ಬೆಂಗಳೂರು | 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಇನ್ನುಮುಂದೆ ಹೆಲ್ಮೆಟ್​ ಕಡ್ಡಾಯ

Date:

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ವಿಶ್ವದಲ್ಲಿ ಕುಖ್ಯಾತಿ ಪಡೆದಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡ ಸಂಚಾರ ದಟ್ಟಣೆಗೆ ಕಾರಣವಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸಮರ ಸಾರಿರುವ ಬೆಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ನಿಯಮ ಹಾಗೂ ಕ್ರಮಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ, 6 ವರ್ಷದ ಮೇಲ್ಪಟ್ಟ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಅವರು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕಾರ್ಯಾಚರಣೆ ಆರಂಭಿಸಿರುವ ಬೆಂಗಳೂರು ಸಂಚಾರ ಪೊಲೀಸರು ಆಟೋ, ಸ್ಕೂಲ್ ವ್ಯಾನ್, ಟ್ರಕ್ ಸೇರಿದಂತೆ ನಾನಾ ವಾಹನಗಳ ಪರಿಶೀಲನೆ ನಡೆಸಿ ನಿಯಮ ಪಾಲನೆ ಮಾಡದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಹಾಗೆಯೇ, ಶಾಲೆಗಳ ಬಳಿ ಕಾರ್ಯಾಚರಣೆ ನಡೆಸುವಾಗ ಶಾಲೆಗೆ ಬರುವ ಪುಟ್ಟ ಮಕ್ಕಳು ಹೆಲ್ಮೆಟ್‌ ಧರಿಸದೇ ಇರುವುದು ಕಂಡುಬಂದಿದೆ.

ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇದೀಗ ಸಂಚಾರ ಪೊಲೀಸರು 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಷಕರು ಮಕ್ಕಳನ್ನು ಶಾಲೆಗೆ ಬಿಡುವಾಗ ಅವರನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗುವಾಗ ಮಕ್ಕಳಿಗೆ ಹೆಲ್ಮೆಟ್​ ಕಡ್ಡಾಯವಾಗಿ ಹಾಕಬೇಕು. ಇನ್ನು ವಾಹನದಲ್ಲಿ ಮೂರಕ್ಕೂ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ. ನಿಯಮ ಮೀರಿದ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆಟೋ, ಒಮ್ನಿ, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವುದು ಸರಿಯಲ್ಲ. ಅಂತಹ ವಾಹನಗಳ ವಿರುದ್ದವೂ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಯಲಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊದುಕೊಂಡು ಹೋಗುವವರ ವಿರುದ್ಧವೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 50,000ಕ್ಕೂ ಅಧಿಕ ದಂಡ ಬಾಕಿ ಇದ್ದರೆ, ಮನೆ ಬಾಗಿಲಿಗೆ ಬರ್ತಾರೆ ಸಂಚಾರ ಪೊಲೀಸರು!

ಮನೆಮನೆಗೆ ತೆರಳಿ ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡಿದೇ ತಪ್ಪಿಸಿಕೊಂಡು ಓಡಾಡುವವರ ಮನೆಗೆ ತೆರಳಿ ದಂಡ ಸಂಗ್ರಹ ಮಾಡಲು ಸಂಚಾರ ಪೊಲೀಸ್ ಇಲಾಖೆ ಮುಂದಾಗಿದೆ. 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿದ್ದವರ ಮನೆಗೆ ಸಂಚಾರ ಪೊಲೀಸರು ತೆರಳಿ ದಂಡ ವಸೂಲಿ ಮಾಡುತ್ತಿದ್ದಾರೆ.

ಬೆಂಗಳೂರಲ್ಲಿ ಪ್ರತಿ ದಿನ 1.2 ಕೋಟಿ ವಾಹನಗಳು ಸಂಚರಿಸುತ್ತವೆ. ಜತೆಗೆ 2,300 ಹೊಸ ವಾಹನಗಳು ಸೇರ್ಪಡೆಯಾಗುತ್ತಿವೆ. ನಿತ್ಯ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಅಲ್ಲದೇ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ, ತಪ್ಪಿಸಿಕೊಂಡು ಓಡಾಡುವರು ಹೆಚ್ಚಳವಾಗಿದ್ದಾರೆ. ಇದೀಗ ನಗರದಲ್ಲಿ 2,681ಕ್ಕೂ ಅಧಿಕ ವಾಹನಗಳು 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿವೆ.

ದಂಡ ಹೊಂದಿರುವ ವಾಹನ ಸವಾರರನ್ನು ಪತ್ತೆ ಮಾಡಿ ಸಂಚಾರ ಪೊಲೀಸರು ಅವರ ಮನೆಗೆ ತೆರಳಿ ದಂಡ ವಸೂಲಿ‌ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ 50 ಸಾವಿರಕ್ಕೂ ಅಧಿಕ ದಂಡ ಹೊಂದಿರುವ 2681 ವಾಹನಗಳು ಇವೆ. ದಂಡ ವಸೂಲಿ ಪ್ರಕ್ರಿಯೆ ಕೂಡ ಆರಂಭವಾಗಿದೆ. ಇದುವರೆಗೆ 120 ಜನರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದಿದ್ದರೆ ಅಂತಹ ವಾಹನ ಸವಾರರ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲಿದ್ದು, ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...