ಬೆಂಗಳೂರು | 808 ನಕಲಿ ಖಾತೆ ಮಾಡಿ ಪಾಲಿಕೆಗೆ ₹20 ಕೋಟಿ ವಂಚನೆ: ಎನ್‌ ಆರ್‌ ರಮೇಶ್ ಆರೋಪ

Date:

“ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ 808 ನಕಲಿ ಖಾತೆಗಳನ್ನು ಮಾಡುವ ಮೂಲಕ ಪಾಲಿಕೆಗೆ ₹20 ಕೋಟಿಗೂ ಹೆಚ್ಚು ಹಣವನ್ನು ವಂಚಿಸಿರುವ ಬೃಹತ್ ಹಗರಣದ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ರಮೇಶ್ ಎನ್. ಆರ್ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, “ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 160 (ರಾಜರಾಜೇಶ್ವರಿನಗರ ವಾರ್ಡ್) ವ್ಯಾಪ್ತಿಯ ಚನ್ನಸಂದ್ರ, ಹಲಗೆವಡೇರಹಳ್ಳಿ ಹಾಗೂ ಹೊಸಕೆರೆಹಳ್ಳಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಒಟ್ಟು 808 ನಕಲಿ ಖಾತೆಗಳನ್ನು ಸೃಷ್ಟಿಸಿ ಪಾಲಿಕೆಗೆ ₹20 ಕೋಟಿಗೂ ಹೆಚ್ಚು ಹಣ ವಂಚಿಸಿರುವ ಬೃಹತ್ ಹಗರಣ ನಡೆದಿದೆ” ಎಂದು ಹೇಳಿದ್ದಾರೆ.

“ಈ ಕಚೇರಿಯಲ್ಲಿ ಸಹಾಯಕ ಕಂದಾಯ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅರುಣ್ ಕುಮಾರ್, ಕಂದಾಯ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗಣೇಶ್ ಹಾಗೂ ಪ್ರಥಮ ದರ್ಜೆ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಓಂಕಾರಮೂರ್ತಿ ಎಂಬುವವರು ಸೇರಿಕೊಂಡು ವಾರ್ಡ್ ನಂಬರ್ 160ಕ್ಕೆ ಸಂಬಂಧಿಸಿದ `ಎ’ ವಹಿ (‘A’ Register) ಯಲ್ಲಿ ಫೇಕ್ ಎಂಟ್ರಿಗಳನ್ನು ಮಾಡುವ ಮೂಲಕ 808 ಸ್ವತ್ತುಗಳಿಗೆ ನಕಲಿ ಖಾತೆ ಸೃಷ್ಟಿಸಿದ್ದಾರೆ. ಇವರುಗಳ ಪೈಕಿ ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಗುಮಾಸ್ತನ ಪಾತ್ರವೇ ಎಲ್ಲರಿಗಿಂತಲೂ ಬಹಳ ದೊಡ್ಡದಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“808 ಸ್ವತ್ತುಗಳಿಗೆ ಕಾನೂನು ರೀತ್ಯಾ ಅಭಿವೃದ್ಧಿ ಶುಲ್ಕಗಳನ್ನು ಪಾವತಿಸಿಕೊಂಡು `ಎ’ ಖಾತಾಗಳನ್ನು ಮಾಡಿದ್ದೇ ಆದಲ್ಲಿ, ಅಭಿವೃದ್ಧಿ ಶುಲ್ಕದ ರೂಪದಲ್ಲಿ ಪಾಲಿಕೆಗೆ ₹20 ಕೋಟಿಗೂ ಹೆಚ್ಚು ಹಣ ಸಂದಾಯವಾಗುತ್ತಿತ್ತು. ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿ / ನೌಕರರಿಗಿಂತಲೂ ಮಧ್ಯವರ್ತಿಗಳ ಹಾವಳಿಯೇ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

“ಪಾಲಿಕೆಗೆ ಸಂಬಂಧವೇ ಇಲ್ಲದ ಯಶವಂತ್ ಕುಮಾರ್, ವಿಜಯ್ ಕುಮಾರ್ ಮತ್ತು ಮುತ್ತುರಾಜ್ ಎಂಬ ಮಧ್ಯವರ್ತಿಗಳು ಕಚೇರಿಯ ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರ ಆಸನಗಳಲ್ಲಿ ಕುಳಿತು ಪಾಲಿಕೆಯ ದಾಖಲೆಗಳಲ್ಲಿ ತಮಗಿಷ್ಟ ಬಂದ ಎಂಟ್ರಿಗಳನ್ನು ಮಾಡುವ ಕಾನೂನು ಬಾಹಿರ ಕಾರ್ಯಗಳನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.

