ಬೆಂಗಳೂರು | ಸಿಎಂ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನ ಕದ್ದ ಆರೋಪಿ ಬಂಧನ

Date:

ಮುಖ್ಯಮಂತ್ರಿ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.

ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು.  ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ, ಮೆಜೆಸ್ಟಿಕ್‌ನ ಲಾಡ್ಜ್‌ವೊಂದರಲ್ಲಿ ತಂಗಿದ್ದನು.

ಪೊಲೀಸ್ ಠಾಣೆ ಹಾಗೂ ಸದಾ ಪೊಲೀಸ್ ಭದ್ರತೆಯಿಂದಲೇ‌ ಕೂಡಿರುವ ಮುಖ್ಯಮಂತ್ರಿ ನಿವಾಸದ ಕೂಗಳತೆ ದೂರದಲ್ಲಿರುವ, ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ಮಾರ್ವಾಡಿ ಮನೆಯೊಂದರಲ್ಲಿ ಆತನ ಕಳ್ಳತನ ಮಾಡಿದ್ಧಾನೆ. ಮನೆಯ ಕಿಟಕಿಯಿಂದ ಮನೆಯೊಳಗೆ ನುಗ್ಗಿ 2.1 ಕೆಜಿ ಚಿನ್ನಾಭರಣ ಕದ್ದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ ಮಾಲೀಕರಾದ ಮಂಜುಳಾ ದೇವಿ ಅವರ ಕುಟುಂಬಸ್ಥರು ಕಾರ್ಯಕ್ರಮ ಹಿನ್ನೆಲೆ ಕಳೆದ ತಿಂಗಳು 17ರಂದು ರಾಜಸ್ಥನಕ್ಕೆ‌ ತೆರಳಿದ್ದರು. ಫೆ.4ರಂದು ಮರಳಿ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.‌

ಪಕ್ಕದ ಮನೆಯ ಕಾಂಪೌಂಡ್ ಹತ್ತಿ, ಗ್ರಿಲ್ ಮುರಿದು ಒಳನುಗ್ಗಿರುವ ಖದೀಮ ಮನೆಯಲ್ಲಿದ್ದ ₹90 ಲಕ್ಷ ಮೌಲ್ಯದ 2 ಕೆಜಿ 250 ಗ್ರಾಂನ ಚಿನ್ನದ ಬಿಸ್ಕತ್, ಆಭರಣಗಳು ಹಾಗೂ ಬೆಳ್ಳಿ ವಸ್ತುಗಳನ್ನ ಎಗರಿಸಿದ್ದಾನೆ.

ಕಳ್ಳತನದ ಬಗ್ಗೆ ಮಂಜುಳಾ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಶೇಷಾದ್ರಿಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮನೆಯ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ‌ ನಡೆಸಿ, ಆರೋಪಿಯನ್ನು ಪತ್ತೆ ಮಾಡಿದ್ದಾರೆ. 250 ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಬಾಲಕನ ವಿರುದ್ಧವೂ ಪ್ರಕರಣ ದಾಖಲು

ಆರೋಪಿ ಚಿನ್ನಾಭರಣ ಕದ್ದ ದುಡ್ಡಿನಲ್ಲಿಯೇ ಅಸ್ಸಾಂಗೆ ಹೋಗಿ ಕಾರು ಖರೀದಿ ಮಾಡಿದ್ದಾನೆ. ಈತ ಈ ಹಿಂದೆ ಸದಾಶಿವನಗರದಲ್ಲಿಯೂ ಕಳ್ಳತನ ಮಾಡಿದ್ದನು. ಆದರೆ, ಅಲ್ಲಿ ಆತನಿಗೆ ಏನು ಸಿಕ್ಕಿರಲಿಲ್ಲ. ಹಾಗಾಗಿ, ಶೇಷಾದ್ರಿಪುರಂನ ಮನೆಯನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡಿದ್ದನು.

ಸದ್ಯ ಆರೋಪಿಯನ್ನ ಬಂಧಿಸಿರುವ ಶೇಷಾದ್ರಿಪುರಂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...