ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಪತ್ತೆ ಮಾಡಲು ಸಂಚಾರ ಪೊಲೀಸರು ನಗರದ ಹಲವೆಡೆ ಕೃತಕ ಬುದ್ದಿಮತ್ತೆ(ಎಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು ಕ್ಲಿಕ್ಕಿಸುವ ಫೋಟೋಗಳನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಾರೆ.

ಇದೀಗ, ಬೆಂಗಳೂರಿನ ಸದಾಶಿವನಗರದ ಸಂಚಾರ ಠಾಣೆ ವ್ಯಾಪ್ತಿಯ ಹಲವೆಡೆ ಎಫ್‌ಟಿವಿಆರ್ (ಸಂಚಾರ ನಿಯಮ ಉಲ್ಲಂಘನೆ ವರದಿ) ತಂತ್ರಜ್ಞಾನ ಆಧರಿತ ಕ್ಯಾಮೆರಾಗಳನ್ನು ಅಳಡಿಸಲಾಗಿದೆ. ಇದು ಒಂದೇ ಠಾಣೆ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಪಟ್ಟಂತೆ 2024ರ ಜನವರಿಯಿಂದ ಮೇ 27ರವರೆಗೆ ಬರೋಬ್ಬರಿ 1.02 ಲಕ್ಷ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ನಗರದಲ್ಲಿ ಸಿಬ್ಬಂದಿ ಕೊರತೆ ಇದೆ. ಹೀಗಾಗಿ, ಪ್ರತಿಯೊಂದು ವಾಹನಗಳ ಮೇಲೆ ಕಣ್ಣಿಡಲು ಸಾಧ್ಯವಾಗುವುದಿಲ್ಲ. ಇದೇ ಕಾರಣಕ್ಕೆ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಡಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು, ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಮತ್ತು ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎಲ್‌ವಿಡಿ) ಕ್ಯಾಮೆರಾಗಳಲ್ಲದೆ, ಟ್ರಾಫಿಕ್ ಪೋಲೀಸರು ಕೈಯಲ್ಲಿ ಹಿಡಿಯುವ ಫೀಲ್ಡ್ ಟ್ರಾಫಿಕ್ ಉಲ್ಲಂಘನೆ ವರದಿ (ಎಫ್‌ಟಿವಿಆರ್) ಸಾಧನಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದಾರೆ. ಇದು ಇತರ ಟ್ರಾಫಿಕ್ ಉಲ್ಲಂಘನೆಗಳ ನಡುವೆ ವೇಗವಾಗಿ, ಫುಟ್‌ಪಾತ್ ಪಾರ್ಕಿಂಗ್ ಮತ್ತು ರಾಂಗ್ ಸೈಡ್ ಡ್ರೈವಿಂಗ್ ಅನ್ನು ದಾಖಲಿಸಲು ಅನುವು ಮಾಡಿಕೊಡುತ್ತದೆ.

ಎಫ್‌ಟಿವಿಆರ್‌ ನಗರದ ಪ್ರತಿಯೊಂದು ರಸ್ತೆಯಾದ್ಯಂತ ಸಿಬ್ಬಂದಿ ಮತ್ತು ಕ್ಯಾಮೆರಾಗಳ ಕೊರತೆಯನ್ನು ಸರಿದೂಗಿಸುತ್ತದೆ. ವಿಶೇಷವಾಗಿ ಐಟಿಎಮ್‌ಎಸ್‌ ಕ್ಯಾಮೆರಾಗಳನ್ನು ಸ್ಥಾಪಿಸದ ಪ್ರದೇಶಗಳಲ್ಲಿ ಹೆಚ್ಚಿನ ಸಂಚಾರ ಉಲ್ಲಂಘನೆಗಳನ್ನು ಸೆರೆಹಿಡಿಯಲು ಸಂಚಾರ ಪೊಲೀಸರಿಗೆ ಸಹಕರಿಸುತ್ತದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜತೆಗೆ, ಸಂಚಾರ ನಿಯಮಗಳ ಉಲ್ಲಂಘನೆ ಪ್ರಮಾಣವೂ ಹೆಚ್ಚಳವಾಗುತ್ತಿದೆ. ನಿಯಮ ಉಲ್ಲಂಘನೆಯಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಹೆಲ್ಮೆಟ್‌ ಧರಿಸದೇ ವಾಹನ ಸವಾರಿ ಮಾಡುವುದು, ಅತೀ ವೇಗದ ವಾಹನ ಚಾಲನೆ ಸೇರಿದಂತೆ ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಡಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಮುಖ್ಯವಾಗಿ ವೇಗ ಮಿತಿ ಉಲ್ಲಂಘನೆ, ಟ್ರಾಫಿಕ್‌ ಸಿಗ್ನಲ್‌ ನಿಯಮ ಉಲ್ಲಂಘನೆ, ಹೆಲ್ಮೆಟ್‌ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ನಿಯಮಬಾಹಿರವಾಗಿ 3 ಮಂದಿಯ ಸವಾರಿ, ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆ, ಸೀಟ್‌ ಬೆಲ್ಟ ಧರಿಸದೆ ವಾಹನ ಚಲಾಯಿಸುವುದು, ಲೇನ್‌ ನಿಯಮ ಪಾಲಿಸದಿರುವುದು, ದೋಷಪೂರಿತ ನೋಂದಣಿ ಫಲಕದಂತಹ ಪ್ರಕರಣಗಳ ಮೇಲೆ ನಿಗಾ ವಹಿಸಿವೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಈ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಘಿಸುವ ವಾಹನಗಳ ಫೋಟೋ ಸೆರೆ ಹಿಡಿದು ವಾಹನದ ನೋಂದಣಿ ಸಂಖ್ಯೆ ಸಮೇತ ಸಂಚಾರ ನಿರ್ವಹಣಾ ಕೇಂದ್ರಕ್ಕೆ (ಟಿಎಂಸಿ) ಮಾಹಿತಿ ರವಾನಿಸುತ್ತಿವೆ. ವಾಹನಗಳ ನೋಂದಣಿ ಸಂಖ್ಯೆ ಹಾಗೂ ಗುರುತು ಸಹ ಪತ್ತೆ ಹಚ್ಚುವುದು ಸುಲಭ. ಈ ಮಾಹಿತಿ ಆಧಾರದಲ್ಲಿ ಐಟಿಎಂಎಸ್‌ ಮೂಲಕ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ನೋಟಿಸ್‌ ಸಿದ್ಧಪಡಿಸಿ ದಂಡ ವಿಧಿಸಲಾಗುತ್ತಿದೆ. ಬಳಿಕ, ದಂಡ ಬಾಕಿ ಇರುವ ಜನರ ಮೊಬೈಲ್‌ ಹಾಗೂ ಮನೆಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...