ಬೆಂಗಳೂರು | ಕಂಪನಿಯಲ್ಲಿ ಹೆಚ್ಚಿಗೆ ಕೆಲಸ ನೀಡಿದ್ದಕ್ಕೆ ದ್ವೇಷ; ಸಹೋದ್ಯೋಗಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ

Date:

ಕಂಪನಿಯೊಂದರಲ್ಲಿ ಜಾಸ್ತಿ ಕೆಲಸ ಮತ್ತು ಒತ್ತಡ ಹೇರುತ್ತಿದ್ದಾರೆ ಎಂದು ಸಹೋದ್ಯೋಗಿಗಳು ಆಡಿಟರ್‌ ಮೇಲೆ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡೆದಿದೆ.

ಸುರೇಶ್​ ಹಲ್ಲೆಗೊಳಗಾದ ವ್ಯಕ್ತಿ. ಇವರು ಹೆರಿಟೇಜ್ ಮಿಲ್ಕ್ ಪ್ರಾಡಕ್ಟ್ ಕಂಪನಿಯಲ್ಲಿ ಆಡಿಟರ್​ ಆಗಿದ್ದಾರೆ. ಈ ಘಟನೆ ಮಾರ್ಚ್‌ 31ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಕಾರ್‌ವೊಂದರ ಡ್ಯಾಶ್‌ಬೋರ್ಡ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಾರ್ಚ್‌ 31ರಂದು ಸಾಯಂಕಾಲ 6 ಗಂಟೆಗೆ ಸುಮಾರಿಗೆ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡುರಸ್ತೆಯಲ್ಲಿ ಸುರೇಶ್ ಎಂಬುವವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಕಬ್ಬಿಣದ ರಾಡ್‌ನಿಂದ ಇಬ್ಬರು ಮನಸೋ ಇಚ್ಛೆ ಹಲ್ಲೆ ಮಾಡಿರುವ ದೃಶ್ಯ ಡ್ಯಾಶ್‌ಬೋರ್ಡ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿಯೇ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ. ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಬೆಂಗಳೂರು ನಗರ ಪೊಲೀಸರಿಗೆ ಈ ವಿಡಿಯೋ ಟ್ಯಾಗ್ ಮಾಡಿ, ಆರೋಪಿಗಳ ವಿರುದ್ಧ ಕ್ರ ಕೈಗೊಳ್ಳುವಂತೆ ಕೋರಿದ್ದಾರೆ. ಈ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಏಪ್ರಿಲ್ 5 ರಂದು ಐವರನ್ನು ಬಂಧಿಸಿದ್ದಾರೆ. ಬಂಧಿತ ಐವರ ಪೈಕಿ ಇಬ್ಬರು ಹಲ್ಲೆಗೊಳಗಾದ ಸುರೇಶ್‌ ಅವರ ಸಹೋದ್ಯೋಗಿಗಳು ಎಂದು ಹೇಳಲಾಗಿದೆ.

ಜಾಸ್ತಿ ಕೆಲಸ ಮತ್ತು ಒತ್ತಡ ನೀಡಿದ್ದಕ್ಕೆ ಆಡಿಟರ್ ಮೇಲೆ ಹಲ್ಲೆ ಮಾಡಲು ಸಹೋದ್ಯೋಗಿಗಳು ಗುಂಡಾಗಳಿಗೆ ಸುಪಾರಿ ನೀಡಿದ್ದರು ಎಂಬ ವಿಚಾರ ತನಿಖೆಯಿಂದ ಹೊರಬಿದ್ದಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

ಉಮಾಶಂಕರ್, ವಿನೇಶ್, ಸಂದೀಪ್ ಮತ್ತು ಇತರೆ ಇಬ್ಬರ ಬಂಧಿತರು. ಹಲ್ಲೆಗೊಳಗಾದ ಸುರೇಶ್ ಹೆರಿಟೇಜ್ ಮಿಲ್ಕ್ ಪ್ರಾಡಕ್ಟ್ ಕಂಪನಿಯಲ್ಲಿ ಆಡಿಟರ್ ಆಗಿದ್ದಾರೆ. ಉಮಾಶಂಕರ್ ಮತ್ತು ವಿನೇಶ್ ಕೂಡ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...