ಬೆಂಗಳೂರು | ಕೈಬಿಟ್ಟ 1,412 ವಾಹನಗಳ ಪೈಕಿ 918 ವಾಹನಗಳ ವಿಲೇವಾರಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ಪೊಲೀಸ್ ಠಾಣೆಗಳಲ್ಲಿ ರಚಿಸಲಾದ ವಿಶೇಷ ತಂಡಗಳು ಫೆಬ್ರುವರಿ 1ರಿಂದ ಕಾರ್ಯಾಚರಣೆ ನಡೆಸಿ ರಸ್ತೆಯಲ್ಲಿ ಬಿಟ್ಟುಹೋಗಿದ್ದ ಸುಮಾರು 1,412 ವಾಹನಗಳನ್ನು ಗುರುತಿಸಿದ್ದು, ಅವುಗಳಲ್ಲಿ 918 ವಾಹನಗಳನ್ನು ವಿಲೇವಾರಿ ಮಾಡಲಾಗಿದೆ.

ರಸ್ತೆಯಲ್ಲಿ ಬಿಟ್ಟುಹೋಗಿದ್ದ ವಾಹನಗಳು ಸಂಚಾರ ಮತ್ತು ಪಾದಚಾರಿಗಳ ಓಡಾಟಕ್ಕೆ ಅಡ್ಡಿಯುಂಟು ಮಾಡುತ್ತವೆ. ರಸ್ತೆಯ ಜಾಗ ಮತ್ತು ಫುಟ್‌ಪಾತ್‌ಗಳನ್ನು ಅತಿಕ್ರಮಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೈ ಬಿಟ್ಟ ವಾಹನಗಳಲ್ಲಿ 706 ಆಟೋರಿಕ್ಷಾಗಳಾಗಿವೆ. 521 ದ್ವಿಚಕ್ರ ವಾಹನ ಹಾಗೂ 93 ಲಘು ಸರಕುಗಳ ವಾಹನಗಳಾಗಿವೆ. ಈ ಪೈಕಿ 350 ಆಟೋಗಳು, 449 ದ್ವಿಚಕ್ರ ವಾಹನಗಳು ಹಾಗೂ 68 ಲಘು ಸರಕು ವಾಹನಗಳನ್ನು ಮಾಲೀಕರಿಗೆ ಹಿಂತಿರುಗಿಸಲಾಗಿದೆ. ಕೈಬಿಡಲಾದ ವಾಹನಗಳಲ್ಲಿ ನಾಲ್ಕು ಚಕ್ರದ ವಾಹನಗಳು ಮತ್ತು ಭಾರೀ ಸರಕುಗಳ ವಾಹನಗಳೂ ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಬದಿ ಹಾಗೆಯ ಬಿಟ್ಟು ತೆರಳಿದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ಮಾಲೀಕರಿಗೆ ಹಸ್ತಾಂತರಿಸುತ್ತಾರೆ. ಒಂದು ವೇಳೆ, ವಾಹನ ಪಡೆಯಲು ಮಾಲೀಕರು ಬರದೇ ಹೋದಲ್ಲಿ ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ವಾಹನಗಳನ್ನು ಸಾರ್ವಜನಿಕ ಹರಾಜು ಹಾಕುತ್ತಾರೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆ | ಬಿಯರ್ ಮೊರೆ ಹೋದ ಮದ್ಯಪ್ರಿಯರು: 11 ದಿನದಲ್ಲಿ 27 ಲಕ್ಷ ಲೀ. ಬಿಯರ್ ಮಾರಾಟ

“ವಶಪಡಿಸಿಕೊಂಡ ವಾಹನಗಳ ಪೈಕಿ ಹೆಚ್ಚಿನ ವಾಹನಗಳು 10 ವರ್ಷ ಅಥವಾ ಅದಕ್ಕಿಂತ ಹಳೆಯವು. ಇವು ದೀರ್ಘಕಾಲದವರೆಗೆ ಬಳಕೆಯಲ್ಲಿಲ್ಲ. ಶಿವಾಜಿನಗರ ಮತ್ತು ಆರ್‌ಟಿ ನಗರದಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳನ್ನು ಗುರುತಿಸಿ ತೆಗೆದುಹಾಕಲಾಗಿದೆ” ಎಂದು ಜಂಟಿ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...