ಬೆಂಗಳೂರು | ಅನಿರೀಕ್ಷಿತವಾಗಿ ಬೈಕ್‌ ಸವಾರನಿಗೆ ಗುದ್ದಿದ ‘ಕೋಲೆ ಬಸವ’: ವಿಡಿಯೋ ವೈರಲ್

Date:

ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೋಲೆ ಬಸವ ಬೈಕ್ ಸವಾರನೊಬ್ಬನಿಗೆ ಏಕಾಏಕಿ ಗುದ್ದಿ ಓಡಿ ಹೋಗಿದೆ. ಪರಿಣಾಮ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ಸಮಯಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ.

ನಗರದ ಮಹಾಲಕ್ಷ್ಮೀ ಲೇಔಟ್ ಸ್ವಿಮ್ಮಿಂಗ್ ಪೂಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ರಸ್ತೆ ಬದಿ ಮಹಿಳೆಯೊಬ್ಬರು ಕೋಲೆ ಬಸವನನ್ನು ಹಿಡಿದುಕೊಂಡು ಬರುತ್ತಿದ್ದರು. ಈ ವೇಳೆ, ಎದುರಿಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ಕೋಲೆ ಬಸವ ಎರಗಿ ಓಡಿ ಹೋಗಿದೆ. ಈ ವೇಳೆ, ಬೈಕ್ ಸವಾರನ ವಿರುದ್ಧ ದಿಕ್ಕಿನಲ್ಲಿ ಕ್ಯಾಂಟರ್ ವಾಹನ ಬರುತ್ತಿತ್ತು. ಬೈಕ್ ಸವಾರ ಕ್ಯಾಂಟರ್​ ಚಕ್ರದಡಿಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಚಾಲಕ ಬ್ರೇಕ್ ಹಾಕಿ ಕ್ಯಾಂಟರ್ ನಿಲ್ಲಿಸಿದ್ದಾನೆ. ಇದರಿಂದ ಬೈಕ್​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನು ಓದಿದ್ದೀರಾ? ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ಘಟನೆ ವೇಳೆ, ಸ್ಕೂಟರ್‌ ಸವಾರ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಬೇಕಿತ್ತು. ಆದರೆ, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿದಂತಾಗಿದೆ.

Kole basava

ಕೋಲೆ ಬಸವ ಈ ರೀತಿ ಒಮ್ಮಿಂದೊಮ್ಮೆಲೇ ವರ್ತಿಸಿದ್ದು, ಜನರಲ್ಲಿ ಭಯ ಬೀಳಿಸುವಂತಿದೆ. ಸದ್ಯ ಈ ಅಪಘಾತದ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.

ಅಲ್ಲದೇ, ಈ ಘಟನಾ ಸ್ಥಳದಲ್ಲಿ ವಾಹನಗಳು ಸಂಚರಿಸಲು ಎರಡು ಬದಿ ರಸ್ತೆಗಳಿವೆ. ಆದರೆ, ಒಂದು ಬದಿಯ ರಸ್ತೆಯ ಮೇಲೆ ವಾಹನಗಳನ್ನು ಪಾರ್ಕ್‌ ಮಾಡಲಾಗಿದೆ. ಪಾದಚಾರಿಗಳು ಈ ರಸ್ತೆಯಲ್ಲಿ ನಡೆದುಕೊಂಡು ಓಡಾಡುವಂತಾಗಿದೆ. ಅಲ್ಲದೇ, ದನಗಳು ಕೂಡ ರಸ್ತೆಯಲ್ಲಿ ಓಡಾಡುವಂತಾಗಿದೆ. ಸರಿಯಾದ ಪಾದಚಾರಿ ಮಾರ್ಗ ಇಲ್ಲದಿರುವುದು ಈ ಘಟನೆಗೆ ಕಾರಣ ಎಂದು ಹಲವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...