ಬೆಂಗಳೂರು | ಮತ್ತೊಂದು ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬರುವುದು ಮುಂದುವರೆದಿದೆ. ಇದೀಗ ಮತ್ತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ.

ನಗರದ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಯ ಒಳಗೆ ಬಾಂಬ್ ಇಟ್ಟಿದ್ದೇವೆ. ಬೆಳಗ್ಗೆ 10.20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಇ-ಮೇಲ್‌ನಲ್ಲಿ ಬೆದರಿಕೆ ಸಂದೇಶ ಕಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಆಡಳಿತ ಮಂಡಳಿ ಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ.

ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು

2023ರ ಡಿಸೆಂಬರ್​ನಲ್ಲಿ ಇದೇ ರೀತಿ ಬೆಂಗಳೂರಿನ 60 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶವನ್ನು ಕೆಲ ಕಿಡಿಗೇಡಿಗಳು ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು; ಚಾಲಕನ ಬಂಧನ

ಇ ಮೇಲ್‌ನಲ್ಲಿ ಶಾಲಾ ಕ್ರೀಡಾಂಗಣ, ಆವರಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬರೆಯಲಾಗಿತ್ತು. ಇದು ಭಾರೀ ಸುದ್ದಿ ಮಾಡಿತ್ತು. ಇದೀಗ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆಯೊಡ್ಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...