ಬೆಂಗಳೂರು | ಖಾಸಗಿ ಟ್ಯಾಂಕರ್​​​​ಗಳಿಗೆ ದರ ನಿಗದಿಗೆ ಮುಂದಾದ ಬಿಬಿಎಂಪಿ

Date:

ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಜನರು ನೀರಿಲ್ಲದೇ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಇದೀಗ ನಗರದಲ್ಲಿ ನೀರಿನ ಕೊರತೆ ಹೆಚ್ಚಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಟ್ಯಾಂಕರ್ ಮಾಲೀಕರು ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬೆಂಗಳೂರಿನ ಹಲವೆಡೆ ಅಂತರ್ಜಲ ಮಟ್ಟ ಕುಸಿದ ಕಾರಣ ನೀರಿನ ಸಮಸ್ಯೆ ಎದುರಾಗಿದೆ. ಇನ್ನು ಕೆ.ಆರ್‌ಪುರಂ ಸೇರಿದಂತೆ ಹಲವೆಡೆ ಜಲಮಂಡಳಿ ಕಾವೇರಿ ನೀರನ್ನು 15 ದಿನಕ್ಕೊಮ್ಮೆ ಬಿಡುತ್ತಿದೆ. ಇದರಿಂದ ಜನರು ನೀರಿಲ್ಲದೇ, ಎರಡು ದಿನಕ್ಕೊಮ್ಮೆ ಟ್ಯಾಂಕರ್ ನೀರು ಹಾಕಿಸಿಕೊಳ್ಳುವಂತಾಗಿದೆ. ಈ ಹಿಂದೆ ₹500-₹600 ಇದ್ದ ಟ್ಯಾಂಕರ್ ನೀರಿನ ದರ ಇದೀಗ ₹900 ಗೆ ಏರಿಕೆಯಾಗಿದೆ.

ಇಂದಿರಾನಗರ, ರಾಜಾಜಿನಗರ, ಸುಂಕದಕಟ್ಟೆಯಲ್ಲಿ ಹೆಚ್ಚು ಬೆಲೆಗೆ ನೀರು ಮಾರಾಟ ಮಾಡಲಾಗುತ್ತಿದೆ. 20 ಸಾವಿರ ಲೀಟರ್ ನೀರಿಗೆ ₹6,500 ಪಡೆಯುತ್ತಿದ್ದಾರೆ. 5 ಸಾವಿರ ಲೀಟರ್ ನೀರಿಗೆ 1000 ದಿಂದ 6 ಸಾವಿರ ವರೆಗೆ ಟ್ಯಾಂಕರ್ ನೀರು ಮಾರಾಟ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಂಗಿಯ ಎಂಗೇಜ್ಮೆಂಟ್‌ಗೆ ಬರಲಿಲ್ಲವೆಂದು ಪತ್ನಿಗೆ ಚಾಕು ಇರಿದ ದುಷ್ಟ ಪತಿ

ಈ ಹಿಂದೆ ಬಿಬಿಎಂಪಿ 5 ಸಾವಿರ ಲೀಟರ್ ಟ್ಯಾಂಕರ್​ಗೆ ₹540, 12 ಸಾವಿರ ಲೀಟರ್ ನೀರಿಗೆ ₹1,000 ನಿಗದಿ ಮಾಡಿತ್ತು. ಆದರೆ, ಬೇಸಿಗೆ ಆರಂಭಕ್ಕೂ ಮುನ್ನವೇ ಟ್ಯಾಂಕರ್ ಮಾಲೀಕರು ಜನರಿಂದ ಹಣ ವಸೂಲಿಗೆ ಮುಂದಾಗಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಪಾಲಿಕೆಗೆ ದೂರು ಬಂದ ಹಿನ್ನೆಲೆ, ನೀರು ಪೂರೈಸುವ ಖಾಸಗಿ ಟ್ಯಾಂಕರ್ ಮಾಲೀಕರಿಗೆ ದರ ನಿಗದಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ದರ ನಿಗದಿ ಮಾಡಲು ಆಯಾ ವಲಯಗಳ ವಲಯ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಿದೆ. ಜತೆಗೆ, ಜನರಿಂದ ಹೆಚ್ಚಿನ ಹಣ ವಸೂಲಿ ಮಾಡಿದರೇ ಅಂತಹವರ ಟ್ರೇಡ್ ಲೈಸೆನ್ಸ್‌ ರದ್ದು ಮಾಡಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...