ಬೆಂಗಳೂರು | ಬಸ್​ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾದ ಬಿಎಂಟಿಸಿ ಅಧಿಕಾರಿಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇತ್ತೀಚೆಗೆ 12 ವರ್ಷದ ಬಾಲಕ ತನ್ನ ಪೋಷಕರಿಗೆ ಮಾಹಿತಿ ನೀಡದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಮೂಲಕ ಪ್ರಯಾಣ ಮಾಡಿ ನಾಪತ್ತೆಯಾಗಿದ್ದನು. ಈತನನ್ನು ಹೈದರಾಬಾದ್​ನಲ್ಲಿ ಪತ್ತೆಹಚ್ಚಿ ಬೆಂಗಳೂರಿಗೆ ಕರೆತರಲಾಗಿತ್ತು. ಇದೀಗ, ಎಚ್ಚೆತ್ತ ಬಿಎಂಟಿಸಿ ಅಧಿಕಾರಿಗಳು ಬಸ್‌ನಲ್ಲಿ ಸಂಚರಿಸುವ ಅಪ್ರಾಪ್ತರ ಮೇಲೆ ನಿಗಾ ಇಡಲು ಮುಂದಾಗಿದ್ದಾರೆ.

ಈ ಪ್ರಕರಣದ ನಂತರ ಬಿಎಂಟಿಸಿ ಬಸ್‌ಗಳಲ್ಲಿ ಅಪ್ರಾಪ್ತ ಮಕ್ಕಳು ಅನುಮಾನಾಸ್ಪದವಾಗಿ ಪ್ರಯಾಣಿಸುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯವು ಬಿಎಂಟಿಸಿಗೆ ಸೂಚನೆ ನೀಡಿತ್ತು.

ಒಂಟಿಯಾಗಿ ಸಂಚರಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಬಿಎಂಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ. ಅನುಮಾನಾಸ್ಪದ ಓಡಾಟ ಕಂಡು ಬಂದರೆ ಮಕ್ಕಳ ಸಹಾಯವಾಣಿಗೆ ತಿಳಿಸುವಂತೆ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಚಾಲಕ ಮತ್ತು ನಿರ್ವಾಹಕರಿಗೆ ಕೆಲವೊಂದು ಸೂಚನೆ ನೀಡಿದ್ದಾರೆ. ಅದರಂತೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಅಪ್ರಾಪ್ತ ಮಕ್ಕಳ ಮೇಲೆ ನಿಗಾವಹಿಸಬೇಕು. ಶಾಲಾ ಸಮವಸ್ತ್ರದಲ್ಲಿರುವ ಮಕ್ಕಳನ್ನ ಹೊರತು ಪಡಿಸಿ ಬಸ್​ಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕು” ಎಂದು ಹೇಳಿದ್ದಾರೆ.

“ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದ್ದಲ್ಲಿ ಅಥವಾ ಅನುಮಾನಾಸ್ಪದವಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನ ಗುರುತಿಸಿ ಅವರ ಬಳಿ ಮಾತನಾಡಿ ಪೋಷಕರ ಬಗ್ಗೆ ಮಾಹಿತಿಯನ್ನ ಪಡೆಯಬೇಕು. ಮಕ್ಕಳು ಗೊಂದಲದ ಉತ್ತರವನ್ನ ನೀಡಿದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬೇಕು. ಹತ್ತಿರದ ಪೊಲೀಸ್ ಠಾಣೆಗೆ ಅಂತಹ ಮಕ್ಕಳ ಕರೆದೊಯ್ಯಬೇಕು” ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ಧ್ಯೇಯವಾಕ್ಯ | ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’

ಇತ್ತೀಚೆಗೆ ವೈಟ್‌ಫೀಲ್ಡ್‌ನಲ್ಲಿ 12 ವರ್ಷದ ಬಾಲಕ ಪೋಷಕರಿಗೆ ತಿಳಿಸದೆ ಬಿಎಂಟಿಸಿ ಬಸ್‌ ಮೂಲಕ ಪ್ರಯಾಣಿಸಿ ನಾಪತ್ತೆಯಾಗಿದ್ದನು. ಈ ಕುರಿತಂತೆ ಬಾಲಕನ ಪೋಷಕರು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗೆ ಮಾಹಿತಿ ನೀಡಿದ್ದರು. ನಂತರ ಮುಖ್ಯಮಂತ್ರಿಗಳ ಕಾರ್ಯಾಲಯದ ಅಧಿಕಾರಿಗಳು ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಬಾಲಕ ಹೈದರಾಬಾದ್‌ನಲ್ಲಿ ಇರುವುದನ್ನು ಪತ್ತೆ ಮಾಡಿ ವಾಪಸ್ ಕರೆತಂದಿದ್ದರು. ಈ ಪ್ರಕರಣದ ನಂತರ ಬಿಎಂಟಿಸಿ ಬಸ್‌ಗಳಲ್ಲಿ ಅಪ್ರಾಪ್ತ ಮಕ್ಕಳು ಅನುಮಾನಾಸ್ಪದವಾಗಿ ಪ್ರಯಾಣಿಸುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯವು ಬಿಎಂಟಿಸಿಗೆ ಸೂಚನೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...