ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

Date:

ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದರೇ, 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಿದೆ ಎಂದು ವಿಶ್ವ ವಾಯು ಗುಣಮಟ್ಟ ವರದಿಯ ಅಂಕಿ ಅಂಶಗಳು ಬಹಿರಂಗಪಡಿಸಿವೆ.

2023ರಲ್ಲಿ ಬೆಂಗಳೂರಿನ ಸರಾಸರಿ ಪಿಎಮ್‌ 2.5 ಮೌಲ್ಯವು ಪ್ರತಿ ಕ್ಯಾಬಿಕ್ ಮೀಟರ್‌ಗೆ 28.6 ಮೈಕ್ರೋಗ್ರಾಂಗಳಷ್ಟಿತ್ತು. 2022ರಲ್ಲಿ ಪ್ರತಿ ಕ್ಯಾಬಿಕ್ ಮೀಟರ್‌ಗೆ 31.5 ಮೈಕ್ರೋಗ್ರಾಂಗಳಷ್ಟು ದಾಖಲಾಗಿದೆ. ಇದು 2018ರಿಂದ ನಗರವು ಕಂಡ ಅತ್ಯುತ್ತಮ ಗಾಳಿಯ ಗುಣಮಟ್ಟವಾಗಿದೆ.

ಜಗತ್ತಿನಾದ್ಯಂತ ಮೌಲ್ಯಮಾಪನ ಮಾಡಲಾದ 7,812 ನಗರಗಳ ಪೈಕಿ ಬೆಂಗಳೂರು 673ನೇ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ, ಹೈದರಾಬಾದ್ ಹಾಗೂ ಕೋಲ್ಕತ್ತಾ ಸೇರಿದಂತೆ ದೇಶದ ಇತರ ಮೆಟ್ರೋಪಾಲಿಟನ್ ನಗರಗಳಿಗಿಂತ ಬೆಂಗಳೂರು ಕಡಿಮೆ ಮಾಲಿನ್ಯವನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹವಾಮಾನ ಬದಲಾವಣೆಗಳು ಸುಧಾರಿತ ಗಾಳಿಯ ಗುಣಮಟ್ಟಕ್ಕೆ ಕಾರಣ. ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವಲ್ಲಿ ಇನ್ನೂ ಬಹಳ ಸಮಯ ಕಾಯಬೇಕಿದೆ” ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

“ನಗರದಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುತ್ತಿದೆ ಎಂದು ನಾವು ಭ್ರಮೆಯಲ್ಲಿರಬಾರದು. ಹವಾಮಾನದ ಅಂಶಗಳ ಕಾರಣದಿಂದಾಗಿ ಸುಧಾರಣೆ ದಾಖಲಾಗಿದೆ. ಎಲ್ ನಿನೊ ಪರಿಣಾಮವು ಕಣಗಳನ್ನು ಕರಾವಳಿಯ ಕಡೆಗೆ ಹರಡುತ್ತದೆ. ಇದು ಬೆಂಗಳೂರಿನ ಗಾಳಿಯ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು” ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್ (ಎನ್‌ಐಎಎಸ್) ಚೇರ್ ಪ್ರೊಫೆಸರ್ ಗುಫ್ರಾನ್ ಬೇಗ್ ಹೇಳಿದ್ದಾರೆ.

“10 ಪಟ್ಟು ಹೆಚ್ಚು ಮಾಲಿನ್ಯಕಾರಕಗಳನ್ನು ಹೊರಸೂಸುವುದರಿಂದ ಡೀಸೆಲ್ ವಾಹನಗಳನ್ನು ಶೀಘ್ರದಲ್ಲೇ ಇತರ ಇಂಧನ ರೂಪಾಂತರಗಳಿಗೆ ಪರಿವರ್ತಿಸಬೇಕು” ಎಂದು ಪ್ರೊಫೆಸರ್ ಬೇಗ್ ಹೇಳಿದರು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯ ಪ್ರೊಫೆಸರ್ ಟಿ ವಿ ರಾಮಚಂದ್ರ ಅವರು ಮಾತನಾಡಿ, “ನಗರದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಮಾತ್ರ ಹೆಚ್ಚುತ್ತಿದೆ. ವಾಹನಗಳು ಹೊರಸೂಸುವಿಕೆಯು ಮಾಲಿನ್ಯವೂ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಅದಕ್ಕೆ ಪೂರಕವಾಗಿ ನಗರದಲ್ಲಿ ಹಸಿರು ಹೊದಿಕೆ ಕಡಿಮೆಯಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

“ರಸ್ತೆಯಲ್ಲಿ ವಾಹನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸುಮಾರು 70% ಬೆಂಗಳೂರಿನ ನಾಗರಿಕರು ದ್ವಿಚಕ್ರ ವಾಹನಗಳನ್ನು ಬಳಸುತ್ತಾರೆ. ಪರಿಸ್ಥಿತಿ ಹೀಗಿರುವಾಗ, ಗಾಳಿಯ ಗುಣಮಟ್ಟದಲ್ಲಿ ಯಾವುದೇ ಸುಧಾರಣೆಯನ್ನು ನಾವು ನಿರೀಕ್ಷಿಸಲಾಗುವುದಿಲ್ಲ” ಎಂದು ಅವರು ಹೇಳಿದರು.

“ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಮತ್ತು ಅದನ್ನು ಹೆಚ್ಚು ಮಿತವ್ಯಯಗೊಳಿಸಲು ತಕ್ಷಣದ ಅಗತ್ಯವಿದೆ. ಉತ್ತಮ ಸಂಚಾರ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು.

“2023ರಲ್ಲಿ ಜನವರಿ, ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ನಗರದಲ್ಲಿ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟವನ್ನು ದಾಖಲಿಸಿದೆ. ಏಕೆಂದರೆ, ಚಳಿಗಾಲದ ತಿಂಗಳುಗಳು ಸಾಮಾನ್ಯವಾಗಿ ಹೆಚ್ಚು ವಾಯು ಮಾಲಿನ್ಯವನ್ನು ಬಹಿರಂಗಪಡಿಸುತ್ತವೆ. ಏಕೆಂದರೆ, ಈ ಸಮಯದಲ್ಲಿ ಮೋಡಗಳು ಸ್ಪಷ್ಟವಾಗಿರುತ್ತವೆ ಮತ್ತು ಗಾಳಿಯಲ್ಲಿ ತೇವಾಂಶವಿರುವುದಿಲ್ಲ” ಎಂದರು.

ಮೂಲ: ಡೆಕ್ಕನ್ ಹೆರಾಲ್ಡ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...