ಬೆಂಗಳೂರು | ಆರೋಪಿಯನ್ನು ಅಕ್ರಮ ಬಂಧನದಲ್ಲಿಟ್ಟಿದ್ದ ಅಮೃತಹಳ್ಳಿ ಪೊಲೀಸರು: ಮಾನವ ಹಕ್ಕುಗಳ ಆಯೋಗ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದರು. ಮಾನವ ಹಕ್ಕುಗಳ ಆಯೋಗ ದಾಳಿ ನಡೆಸಿ ಈ ವಿಚಾರ ಬಯಲಿಗೆಳೆದಿದೆ.

ಅಮೃತಹಳ್ಳಿ ಠಾಣೆಯ ಪೊಲೀಸರು ಫೆಬ್ರುವರಿ 1ರಂದು ಆರೋಪಿಯೊಬ್ಬರನ್ನು ಬಂಧನ ಮಾಡಿ 10 ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿತ್ತು. ಈ ಬಗ್ಗೆ ಆರೋಪಿಯ ಕುಟುಂಬಸ್ಥರಿಗೆ ಮಾಹಿತಿ ನೀಡಿರಲಿಲ್ಲ. ಜತೆಗೆ, ದಾಖಲಾತಿಯಲ್ಲಿ ನಮೂದಿಸಿರಲಿಲ್ಲ.

ಯಾಸಿನ್ ಮೆಹಬೂಬ್ ಖಾನ್ ವಿರುದ್ಧ 2023ರಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಆತನ ವಿರುದ್ಧ ಪ್ರಕರಣ ದಾಖಲಾದ ಬಳಿಕ, ಆತ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಬಂಧನ ಮಾಡಲು ನ್ಯಾಯಾಲಯ ಕೂಡ ವಾರೆಂಟ್ ಜಾರಿ ಮಾಡಿತ್ತು. ಪೊಲೀಸರು ವಾರೆಂಟ್ ಆಧರಿಸಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದ ಬಗ್ಗೆ ದಾಖಲಾತಿಯಲ್ಲಿ ಉಲ್ಲೇಖಿಸಿರಲಿಲ್ಲ. ಕೋರ್ಟ್‌ಗೂ ಹಾಜರು ಪಡಿಸಿರಲಿಲ್ಲ. ಆರೋಪಿಯ ಮನೆಯವರಿಗೂ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಅಡ್ವೋಕೇಟ್ ಮಜೀದ್ ಠಾಣೆಗೆ ಭೇಟಿ ನೀಡಿದಾಗ ಆರೋಪಿ ತನ್ನ ಬಂಧನದ ಬಗ್ಗೆ ಅಡ್ವೋಕೇಟ್‌ಗೆ ಮಾಹಿತಿ ನೀಡಿದ್ದರು. ಹೀಗಾಗಿ ಮಾನವ ಹಕ್ಕುಗಳ ಆಯೋಗಕ್ಕೆ ಆರೋಪಿಯ ಕುಟುಂಬ ದೂರು ನೀಡಿತ್ತು. ಬಳಿಕ ಮಾನವ ಹಕ್ಕುಗಳು ಆಯೋಗದ ಡಿವೈಎಸ್‌ಪಿ ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ದಾಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿಟ್‌ ಆ್ಯಂಡ್ ರನ್‌ಗೆ 62 ವರ್ಷದ ವೃದ್ಧೆ ಬಲಿ

ಫೆ.10ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ ನಡೆಸಿತ್ತು. ವೇಳೆ ಅಮೃತಹಳ್ಳಿ ಪೊಲೀಸರು, ಆರೋಪಿಯನ್ನ ಅಕ್ರಮವಾಗಿ ಬಂಧನದಲ್ಲಿಟ್ಟಿರುವುದು ಪತ್ತೆಯಾಗಿದೆ.

ಸದ್ಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಸದ್ಯ ಅಧಿಕಾರಿಗಳು ಇನ್ಸ್ಪೆಕ್ಟರ್​, ಸಿಬ್ಬಂದಿ ವಿಚಾರಣೆ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...