ಬೆಂಗಳೂರು | ಡೈರಿ ಸರ್ಕಲ್‌ ಫ್ಲೈ ಓವರ್ ಕೆಳಗಡೆ ಪ್ರಾಥಮಿಕ ಹಂತದಲ್ಲಿ ಕಸ ಸಂಗ್ರಹಣೆ: ಸ್ಥಳೀಯರ ವಿರೋಧ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೇಳತೀರಾಗಿದೆ. ಕಸವನ್ನು ಸಂಗ್ರಹಣೆ ಮಾಡಲು ನಿಗದಿತ ಸ್ಥಳವನ್ನು ಹುಡುಕಲು ಪಾಲಿಕೆ ಅಧಿಕಾರಿಗಳು ಹೈರಾಣಾಗಿದ್ದಾರೆ. ಇದೀಗ, ಡೈರಿ ಸರ್ಕಲ್‌ನ ಫ್ಲೈಓವರ್ ಕೆಳಗಡೆ ಪ್ರಾಥಮಿಕ ಹಂತದಲ್ಲಿ ಕಸ ಸಂಗ್ರಹಣೆ ಮಾಡಲಾಗ್ತಿದೆ. ಪಾಲಿಕೆಯ ಈ ಕ್ರಮಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಡೈರಿ ಸರ್ಕಲ್ ಫ್ಲೈ ಓವರ್ ಕೆಳಗೆ ಪಾಲಿಕೆ 2022ರಲ್ಲಿ ಕಸ ಸಂಗ್ರಹಣೆ ಮಾಡಲು ಆರಂಭಿಸಿದೆ. ಇದೀಗ, ಪಾಲಿಕೆ ಈ ಜಾಗದಲ್ಲಿ ಕಸ ಸಂಗ್ರಹ ಘಟಕ ಮಾಡುತ್ತಿದೆ ಎಂದು ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಫ್ಲೈಓವರ್ ಕೆಳಗಡೆ ಕಸ ಸಂಗ್ರಹಣೆ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ನಿತ್ಯ ಕಸದ ಗಬ್ಬುವಾಸನೆ ಅಲ್ಲದೇ, ಕೋರಮಂಗಲ ಮತ್ತು ಜಯದೇವ ಆಸ್ಪತ್ರೆಗೆ ನಿತ್ಯ ನೂರಾರು ಜನ ಸಂಚಾರ ಮಾಡುತ್ತಾರೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ. ಕೂಡಲೇ, ಕಸ ಸಂಗ್ರಹವನ್ನ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

“ಫ್ಲೈ ಓವರ್ ಕೆಳಗಡೆ ಕಸ ಸಂಗ್ರಹಣೆ ಮಾಡದಿರಲು ಪಾಲಿಕೆಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಕಸ ಸಂಗ್ರಹವನ್ನ ಬೇರೆಡೆ ಸ್ಥಳಕ್ಕೆ ಸ್ಥಳಾಂತರ ಮಾಡಿ, ಈ ಜಾಗದಲ್ಲಿ ಪಾರ್ಕ್ ಮಾಡಿ ಇಲ್ಲವಾದರೇ ಪ್ರತಿಭಟನೆ ಮಾಡುತ್ತೇವೆ” ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಹುಂಡೈ ಕಾರು ಶೋರೂಮ್‌ ಬೆಂಕಿಗೆ ಆಹುತಿ

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಪ್ರಧಾನ ಎಂಜಿನಿಯರ್‌ ಬಸವರಾಜ್ ಕಬಾಡೆ, “ಹೊರವಲಯಗಳಲ್ಲಿ ಕಸ ಸುರಿಯುತ್ತಿದ್ದೇವೆ. ಡೈರಿ ಸರ್ಕಲ್‌ನ ಫ್ಲೈ ಓವರ್ ಕೆಳಗಡೆ ವಾರ್ಡ್‌ಗಳಿಂದ ಸಂಗ್ರಹ ಮಾಡುವ ಕಸವನ್ನು ಪ್ರಾಥಮಿಕ ಹಂತದಲ್ಲಿ ಬೇರೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಕಸದ ನಿರ್ವಹಣೆ ತುಂಬಾ ಸಮಸ್ಯೆಯಾಗಿದೆ. ಸ್ಥಳಗಳನ್ನು ಗುರುತು ಮಾಡುವುದು ಸಮಸ್ಯೆಯಾಗಿದೆ. ಇದಕ್ಕೆ ಬೇರೆ ಮಾರ್ಗವಿಲ್ಲ. ಆದರೆ, ಜನರಿಗೆ ಕಸದ ವಾಸನೆ ಬರದಂತೆ ಕ್ರಮ ತೆಗೆದುಕೊಳುತ್ತೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...