ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ ಮಾಡಲಾಗಿದೆ. ಇವರೆಲ್ಲರೂ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಡೀಗರ್ ಅಲಿಯಾಸ್ ಧನಂಜಯ್ ಎಂಬ ಯುವಕನ ಮೇಲೆ ಏಳು ಜನ ಆರೋಪಿಗಳು ದೊಣ್ಣೆ, ಕಲ್ಲು, ಬೆಲ್ಟ್, ಕ್ರೇಟ್ನಿಂದ ಹಲ್ಲೆ ನಡೆಸಿದ್ದಾರೆ. ಯುವಕನನ್ನು ಬೆತ್ತಲು ಮಾಡಿ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಹಲ್ಲೆಗೊಳಗಾದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸದ್ಯ ಪೊಲೀಸರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ಕ್ರಮ ಜರುಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.




