ಬೆಂಗಳೂರು | ಮನೆಗೆ ನುಗ್ಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ

Date:

ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ (37) ಕೊಲೆಯಾದವರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡಿ ಮೂಲದ ಪ್ರತಿಮಾಗೆ 18 ವರ್ಷಗಳ ಹಿಂದೆ ವಿವಾಹವಾಗಿತ್ತು. ನಂತರ ಭೂ ವಿಜ್ಞಾನ ಇಲಾಖೆಯಲ್ಲಿ ನೌಕರಿ ದೊರೆತಿದ್ದರಿಂದ ಪ್ರತಿಮಾ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

shimoga pratima

2017ರಲ್ಲಿ ರಾಮನಗರ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪ್ರತಿಮಾ ನಂತರ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಮನೆಗೆ ಪ್ರತಿಮಾ ಅವರನ್ನು ಕಾರು ಚಾಲಕ ಡ್ರಾಪ್ ಮಾಡಿ ತೆರಳಿದ್ದನು. ಬಳಿಕ ರಾತ್ರಿ ವೇಳೆ ಹಂತಕರು ಬಂದು ಕೊಲೆ ಮಾಡಿ, ಪರಾರಿಯಾಗಿದ್ದಾರೆ. ಮನೆಯೊಳಗೆ ಬಂದು ಕೊಲೆ ಮಾಡಿ ಹೋಗಿರುವುದರಿಂದ ಪೂರ್ವನಿಯೋಜಿತ ಕೃತ್ಯವೆಂದು ಶಂಕಿಸಲಾಗಿದೆ. ಮನೆಯಲ್ಲಿ ಕಳ್ಳತನವಾದ ಬಗ್ಗೆ ಯಾವುದೇ ಕುರುಹುಗಳಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಾನು ನಿತ್ಯ ಕರೆ ಮಾಡಿ ಮಾತನಾಡುತ್ತಿದ್ದೆ: ಪ್ರತಿಮಾ ಸಹೋದರ ಪ್ರತೀಶ್

ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರತಿಮಾ ಸಹೋದರ ಪ್ರತೀಶ್, “ನಾನು ನಿತ್ಯ ಕರೆ ಮಾಡಿ ಮಾತನಾಡುತ್ತಿದ್ದೆ. ಇವತ್ತು ಒಂದು ಮದುವೆಗೆ ಹೋಗಬೇಕಿದ್ದಿದ್ದರಿಂದ ನಿನ್ನೆ ರಾತ್ರಿಯಿಂದ ಕರೆ ಮಾಡುತ್ತಿದ್ದೆ. ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಗ್ಗೆ ಕರೆ ಮಾಡಿದಾಗಲೂ ಸ್ವೀಕರಿಸಿರಲಿಲ್ಲ. ಆದ್ದರಿಂದ ಕೆಳಗಿನ ಮನೆಯವರಿಗೆ ಫೋನ್ ಮಾಡಿ ತಿಳಿಸಿದ್ದೆವು. ಅವರು ಬಂದು ನೋಡಿದಾಗ ಕೊಲೆಯಾಗಿರುವುದು ಗೊತ್ತಾಗಿದೆ. ಕೆಲಸದ ವಿಚಾರವಾಗಿ ಏನೂ ಸಮಸ್ಯೆ ಇರಲಿಲ್ಲ. ಆ ರೀತಿ ಇದ್ದಿದ್ದರೆ ನನಗೆ ಹೇಳುತ್ತಿದ್ದಳು. ಮನೆಯಲ್ಲಿಯೂ ಏನೂ ಕಳ್ಳತನವಾಗಿಲ್ಲ. ಪೊಲೀಸ್ ಇಲಾಖೆ ಮೇಲೆಯ ನಂಬಿಕೆಯಿದೆ. ವಿಚಾರಣೆಯಿಂದ ಎಲ್ಲವೂ ತಿಳಿಯುವ ವಿಶ್ವಾಸವಿದೆ’ ಎಂದು ಕಣ್ಣೀರಿಡುತ್ತಾ ತಿಳಿಸಿದ್ದಾರೆ.

