ಬೆಂಗಳೂರು | ಬೆಂಕಿ ಅವಘಡ: ಸುಟ್ಟು ಕರಕಲಾದ 40ಕ್ಕೂ ಹೆಚ್ಚು ವಾಹನಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿ ಬಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿ ಆಗಿವೆ.

ಫೆ. 22ರ ತಡರಾತ್ರಿ 12 ಗಂಟೆ ಸುಮಾರಿಗೆ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆಗೆ ಗೋಡೌನ್ ಪಕ್ಕ ಇರಿಸಿದ್ದ 40ಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು ಸಾಗಿಸುವ ವಾಹನಗಳು ಸುಟ್ಟು ಹೋಗಿದೆ.

30 ರಿಂದ 40 ಆಟೋಗಳು ಅಗ್ನಿಗಾಹುತಿ ಆಗಿವೆ. ಮನೆ ಮುಂದೆ ವಾಹನಗಳನ್ನು ನಿಲ್ಲಿಸಲು ಜಾಗ ಇಲ್ಲದ ಕಾರಣ ಜನರು ಶೆಡ್​ನಲ್ಲಿ ಪಾರ್ಕಿಂಗ್‌ ಮಾಡಲು ಹಣ ಕೊಟ್ಟು ವಾಹನ ನಿಲ್ಲಿಸುತ್ತಿದ್ದರು. ಇದೀಗ, ಈ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದ ಎಲ್ಲ ಆಟೋಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಆಟೋ ಮಾಲೀಕರು ಕಂಗಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ರಿಜ್ವಾನ್ ಎಂಬುವವರ ಮಾಲೀಕತ್ವದ ಗೋಡೌನ್‌ನ ಒಂದು ಭಾಗದ ಖಾಲಿ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಬಾಡಿಗೆಗೆ ಪಡೆದು ಪಾರ್ಕಿಂಗ್ ನಡೆಸುತ್ತಿದ್ದರು. ಅಕ್ಕಪಕ್ಕದಲ್ಲೂ ಹತ್ತಾರು ಪ್ಲಾಸ್ಟಿಕ್ ಗೋಡೌನ್ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ವೇಗದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆ ಬಳಿಕ ಗೋಡೌನ್ ಬಳಿ ಬಂದು ಕಣ್ಣೀರು ಹಾಕಿದ್ದಾರೆ. ಪ್ರತಿ ದಿನ ವಾಹನಕ್ಕೆ 30 ರೂಪಾಯಿ ಚಾರ್ಜ್ ಮಾಡುತ್ತಿದ್ದರು. ಪಾರ್ಕಿಂಗ್ ಸ್ಥಳದ ಪಕ್ಕದಲ್ಲೇ ಪ್ಲಾಸ್ಟಿಕ್ ಗೋಡೌನ್ ಕೂಡ ಇತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಬಾಲಕನ ವಿರುದ್ಧವೂ ಪ್ರಕರಣ ದಾಖಲು

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಮೂರು ಗಂಟೆಗಳ ಕಾಲ ಹರಸಾಹಸ ಮಾಡಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದರು. ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಕೂಡ ಕೈ ಜೋಡಿಸಿದ್ದು, ಬೆಂಕಿ ಹತೋಟಿಗೆ ತಂದಿದ್ದಾರೆ.

ಜೀವನಕ್ಕೆ ಆಧಾರವಾಗಿದ್ದ ಆಟೋಗಳನ್ನು ಕಳೆದುಕೊಂಡ ಚಾಲಕರು ಕಂಗಾಲಾಗಿದ್ದು, ಈಗ ಏನು ಮಾಡೋದು ಅಂತ ಆಟೋ ಮಾಲೀಕರು ಕಣ್ಣೀರಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...