೆ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರಾಯಣಸ್ವಾಮಿ ಅವರಿಗೆ ಹಣದ ಅಗತ್ಯವಿದ್ದ ಹಿನ್ನೆಲೆ, ಸಾಲ ಪಡೆದುಕೊಳ್ಳಲು ಮುಂದಾಗುತ್ತಾರೆ. ಈ ವೇಳೆ, ಮುದ್ರಾ ಯೋಜನೆಯಡಿ ಸಾಲ ಪಡೆಯಲು ಆನ್‌ಲೈನ್‌ನಲ್ಲಿ ಮಾಹಿತಿ ಹುಡುಕುವಾಗ ಮೊಬೈಲ್ ಸಂಖ್ಯೆಯೊಂದು ಸಿಕ್ಕಿದೆ.

ಆನ್‌ಲೈನ್ ದೊರೆತ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಣೆ ಮಾಡಿದ್ದಾರೆ. ಅವರು ಮುದ್ರಾ ಯೋಜನೆಯಡಿ ₹10 ಲಕ್ಷ ಸಾಲ ಕೊಡಿಸುವುದಾಗಿ ಹೇಳಿ ಭರವಸೆ ಮೂಡಿಸಿದ್ದಾರೆ. ಈ ವೇಳೆ, ಸಾಲ ಪಡೆಯಲು ಕೆಲವು ದಾಖಲಾತಿಗಳು ಬೇಕು ಎಂದು ಹೇಳಿ ನಾರಾಯಣಸ್ವಾಮಿ ಅವರ ವೈಯಕ್ತಿಕ ವಿವರ, ಬ್ಯಾಂಕ್ ಖಾತೆ ಸೇರಿದಂತೆ ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಮತ್ತು ಮುದ್ರಾ ಯೋಜನೆಯ ನಕಲಿ ಲೆಟರ್‌ಹೆಡ್ ಬಳಸಿ ₹10 ಲಕ್ಷ ಸಾಲ ಮಂಜೂರಾಗಿದೆ ಎಂದು ನಾರಾಯಣಸ್ವಾಮಿ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸಿದ್ದಾರೆ. ಜತೆಗೆ, ನಕಲಿ ಅಗ್ರಿಮೆಂಟ್, ನಕಲಿ ಬಾಂಡ್‌ಗಳು ಹಾಗೂ ನಕಲಿ ಸಾಲ ಮಂಜೂರಾತಿ ಪತ್ರಗಳನ್ನೂ ಲಗತ್ತಿಸಿದ್ದಾರೆ. ಸಾಲದ ಹಣ ನಿಮ್ಮ ಖಾತೆಗೆ ಕ್ರೆಡಿಟ್ ಆಗಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಹೇಳೀದ್ದಾರೆ.

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ(ಪಿಎಂಎಂವೈ) 10 ಲಕ್ಷ ರೂಪಾಯಿ ಸಾಲ ನೀಡುವುದಾಗಿ ಹೇಳಿ ನಾನಾ ಶುಲ್ಕಗಳ ನೆಪದಲ್ಲಿ ₹1.63 ಲಕ್ಷ ವರ್ಗಾಯಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಲೆಮರೆಸಿಕೊಂಡಿದ್ದ ಮೂವರು ರೌಡಿಶೀಟರ್​ಗಳ​ ಬಂಧಿಸಿದ ಸಿಸಿಬಿ ಪೊಲೀಸರು

ಸಾಲ ಮಂಜೂರು ಮಾಡದೇ, ಪದೇ ಪದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ನಾರಾಯಣಸ್ವಾಮಿ ಅವರು ಲೋನ್ ಮಾಡುವುದು ಬೇಡ ನಾನು ಕೊಟ್ಟಿರುವ ಹಣವನ್ನು ಹಿಂತಿರುಗಿಸಿ ಎಂದು ಹೇಳಿದ್ದಾರೆ.

ನಾರಾಯಣಸ್ವಾಮಿ ಅವರು ಮರಳಿ ಹಣ ನೀಡಿ ಎಂದು ಕೇಳಿದಾಗ ವಂಚಕರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಆಗ ನಾರಾಯಣಸ್ವಾಮಿ ಅವರಿಗೆ ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ.

ಸದ್ಯ ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...