ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

Date:

ಬೆಂಗಳೂರು ನಗರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ನಾನಾ ಕಡೆಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿದೆ.

‘ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು’ ಎಂಬ ಬ್ಯಾನರ್‌ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂದರ್ಯ ಹಾಳುಮಾಡಿದ್ದಾರೆ. ಈ ಹಿನ್ನೆಲೆ, ಸಾರ್ವಜನಿಕ ಸ್ವತ್ತಿನಲ್ಲಿ ಈ ರೀತಿ ಬ್ಯಾನರ್ ಹಾಕಿದವರ ವಿರುದ್ಧ ಪ್ಲೈಯಿಂದ ಸ್ಕ್ವಾಡ್ ತಂಡದ ನಾಯಕ ಅವೀಶ್ ಹೆಚ್.ಎಂ ರವರು ಮೇ 10ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

“ಇಂತಹ ಅಕ್ರಮ ಮತ್ತು ಅನಧಿಕೃತ ಬ್ಯಾನರ್‌ಗಳು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ” ಎಂದು ಪಾಲಿಕೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

ಅಕ್ರಮ ಬ್ಯಾನರ್ ಮತ್ತು ಪ್ರದರ್ಶನಗಳ ಬಗ್ಗೆ ದೂರುಗಳನ್ನು ಸ್ಥಳ ಮತ್ತು ಚಿತ್ರದ ಸಮೇತ ಪಾಲಿಕೆಯ ವ್ಯಾಟ್ಸ್‌ಆಪ್ ನಂಬರ್ 94806 85700 ಗೆ ಕಳುಹಿಸಲು ಎಲ್ಲ ನಾಗರಿಕರಲ್ಲಿ ವಿನಂತಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...