ಬೆಂಗಳೂರು | ಪೋಷಕರ ಮೇಲೆ ದ್ವೇಷ; ಬಾಲಕಿ ಮೇಲೆ ನಾಯಿ ಛೂ ಬಿಟ್ಟ ದುರುಳ

Date:

ಪೋಷಕರ ವಿರುದ್ಧ ಸೇಡು ತೀರಿಸಿಕ್ಕೊಳ್ಳಲು ಅಪ್ರಾಪ್ತ ಬಾಲಕಿಯ ಮೇಲೆ ತನ್ನ ನಾಯಿಯನ್ನು ಛೂ ಬಿಟ್ಟ ಕೋಳಿ ಫಾರಂ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?

ನಾಗರಾಜ್ ಎಂಬುವವರು ಮಾಗಡಿ ಬಳಿ ಕೋಳಿ ಫಾರಂ ಹೊಂದಿದ್ದಾರೆ. ಬಾಲಕಿಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಳಿ ಫಾರಂನಲ್ಲಿ ದಿನಗೂಲಿ ಕೆಲಸ ಮಾಡಲು ನಾಗರಾಜ್ ಬಾಲಕಿಯ ಪೋಷಕರನ್ನು ಕರೆದಿದ್ದಾನೆ. ಆದರೆ, ಅವರು ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಕೋಳಿ ಫಾರಂ ಮಾಲೀಕ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಕೋಪಗೊಂಡ ನಾಗರಾಜ್ ದಂಪತಿಯ 15 ವರ್ಷದ ಮಗಳ ಮೇಲೆ ಸೇಡು ತೀರಿಸಿಕೊಳ್ಳಲು ಯೋಜಿಸಿದ್ದನು” ಎಂದು ಪೊಲೀಸರು ಹೇಳಿದ್ದಾರೆ.

“ಅಕ್ಟೋಬರ್ 9 ರಂದು ಬಾಲಕಿ ಶಾಲೆಯಿಂದ ಬರುತ್ತಿದ್ದಾಗ ನಾಗರಾಜ್‌ನ ಮನೆ ಸಮೀಪಿಸುತ್ತಿದ್ದಂತೆ ಆತ ತನ್ನ ಸಾಕುನಾಯಿಯನ್ನು ಛೂ ಬಿಟ್ಟಿದ್ದಾನೆ. ಬಾಲಕಿ ನಾಯಿಯಿಂದ ಭಯಗೊಂಡು ಸಹಾಯಕ್ಕಾಗಿ ಕೂಗಿದ್ದಾಳೆ. ಈ ವೇಳೆ, ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬಾಲಕಿಯನ್ನು ನಾಯಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!

ಸಂತ್ರಸ್ತೆಯ ಪೋಷಕರು ಕೋಳಿ ಫಾರಂ ಮಾಲೀಕರ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...