“ಈ ಮೂವರಿಗೆ ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಗುಮಾಸ್ತ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದು, ಇವರುಗಳು ಹೇಳಿದಂತೆ ಕಂದಾಯ ಪರಿವೀಕ್ಷಕ ಗಣೇಶ್ ಮತ್ತು ಸಹಾಯಕ ಕಂದಾಯ ಅಧಿಕಾರಿಯಾದ ಅರುಣ್ ಕುಮಾರ್ ಅವರು ಚಾಚೂ ತಪ್ಪದೇ ಪಾಲಿಸುತ್ತಾ ಅವರು ಮಾಡಿಕೊಟ್ಟ ನಕಲಿ ದಾಖಲೆಗಳಿಗೆ ಕಣ್ಣು ಮುಚ್ಚಿಕೊಂಡು ಸಹಿ ಹಾಕುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 808 ನಕಲಿ ಖಾತೆ ಮಾಡಿ ಪಾಲಿಕೆಗೆ ₹20 ಕೋಟಿ ವಂಚನೆ: ಎನ್‌ ಆರ್‌ ರಮೇಶ್ ಆರೋಪ

“ಇವರೊಂದಿಗೆ ಈಗಾಗಲೇ 2022ರಲ್ಲಿ ಕಂದಾಯ ವಸೂಲಿಗಾರರಾಗಿ ನಿವೃತ್ತರಾಗಿರುವ ಸಿದ್ದನಾಯಕ್ ಎಂಬಾತ ನಿವೃತ್ತರಾಗಿ ಒಂದೂವರೆ ವರ್ಷಗಳು ಕಳೆದರೂ ಸಹ ಪ್ರತಿನಿತ್ಯ ಕಚೇರಿಗೆ ಹಾಜರಾಗಿ ಕಚೇರಿಯ ಎಲ್ಲ ದಾಖಲೆಗಳನ್ನು ಪರಿಶೀಲಿಸುವ ಮತ್ತು ಎಂಟ್ರಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಮೂರ್ತಿ ಅಲಿಯಾಸ್ ಕೆಂಚೇನಹಳ್ಳಿ ಮೂರ್ತಿ ಎಂಬ ಮತ್ತೊಬ್ಬ ವಂಚಕ ವಾಟರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರೂ, ಸಹ ಸದರಿ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವನ್ನು ಮಾಡುತ್ತಾ ಹತ್ತಾರು ಕೋಟಿ ರೂಪಾಯಿಗಳ ಆಸ್ತಿಯನ್ನು ಕಾನೂನು ಬಾಹಿರವಾಗಿ ಮಾಡಿದ್ದಾನೆ” ಎಂದು ಆರೋಪಿಸಿದ್ದಾರೆ.

