ಬೆಂಗಳೂರು | ಪತ್ನಿ ಓಡಿಹೋಗಲು ಸಹಾಯ ಮಾಡಿದನೆಂದು ಸ್ನೇಹಿತನ ಕೊಲೆ: ಬಂಧನ

Date:

ತನ್ನ ಪತ್ನಿ ಮತ್ತೋಬ್ಬನ ಜತೆ ಓಡಿ ಹೋಗಲು ಸಹಾಯ ಮಾಡಿದ ಎಂದು ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರಿನ ಬಾಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಿರಣ್ (32) ಮತ್ತು ಆತನ ಸ್ನೇಹಿತ ಅಕ್ಷಯ್ (31) ಬಂಧಿತರು. ಇವರು ಬಾಗಲಗುಂಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತ ಕಿರಣ್ ಸೆಕೆಂಡ್ ಹ್ಯಾಂಡ್ ಬೈಕ್‌ಗಳ ಮಾರಾ ಟಗಾರನಾಗಿದ್ದನು. ಈತನಿಗೆ ಹತ್ಯೆಯಾದ ಕೆಂಗೇರಿಯ ಹೇಮಂತ್‌ನ ಪರಿಚಯವಿತ್ತು. ಕಿರಣ್‌ನ ಹೆಂಡತಿ ಹೇಮಾ ಮರಿಸ್ವಾಮಿ ಜತೆಗೆ ಓಡಿ ಹೋಗಿದ್ದಳು ಎನ್ನಲಾಗಿದೆ.

ಈ ಮರಿಸ್ವಾಮಿ ಮೃತ ಹೇಮಂತ ಸ್ನೇಹಿತ್. ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದ ತನ್ನ ಪತ್ನಿಯನ್ನು ಕಿರಣ್ ಹುಡುಕುತ್ತಿದ್ದಾಗ ಹತ್ಯೆಯಾದ ಹೇಮಂತ ಕರೆ ಮಾಡಿ ‘ನಿನ್ನ ಹೆಂಡತಿ ಮರಿಸ್ವಾಮಿ ಜತೆಗೆ ಓಡಿ ಹೋಗಿದ್ದಾಳೆ’ ಎಂದು ಹೇಳಿದ್ದನು.

ತನ್ನ ಹೆಂಡತಿ ಓಡಿ ಹೋಗಲು ಹೇಮಂತ್ ಸಹಾಯ ಮಾಡಿದ್ದಾನೆ ಎಂದು ಅನುಮಾನ ಪಟ್ಟ ಆರೋಪಿ ಕಿರಣ್ ಅಕ್ಷಯ್ ಜತೆ ಸೇರಿ ಫೆಬ್ರವರಿ 4ರಂದು ರಾತ್ರಿ 7 ಗಂಟೆ ಸುಮಾರಿಗೆ ಕೆಂಗೇರಿಗೆ ತೆರಳಿ ಹೇಮಂತ್‌ಗೆ ಕರೆ ಮಾಡಿ ತಮ್ಮ ಬಳಿಗೆ ಕರೆಸಿಕೊಂಡಿದ್ದರು.

ನಂತರ ಹೇಮಂತ್‌ನನ್ನು ಕರೆದುಕೊಂಡು ಬಾರ್‌ನಲ್ಲಿ ಮದ್ಯ ಸೇವಿಸಿ, ನಂತರ ಬಾಗಲಗುಂಟೆಯ ಪಾಪಣ್ಣ ಲೇಔಟ್‌ಗೆ ಹೇಮಂತ್‌ನನ್ನು ಕರೆದುಕೊಂಡು ಹೋಗಿದ್ದಾರೆ. ಹೇಮಂತ್​ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೊಣ್ಣೆ ಹಾಗೂ ಕಬ್ಬಿಣದ ವಸ್ತುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಷಾರಾಮಿ ಕಾರು ಕೊಡಿಸುವುದಾಗಿ ವೈದ್ಯರೊಬ್ಬರಿಗೆ ನಂಬಿಸಿ ₹6 ಕೋಟಿ ವಂಚನೆ

ಗಾಯಗೊಂಡ ಹೇಮಂತ್​ನನ್ನು ನೋಡಿದ ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಫೆ.5ರಂದು ತಡರಾತ್ರಿ 12 ಗಂಟೆ ಸುಮಾರಿಗೆ ಹೇಮಂತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...