ಬೆಂಗಳೂರು | ಐಷಾರಾಮಿ ಕಾರು ಕೊಡಿಸುವುದಾಗಿ ವೈದ್ಯರೊಬ್ಬರಿಗೆ ನಂಬಿಸಿ ₹6 ಕೋಟಿ ವಂಚನೆ

Date:

ವೈದ್ಯರೊಬ್ಬರಿಗೆ ‍ಐಷಾರಾಮಿ ಕಾರು ಕೊಡಿಸುವುದಾಗಿ ನಂಬಿಸಿ, ಮಹಿಳೆಯೊಬ್ಬರು ಬರೋಬ್ಬರಿ ₹6 ಕೋಟಿ ವಂಚನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಿರೀಶ್ ಮೋಸ ಹೋದ ವೈದ್ಯ. ಐಶ್ವರ್ಯ ಗೌಡ ಆರೋಪಿ. ಸದ್ಯ ಈ ಬಗ್ಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಿರೀಶ್ ಅವರು ವೈದ್ಯರಾಗಿದ್ದು, ಇವರ ಬಳಿ ಆರೋಪಿ ಐಶ್ವರ್ಯ ಗೌಡ ಕಾಸ್ಮೆಟಿಕ್ ಸರ್ಜರಿ ಮಾಡಿಸಲು 2022ರ ಮಾರ್ಚ್‌ನಲ್ಲಿ ಬಂದಿದ್ದಳು. ಆಗ ವೈದ್ಯರಿಗೂ ಆರೋಪಿಗೂ ಪರಿಚಯವಾಗಿದೆ.

ಈ ವೇಳೆ, ಆರೋಪಿ ಐಶ್ವರ್ಯ ತಾನು ರಿಯಲ್​ ಎಸ್ಟೇಟ್​ ಫೈನಾನ್ಸ್​​ ನಡೆಸುತ್ತಿದ್ದು, ಸೆಕೆಂಡ್​​ ಹ್ಯಾಂಡ್​​ ಕಾರುಗಳ ವ್ಯವಹಾರ ಸಹ ನಡೆಸುತ್ತಿದ್ದೇನೆ ಎಂದು ಪರಿಚಯ ಮಾಡಿಕೊಂಡಿದ್ದಳು.

ಗಿರೀಶ್ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಖರೀದಿ ಮಾಡಲು ಯೋಚಿಸುತ್ತಿದ್ದಾಗ ಮಹಿಳೆಯನ್ನು ಸಂಪರ್ಕ ಮಾಡಿದ್ದಾರೆ. ಆರೋಪಿ ಕಡಿಮೆ ಬೆಲೆಗೆ ಐಷಾರಾಮಿ ಕಾರ್ ಕೊಡಿಸುವುದಾಗಿ ನಂಬಿಸಿ, ವೈದ್ಯರ ಬಳಿಯಿಂದ ಮೊದಲನೆಯದಾಗಿ ₹2 ಕೋಟಿ 75 ಲಕ್ಷ ಹಣವನ್ನು ಆನ್​ಲೈನ್​ ಮೂಲಕ ಪಾವತಿ ಮಾಡಿಸಿಕೊಂಡಿದ್ದಾಳೆ. ಅಲ್ಲದೇ, ₹3 ಕೋಟಿ 25 ಲಕ್ಷ ನಗದಾಗಿ ಪಡೆದುಕೊಂಡಿದ್ದಾಳೆ.

ಹಣ ಪಡೆದು ತುಂಬಾ ದಿನಗಳಾದರೂ ಕಾರನ್ನು ಕೊಡಿಸದ ಆಕೆಯ ಮೇಲೆ ಅನುಮಾನಗೊಂಡ ಗಿರೀಶ್ “ಕಾರನ್ನು ಕೊಡಿಸದಿದ್ದರೇ, ಹಣ ವಾಪಸ್ ನೀಡಿ” ಎಂದು ಕೇಳಿದ್ದಾರೆ. ಆ ಸಮಯದಲ್ಲಿ ಕೊಡುವುದಾಗಿ ಸಬೂಬು ಹೇಳಿ ಮುಂದೂಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ನಾಪತ್ತೆ ಪ್ರಕರಣ ಶೇ.34 ರಷ್ಟು ಏರಿಕೆ

ವೈದ್ಯ ಡಿಸೆಂಬರ್‌ನಲ್ಲಿ ಹಣ ತಿರುಗಿಸುವಂತೆ ಕೇಳಿದಾಗ, ಆರೋಪಿ ಐಶ್ವರ್ಯ ವಿಜಯನಗರ ಕ್ಲಬ್ ಹತ್ತಿರ ಬರಲು ತಿಳಿಸಿದ್ದಾಳೆ. ಅದರಂತೆ ಗಿರೀಶ್ ಮತ್ತು ಅವರ ಪತ್ನಿ ಕ್ಲಬ್ ಹತ್ತಿರ ಹೋದಾಗ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾಳೆ. ಅಲ್ಲದೇ, ಪದೇಪದೆ ಹಣ ಕೇಳಿದರೆ, ಅತ್ಯಾಚಾರದ ದೂರು ಕೊಡುತ್ತೇನೆ ಎಂದು ಹೆದರಿಕೆ ಹಾಕಿದ್ದಾರೆ.

ಇಷ್ಟೇ ಅಲ್ಲದೇ, ಈ ವಿಷಯವನ್ನು ಕೈ ಬಿಡಬೇಕಾದರೆ ₹5 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ವೈದ್ಯರಿಂದ ಪುನಃ ₹2 ಲಕ್ಷ ಹಣ ಸುಲಿಗೆ ಮಾಡಿದ್ದಾರೆ ಎಂದು ವೈದ್ಯರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...