ಪ್ರತಿಮಾ ಓರ್ವ ಉತ್ತಮ ಅಧಿಕಾರಿಯಾಗಿದ್ದರು: ಜಿಲ್ಲಾಧಿಕಾರಿ ಕೆ.ಎ ದಯಾನಂದ್
ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎ ದಯಾನಂದ್, ”ಪ್ರತಿಮಾ ಓರ್ವ ಉತ್ತಮ ಅಧಿಕಾರಿ. ಎಲ್ಲ ಸಭೆಗಳಲ್ಲಿಯೂ ಕಡತಗಳ ಜೊತೆಗೆ ಹಾಜರಾಗುತ್ತಿದ್ದವರು. ಕಳೆದ ಒಂದು ತಿಂಗಳ ಹಿಂದೆ ಎಲ್ಲ ಅಧಿಕಾರಿಗಳನ್ನು ಕರೆದು ಸ್ವಲ್ಪ ಜೋರು ಮಾಡಿದ್ದೆ. ಅಕ್ರಮವಾಗಿ ಜಲ್ಲಿಕಲ್ಲು, ಕಲ್ಲು ಗಣಿಗಾರಿಕೆ ನಡೀತಿದೆ, ತಮಿಳುನಾಡಿನಿಂದ ತರ್ತಿದ್ದಾರೆ ನೋಡಿ ಎಂದು ತಿಳಿಸಿದ್ದೆ. ಕೆಲಸದ ಸಂಬಂಧ ಯಾವುದೇ ಸಮಸ್ಯೆ ಇರಲಿಲ್ಲ, ಆ ರೀತಿಯ ಯಾವುದೇ ದೂರು ಬಂದಿರಲಿಲ್ಲ. ತಮಿಳುನಾಡಿನ ಕಡೆಗೆ ಬರುವ ಲಾರಿಗಳನ್ನು ತಡೆಯೋಕೆ ಹೇಳಿದ್ದೆ. ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದುಬರಲಿದೆ’ ಎಂದು ತಿಳಿಸಿದ್ದಾರೆ.

ಯಾವುದೇ ವಸ್ತು ಕಳ್ಳತನವಾಗಿಲ್ಲ: ಡಿಸಿಪಿ ರಾಹುಲ್‌ ಕುಮಾರ್
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ ಕುಮಾರ್ ಶಹಾಪುರ್‌ವಾಡ್, ಮೊದಲು ಉಸಿರುಗಟ್ಟಿಸಿ ನಂತರ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಐದು ವರ್ಷದಿಂದ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಒಬ್ಬರೇ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದದರು.

ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯುತ್ತೇನೆ: ಸಿಎಂ ಸಿದ್ದರಾಮಯ್ಯ

ಇನ್ನು ಈ ಕೊಲೆ ಘಟನೆಯ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ‘ಪ್ರತಿಮಾ ಹತ್ಯೆ ಬಗ್ಗೆ ಈಗಷ್ಟೇ ಮಾಹಿತಿ ಸಿಕ್ಕಿದೆ. ಕೊಲೆಯ ಬಗ್ಗೆ ತನಿಖೆ ಮಾಡುತ್ತೇವೆ. ಕೊಲೆ ಯಾಕೆ ಆಗಿದೆ ಎಂಬುದರ ಬಗ್ಗೆ ಸದ್ಯ ಮಾಹಿತಿ ಇಲ್ಲ. ಎಲ್ಲವನ್ನೂ ತನಿಖೆ ಮಾಡಿಸುತ್ತೇವೆ. ಐದು ವರ್ಷದಿಂದ ಒಬ್ಬರೇ ಮನೆಯಲ್ಲಿ ವಾಸ ಮಾಡ್ತಾ ಇದ್ದರು. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯುತ್ತೇನೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...