ಬೆಂಗಳೂರು | ‘ಓವರ್ ಟೇಕ್’ ಮಾಡಲು ಜಾಗ ಬಿಡಲಿಲ್ಲವೆಂದು ಕಾರಿನ ಮೇಲೆ ದಾಳಿ ನಡೆಸಿದ ದ್ವಿಚಕ್ರ ವಾಹನ ಸವಾರ

Date:

ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ಕುಟಂಬವೊಂದು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ ಮಗಳ ಜೊತೆಗೆ ನಗರದ ಸರ್ಜಾಪುರ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದರು. ಅಖಿಲ್ ಸಾಬು ಅವರು ಮೂಲತಃ ಕೇರಳದವರಾಗಿದ್ದು, ಐಟಿ ವೃತ್ತಿಪರರಾಗಿದ್ದಾರೆ.

ಓವರ್ ಟೆಕ್ ಮಾಡಲು ಜಾಗ ಬಿಡಲಿಲ್ಲ ಎಂದು ರೊಚ್ಚಿಗೆದ್ದ ಬೈಕ್ ಸವಾರ ಏಕಾಏಕಿ ಕಾರು ಚಾಲಕನ ಮೇಲೆ ದಾಳಿ ನಡೆಸಿದ್ದಾನೆ. ಈ ಘಟನೆ ಸಂಬಂಧ ಕಾರು ಮಾಲೀಕ ಅಖಿಲ್ ಸಾಬು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ದಂಪತಿ ತಮ್ಮ ಮೂರು ವರ್ಷದ ಮಗುವಿನೊಂದಿಗೆ ನಗರದ ಸರ್ಜಾಪುರದ ರಸ್ತೆಯಲ್ಲಿ ಸಂಚಾರ ಮಾಡುವಾಗ ಓವರ್‌ ಟೇಕ್ ಮಾಡಲು ಸೈಡ್ ಬಿಡಲಿಲ್ಲ ಎಂದು ದ್ವಿಚಕ್ರ ವಾಹನ ಸವಾರನೊಬ್ಬ ಏಕಾಏಕಿ ಕಾರಿನ ಮೇಲೆ ದಾಳಿ ನಡೆಸಿದ್ದಾನೆ.

ಮೊದಲಿಗೆ ಬೈಕ್‌ ಸವಾರ ಕಾರನ್ನು ಅಡ್ಡಗಟ್ಟುವ ವೇಳೆ ಹೆಲ್ಮೆಟ್‌ನಿಂದ ಕಾರಿಗೆ ಬೀಸಿದ್ದಾನೆ. ಬಳಿಕ, ಕಾರಿನ ಮುಂದೆ ವಾಹನ ನಿಲ್ಲಿಸಿ, ಮತ್ತೆ ಕೆಳಗೆ ಬಿದ್ದ ಹೆಲ್ಮೆಟ್ ತೆಗೆದುಕೊಂಡು ಕಾರಿನ ಗಾಜಿಗೆ ಹೊಡೆದಿದ್ದಾನೆ. ಪರಿಣಾಮ ಬೈಕ್ ಚಾಲಕ ಕಾರಿನ ಗ್ಲಾಸ್ ಒಡೆದು ಹಾಕಿದ್ದು ಕಾರಿನೊಳಗಿದ್ದ ಮಗಳಿಗೆ ಗಾಯಗಳಾಗಿವೆ ಎಂದು ಅಖಿಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಜಗದೀಶ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ‘ಫೈವ್ ಸ್ಟಾರ್’ ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ; ಹೆಚ್ಚುತ್ತಿರುವ ಪ್ರಕರಣಗಳು

ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಈ ವಿಡಿಯೋದಲ್ಲಿ ಬೈಕ್ ಚಾಲಕ ಕಾರನ್ನು ಅಡ್ಡಗಟ್ಟುವುದನ್ನು ಕಾಣಬಹುದು. ಜತೆಗೆ, ನಡು ರಸ್ತೆಯಲ್ಲಿ ಕಾರು ಚಾಲಕ ಮತ್ತು ಬೈಕ್​ ಚಾಲಕರಿಬ್ಬರು ಬಡಿದಾಡಿಕೊಂಡ ದೃಶ್ಯ ಕಾಣಬಹುದು.

ಘಟನೆಯಲ್ಲಿ ಕಾರು ಚಾಲಕನ ಕಣ್ಣು, ಮೂಗು, ಕೆನ್ನೆಗೆ ಗಾಯವಾಗಿದೆ. ಅಷ್ಟೆ ಅಲ್ಲದೇ ದ್ವಿಚಕ್ರ ವಾಹನ ಸವಾರ ತನ್ನ ಹೆಲ್ಮೆಟ್​ನಿಂದ ಕಾರಿನ ಗಾಜು ಹೊಡೆದಿದ್ದರಿಂದ ಕಾರಿನಲ್ಲಿದ್ದ 3 ವರ್ಷದ ಮಗುವಿನ ಕೈಗೆ ಗಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...