ಬೆಂಗಳೂರು | ಮಳೆನೀರು ಮರುಬಳಕೆಗಾಗಿ ಇಂಗುಗುಂಡಿ ನಿರ್ಮಾಣಕ್ಕೆ ಮುಂದಾದ ಬಿಬಿಎಂಪಿ

Date:

ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್‌ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ ಉದ್ಯಾನವನಗಳ ನಿರ್ವಹಣೆಗೆ ಮಳೆನೀರು ಬಳಕೆ ಮಾಡಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬೆಂಗಳೂರಿನ 115 ಪಾರ್ಕ್‌ಗಳಲ್ಲಿ ಇಂಗುಗುಂಡಿ ನಿರ್ಮಾಣ ಮಾಡುವುದಕ್ಕೆ ಪಾಲಿಕೆ ಸಜ್ಜಾಗಿದೆ. ಉದ್ಯಾನವನದಲ್ಲಿರುವ ಮರ ಗಿಡಗಳ ಪೋಷಣೆ ಮಾಡುವುದಕ್ಕೆ ಸಜ್ಜಾಗಿರುವ ಪಾಲಿಕೆ ಸಿಎಸ್‌ಆರ್‌ ಫಂಡ್ ಬಳಕೆ ಮಾಡಿ ಮಳೆ ನೀರಿನ ಮರು ಬಳಕೆ ಮಾಡುವುದಕ್ಕೆ ಯೋಜನೆ ರೂಪಿಸಿದೆ. ಮಳೆನೀರಿನ ಸಂರಕ್ಷಣೆ ಜೊತೆಗೆ ಮರುಬಳಕೆ ಮಾಡೋದಕ್ಕೆ ಯೋಜನೆ ರೂಪಿಸಿದೆ.

ಮುಂದಿನ ಮಾನ್ಸೂನ್ ಒಳಗಾಗಿ ಬೆಂಗಳೂರಿನ 115 ಪಾರ್ಕ್‌ಗಳಲ್ಲಿ 1 ಸಾವಿರ ಇಂಗುಗುಂಡಿಗಳನ್ನು ಪಾಲಿಕೆ ನಿರ್ಮಾಣ ಮಾಡಲಿದೆ. ಈಗಾಗಲೇ, ದಾಸರಹಳ್ಳಿ, ಯಲಹಂಕ, ದಕ್ಷಿಣ ವಲಯದಲ್ಲಿ ಇಂಗುಗುಂಡಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ವರ್ಷದೊಳಗೆ ಸಾಧ್ಯವಾದಷ್ಟು ಇಂಗುಗುಂಡಿ ನಿರ್ಮಾಣ ಮಾಡುವುದಕ್ಕೆ ಪಾಲಿಕೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಬೆಂಗಳೂರಿನಲ್ಲಿರುವ ಪಾರ್ಕ್‌ಗಳ ನಿರ್ವಹಣೆಯನ್ನು ಪಾಲಿಕೆ ಖಾಸಗಿಯವರಿಗೆ ವಹಿಸಿದೆ. ಈ ಹಿಂದೆ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಪಾಲಿಕೆ ಲಾಲ್ ಬಾಗ್, ಚಾಮರಾಜಪೇಟೆಯ ಜಿಂಕೆವನ ಸೇರಿದಂತೆ ಹಲವೆಡೆ ಇಂಗುಗುಂಡಿ ನಿರ್ಮಾಣ ಮಾಡಿದೆ. ಆದರೆ, ಇದೀಗ ನಿರ್ಮಾಣ ಮಾಡುತ್ತಿರುವ ಇಂಗುಗುಂಡಿಗಳು 20 ಅಡಿ ಆಳ, 4 ಅಡಿ ಅಗಲ ಇರಲಿವೆ.

ಕಳೆದ ಬಾರಿಗಿಂತ ಈ ಬಾರಿಯ ಇಂಗುಗುಂಡಿಗಳ ಗಾತ್ರ ದೊಡ್ಡದಾಗಿದೆ. ಒಂದು ಇಂಗುಗುಂಡಿ ನಿರ್ಮಾಣಕ್ಕೆ ₹40 ಸಾವಿರ ವೆಚ್ಚವಾಗಲಿದೆ. ಈ ವೆಚ್ಚವನ್ನ ಸಿಎಸ್‌ಆರ್‌ ಫಂಡ್ ಮೂಲಕ ಪಾಲಿಕೆ ಭರಿಸಲಿದೆ. ಒಂದು ಇಂಗುಗುಂಡಿ ಸುಮಾರು 4 ಸಾವಿರ ಲೀಟರ್ ನೀರು ಸಂಗ್ರಹಿಸುವಂತೆ ನಿರ್ಮಾಣ ಮಾಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆ ನಿವಾರಣೆಗೆ ಡ್ರೋನ್‌ಗಳ ಹಾರಾಟ

ಮಳೆ ನೀರು ಭೂಮಿಯ ಮೇಲೆ ಹರಿದು ಚರಂಡಿಗಳನ್ನು ಸೇರುವುದಕ್ಕಿಂತ ಇಂಗುವ ಪ್ರಕ್ರಿಯೆಯಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ವ್ಯರ್ಥವಾಗಿ ಚರಂಡಿಗೆ ಹರಿದು ಹೋಗುತ್ತಿರುವ ಮಳೆ ನೀರು ಪೋಷಣೆ ಮಾಡುವ ಈ ಯೋಜನೆ ಉತ್ತಮವಾಗಿದ್ದು, ಇದು ಜಾರಿಯಾದ ಮೇಲೆ ಬಳಕೆ ಹೇಗೆ ಆಗುತ್ತದೆ ಎಂದು ಕಾದುನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...