ಬೆಂಗಳೂರು | ಗಾಳಿ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ: ಈ ಮಾರ್ಗದಲ್ಲಿ ಸಂಚಾರ ಬಂದ್

Date:

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಹಿನ್ನೆಲೆ, ಏ.17ರಿಂದ ಏ.19ರವರೆಗೆ ಮೈಸೂರು ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ  ಬೆಂಗಳೂರು ಸಂಚಾರ ಪೊಲೀಸ್ ಸಂಚಾರ ಮಾರ್ಪಾಡು ಮಾಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್ (ರಿ) ವತಿಯಿಂದ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಏ.17 ರಿಂದ ಏ.19 ರವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಇದೆ.

ಸಂಚಾರ ಬದಲಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏ.17 ರಂದು ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಗೆ ಸಾಗುವ ಎಲ್ಲ ಮಾದರಿಯ ವಾಹನಗಳಿಗೆ ಎಂದಿನಂತೆ ಮೈಸೂರು ಮುಖ್ಯರಸ್ತೆಯಲ್ಲಿ ಚಲಿಸಲು ಅನುಮತಿಸಲಾಗಿದೆ.

ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು

ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ಮುಖ್ಯರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲ ಮಾದರಿಯ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು, ಆವಲಹಳ್ಳಿ ಮುಖ್ಯ ರಸ್ತೆ ಮೂಲಕ, ಬೆಂಗಳೂರು ಒನ್ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆಇಬಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿಇಎಸ್‌ಐಟಿ ಕಾಲೇಜು ದೇವೇಗೌಡ ಸರ್ಕಲ್ ಮುಖಾಂತರ ನಾಯಂಡಹಳ್ಳಿ ಹತ್ತಿರ ಎಡತಿರುವು ಪಡೆದು ಮೈಸೂರು ರಸ್ತೆ ತಲುಪುವುದು.

ಗಾಳಿ ಆಂಜನೇಯ

ಏ.18ರಂದು ಬೆಳಿಗ್ಗೆ 6 ಗಂಟೆಯಿಂದ  ಏ.19ರ ಬೆಳಿಗ್ಗೆ 10 ಗಂಟೆಯವರೆಗೆ ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ನಗರಕ್ಕೆ ಪ್ರವೇಶಿಸುವ ಎಲ್ಲ ಮಾದರಿಯ ವಾಹನಗಳನ್ನು ಕಿಂಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಮತ್ತು ಮೈಸೂರು ಕಡೆಗೆ ಹೋಗುವ ಎಲ್ಲ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ನಗರ ಪ್ರವೇಶಿಸುವ ಎಲ್ಲ ಮಾದರಿಯ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು, ಚಂದ್ರಾಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮುಖಾಂತರ ಮುಂದೆ ಸಾಗಿ ಎಂ.ಸಿ. ಸರ್ಕಲ್ ಬಳಿ ಬಲತಿರುವು ಪಡೆದು ಮಾಗಡಿ ರಸ್ತೆ ಮುಖಾಂತರ ಸಾಗುವುದು.

ಮೆಜೆಸ್ಟಿಕ್‌ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಬಿ ಜಂಕ್ಷನ್ ಮುಖಾಂತರ ಸಾಗಿ ಖೋಡೆ ಸರ್ಕಲ್ ತಲುಪಿ ಮೆಜೆಸ್ಟಿಕ್ ಕಡೆಗೆ ಹೋಗುವುದು.

ಸಿಟಿ ಮಾರ್ಕೆಟ್ ಕಡೆಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್ ಬಳಿ ಬಲ ತಿರುವು ಪಡೆದು ಬಿನ್ನಿಮಿಲ್ ಜಂಕ್ಷನ್ ಮುಖಾಂತರ ಸಿರ್ಸಿ ಸರ್ಕಲ್ ಬಳಿ ಎಡತಿರುವು ಪಡೆದು ಮಾರ್ಕೆಟ್ ತಲುಪುವುದು.

ಅಥವಾ, ನಾಯಂಡಹಳ್ಳಿ ಹಾಗೂ ಬಿಹೆಚ್‌ಇಎಲ್ ಮತ್ತು ಮೈಸೂರು ರಸ್ತೆ ಮುಖಾಂತರ ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್‌ಗೆ ಬರುವ ವಾಹನಗಳು ಕಿಂಕೋ ಜಂಕ್ಷನ್ ಬಳಿ ಎಡತಿರುವು ಪಡೆದು ಅತ್ತಿಗುಪ್ಪೆ ಜಂಕ್ಷನ್, ವಿಜಯನಗರ ಬಸ್ ನಿಲ್ದಾಣ ಮುಖಾಂತರ, ಎಂ.ಸಿ. ಸರ್ಕಲ್‌ನಲ್ಲಿ ಬಲತಿರುವು ಪಡೆದು ಮಾಗಡಿ ಮುಖ್ಯರಸ್ತೆ ಮುಖಾಂತರ ಸಾಗುವುದು.

ಮೆಜೆಸ್ಟಿಕ್‌ ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಬಿ ಜಂಕ್ಷನ್ ಮುಖಾಂತರ ಸಾಗಿ ಖೋಡೆ ಸರ್ಕಲ್ ತಲುಪಿ ಮೆಜೆಸ್ಟಿಕ್ ಹೋಗುವುದು.

ಸಿಟಿ ಮಾರ್ಕೆಟ್ ಕಡೆಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್ ಬಳಿ ಬಲ ತಿರುವು ಪಡೆದು ಬಿನ್ನಿಮಿಲ್ ಜಂಕ್ಷನ್ ಮುಖಾಂತರ ಸಿರ್ಸಿ ಸರ್ಕಲ್ ಬಳಿ ಎಡತಿರುವು ಪಡೆದು ಮಾರ್ಕೆಟ್ ತಲುಪುವುದು.

ಈ ಸುದ್ದಿ ಓದಿದ್ದೀರಾ? ಕಾವೇರಿ ಹೋರಾಟದಲ್ಲಿ ಬಿಜೆಪಿ ಸಂಸದರು ನನಗೆ ಬೆಂಬಲ ನೀಡಿಲ್ಲ: ಬಿಜೆಪಿ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ

ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ಮುಖ್ಯರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲ ಮಾದರಿಯ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು, ಆವಲಹಳ್ಳಿ ಮುಖ್ಯ ರಸ್ತೆ ಮೂಲಕ, ಬೆಂಗಳೂರು ಒನ್ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಇ.ಬಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು ದೇವೇಗೌಡ ಸರ್ಕಲ್ ಮುಖಾಂತರ ನಾಯಂಡಹಳ್ಳಿ ಹತ್ತಿರ ಎಡತಿರುವು ಪಡೆದು ಮೈಸೂರು ರಸ್ತೆ ತಲುಪುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...