ಬೆಂಗಳೂರು | ಹುಸ್ಕೂರು ಮದ್ದೂರಮ್ಮ ಜಾತ್ರೆ; ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು

Date:

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಗೆ ಹತ್ತಾರು ಊರುಗಳಿಂದ ತೇರು ಬರುತ್ತವೆ. ಹೀಲಲಿಗೆ ಗ್ರಾಮದಿಂದ ಜಾತ್ರೆಗೆ ಬರುತ್ತಿದ್ದ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಹೀಲಲಿಗೆಯಿಂದ ಹುಸ್ಕೂರಿಗೆ ಸುಮಾರು 70 ಎತ್ತುಗಳು ಹಾಗೂ ಟ್ರ್ಯಾಕ್ಟರ್ ಮೂಲಕ ತೇರನ್ನು ಎಳೆದುಕೊಂಡು ಹೋಗಲಾಗುತ್ತಿತ್ತು. ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ರಥವು ಹೆಚ್ಚು ಎತ್ತರದಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ತೇರು ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ.

ಇನ್ನು ಈ ಘಟನೆ ಇದೇ ಮೊದಲಲ್ಲ, 2018ರಲ್ಲಿಯೂ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಕುಸಿದು ಬಿದ್ದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯಿಂದ 5 ಕಿ.ಮೀ. ದೂರದಲ್ಲಿರುವ ಹುಸ್ಕೂರು ಮದ್ದೂರಮ್ಮನ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಈ ದೇವಾಲಯವನ್ನು ಚೋಳ ರಾಜರು ನಿರ್ಮಿಸಿದ್ದಾರೆ ಎಂಬ ಇತಿಹಾಸವಿದೆ.

ಈ ಸುದ್ದಿ ಓದಿದ್ದೀರಾ? ಏ.6 ರಿಂದ ಏ.10 ರವರೆಗೆ ತಾಪಮಾನದಲ್ಲಿ ಏರಿಕೆ ಸಾಧ್ಯತೆ: ಜನರಿಗೆ ಸಲಹೆ ನೀಡಿದ ಹವಾಮಾನ ಇಲಾಖೆ

ಪ್ರತಿ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮದ್ದೂರಮ್ಮನ ಜಾತ್ರೆ ನಡೆಯುತ್ತದೆ. ಹುಸ್ಕೂರಿನ ಮದ್ದೂರಮ್ಮ ದೇವಸ್ಥಾನಕ್ಕೆ ಸುತ್ತಲಿನ 10ಕ್ಕೂ ಅಧಿಕ ಗ್ರಾಮಗಳಿಂದ ತೇರನ್ನು ತೆಗೆದುಕೊಂಡು ಬರಲಾಗುತ್ತದೆ. ಇಲ್ಲಿನ ಗ್ರಾಮೀಣ ಭಾಗದ ಜನರು ಅತಿ ಎತ್ತರದ ತೇರುಗಳನ್ನು ನಿರ್ಮಿಸಿಕೊಂಡು ಬಂದು ಮದ್ದೂರಮ್ಮನಿಗೆ ಅರ್ಪಣೆ ಮಾಡುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...