ಬೆಂಗಳೂರು | ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು: ನಿವಾಸಿಗಳು ಆಕ್ರೋಶ

Date:

ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.

ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಶೋಭಾ ಅರೆನಾ ಅಪಾರ್ಟ್‌ಮೆಂಟ್‌ನಲ್ಲಿ ಕುಡಿಯಲು ನಮಗೆ ಸಿಗುತ್ತಿರುವ ನೀರಿನ ಗುಣಮಟ್ಟವನ್ನು ದಯವಿಟ್ಟು ನೋಡಿ. ದಯಮಾಡಿ ನಮಗೆ ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯರಸ್ತೆಯಲ್ಲಿ ಕಾವೇರಿ ನೀರು ಕೊಡಿ” ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತರ ನಿವಾಸಿಗಳು ತಮ್ಮ ಮನೆಗೆ ಬರುತ್ತಿರುವ ಕಲುಷಿತ ನೀರಿನ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ನಮ್ಮ ಅಪಾರ್ಟ್‌ಮೆಂಟ್ ಶೋಭಾ ಅಖಾಡ, ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯ ರಸ್ತೆಗೆ ಕಾವೇರಿ ನೀರು ಬೇಕು” ಎಂದಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಲಮಂಡಳಿ ಮುಖ್ಯಸ್ಥರು, ಬೆಂಗಳೂರು ಪೊಲೀಸ್‌ ಸೇರಿದಂತೆ ಹಲವು ಅಧಿಕಾರಿಗಳನ್ನು ಟ್ಯಾಗ್ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಫೆಬ್ರುವರಿ 7ರಂದು ಈ ವಿಡಿಯೋ ಶೇರ್ ಮಾಡಲಾಗಿದೆ. ಈ ವಿಡಿಯೋವನ್ನು ಸುಮಾರು 2 ಲಕ್ಷದ 76 ಸಾವಿರ ಜನರು ವಿಕ್ಷಣೆ ಮಾಡಿದ್ದಾರೆ.

ಈ ವಿಡಿಯೋಗೆ ಹಲವು ಜನ ಕಮೆಂಟ್ ಮಾಡಿದ್ದು, “ಇದು ಟ್ಯಾಂಕ್ ಸ್ವಚ್ಛಗೊಳಿಸಿದ ನಂತರದ ನೀರು. ಆದ್ದರಿಂದಲೇ ನೀರಿನ ಬಣ್ಣ ಕಂದು ಬಣ್ಣದಿಂದ ಬಿಳಿ ಬಣ್ಣಕ್ಕೆ ಬದಲಾಗುತ್ತಿತ್ತು. ವೀಡಿಯೊವನ್ನು ಸ್ವಲ್ಪ ಹೆಚ್ಚು ವಿಸ್ತರಿಸಿದ್ದರೆ, ನೀರಿನ ಬಣ್ಣವು ಸ್ಪಷ್ಟವಾಗುತ್ತಿತ್ತು” ಎಂದು ಅರ್ಬನ್ ಪಿಕ್ಸೆಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ ಭಾಗ್ಯ’

“ಒಂದು ಕ್ಷಣ, ಅವರು ಮನೆಗೆ ಸಾಂಬಾರ್ ಅನ್ನು ನಲ್ಲಿಯ ಮೂಲಕ ಸರಬರಾಜು ಮಾಡುತ್ತಾರೆ ಎಂದು ನಾನು ಭಾವಿಸಿದೆ. ದುರದೃಷ್ಟಕರ” ಎಂದು ವಿನಯ್ ಎಂಬ ಹೆಸರಿನ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...