ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

Date:

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಏ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆ, ನಗರದ ನಾನಾ ಭಾಗಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

ಏ.20ರಂದು ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಗರದ ಕೆಲವೆಡೆ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವೆಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಪ್ಯಾಲೇಸ್‌ ರಸ್ತೆ, ಜಯಮಹಲ್ ರಸ್ತೆ, ರಮಣಮಹರ್ಷಿರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜ್ ರಸ್ತೆ, ಎಂ.ವಿ. ಜಯರಾಮ್‌ ರಸ್ತೆ, ಸಿ.ವಿ. ರಾಮನ್ ರಸ್ತೆ, ನಂದಿದುರ್ಗರಸ್ತೆ, ಮೇಕ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆವರೆಗೆ, ವಸಂತನಗರರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ ಈ ರಸ್ತೆಗಳ ಬದಲಿಗೆ ಪರ್ಯಾಯ ರಸ್ತೆ ಬಳಸಿ ಎಂದು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ನಗರದೊಳಗೆ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಿ.ಎಂ.ಟಿ.ಐ. ಜಂಕ್ಷನ್, ನ್ಯೂ ಬಿ.ಇ.ಎಲ್. ಜಂಕ್ಷನ್, ಓಲ್ಡ್ ಉದಯ ಟಿವಿ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್,  ಬಿ.ಹೆಚ್.ಇ.ಎಲ್. ಜಂಕ್ಷನ್, ಹಜ್ ಕ್ಯಾಂಪ್ ನಂದಿದುರ್ಗ ರಸ್ತೆ, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಸರ್ಕಲ್, ಯಶವಂತಪುರ ಗೋವರ್ಧನ್ ಬಳಿ ಭಾರೀ ಸರಕು ಸಾಗಾಣಿಕಾ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಜತೆಗೆ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ. ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತಗಾಗಿ ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...