“ಈ ಯಶವಂತ್ ಕುಮಾರ್, ವಿಜಯ್ ಕುಮಾರ್ ಹಾಗೂ ಮುತ್ತುರಾಜ್ ಅವರುಗಳ ಎಲ್ಲ ಕಾನೂನು ಬಾಹಿರ ಚಟುವಟಿಕೆಗಳಿಗೆ ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರ ಆಪ್ತ ಸಹಾಯಕನಾಗಿರುವ ಗುರುಶಾಂತಪ್ಪ ಎಂಬ ಮತ್ತೊಬ್ಬ ವಂಚಕ ಎಲ್ಲ ರೀತಿಯ ಸಹಾಯ ಮಾಡುತ್ತಿರುತ್ತಾನೆ. ಗುರುಶಾಂತಪ್ಪ ಸಿಎಂಸಿ ಅವಧಿ (2006-07) ಯಿಂದಲೂ ಇದೇ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಸಹ ಈತನನ್ನು ಬೇರೆಡೆಗೆ ವರ್ಗಾವಣೆಗೊಳಿಸಲು ಇದುವರೆವಿಗೂ ಯಾವುದೇ ಅಧಿಕಾರಿಗೆ ಸಾಧ್ಯವಾಗಿಲ್ಲ. ರಾಜರಾಜೇಶ್ವರಿನಗರ ವಲಯದ ಉಪ ಆಯುಕ್ತರಾದ ಅಬ್ದುಲ್ ರಬ್ ರವರು ಈ ಎಲ್ಲಾ ವಂಚಕ ಅಧಿಕಾರಿಗಳು / ನೌಕರರು ಮತ್ತು ಮಧ್ಯವರ್ತಿಗಳ ಕಾನೂನು ಬಾಹಿರ ಕಾರ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಈ ಬೃಹತ್ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಮೇಲೆ ತಿಳಿಸಿರುವ ಎಲ್ಲ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ದಾಖಲೆಗಳೊಂದಿಗೆ ಲಗತ್ತಿಸಿರುವ ಎಲ್ಲ 808 ಸ್ವತ್ತುಗಳಿಗೆ ಸಂಬಂಧಿಸಿದ ನಕಲಿ `ಎ’ ಖಾತಾಗಳನ್ನು ಕೂಡಲೇ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಮಧ್ಯವರ್ತಿಗಳನ್ನು ಕಚೇರಿಯಲ್ಲಿ ಸರ್ಕಾರಿ ನೌಕರರು ಕುಳಿತುಕೊಳ್ಳುವ ಜಾಗದಲ್ಲಿ ಕೂರಲು ವ್ಯವಸ್ಥೆ ಮಾಡಿಕೊಟ್ಟಿರುವ ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಸಹಾಯಕ ಮತ್ತು ಈ ಬೃಹತ್ ಹಗರಣದಲ್ಲಿ ಶಾಮೀಲಾಗಿರುವ ಸಹಾಯಕ ಕಂದಾಯ ಅಧಿಕಾರಿ ಅರುಣ್ ಕುಮಾರ್, ಕಂದಾಯ ಪರಿವೀಕ್ಷಕ ಗಣೇಶ್ ಹಾಗೂ ರಾಜರಾಜೇಶ್ವರಿನಗರ ವಲಯದ ಉಪ ಆಯುಕ್ತರಾದ ಅಬ್ದುಲ್ ರಬ್ ರವರನ್ನು ಕೂಡಲೇ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಬೇಕು” ಎಂದು ಪಾಲಿಕೆಯ ಮುಖ್ಯ ಆಯುಕ್ತರು, ಆಡಳಿತಾಧಿಕಾರಿಗಳು, ವಿಶೇಷ ಆಯುಕ್ತರು (ಕಂದಾಯ) ಮತ್ತು ರಾಜರಾಜೇಶ್ವರಿನಗರ ವಲಯದ ಆಯುಕ್ತರಿಗೆ ಮನವಿ ಮಾಡಿದ್ದಾರೆ.

“ಹಾಗೆಯೇ, ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಅರುಣ್ ಕುಮಾರ್, ಕಂದಾಯ ಪರಿವೀಕ್ಷಕ ಗಣೇಶ್, ಪ್ರಥಮ ದರ್ಜೆ ಗುಮಾಸ್ತರಾದ ಓಂಕಾರಮೂರ್ತಿ, ವಾಟರ್ ಮ್ಯಾನ್ ಮೂರ್ತಿ ಅಲಿಯಾಸ್ ಕೆಂಚೇನಹಳ್ಳಿ ಮೂರ್ತಿ ಮತ್ತು ರಾಜರಾಜೇಶ್ವರಿನಗರ ವಲಯದ ಉಪ ಆಯುಕ್ತರಾದ ಅಬ್ದುಲ್ ರಬ್ ರವರುಗಳ ವಿರುದ್ಧ ಭ್ರಷ್ಟಾಚಾರ, ವಂಚನೆ, ನಕಲಿ ದಾಖಲೆ ತಯಾರಿಕೆ ಮತ್ತು ಅಧಿಕಾರ ದುರುಪಯೋಗ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಾಯುಕ್ತದಲ್ಲಿ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...