ಬೆಂಗಳೂರು | ‘ಡಿಹೈಡ್ರೇಶನ್’ ಪ್ರಕರಣಗಳಲ್ಲಿ ಹೆಚ್ಚಳ; ಓಆರ್‌ಎಸ್‌ ಮಾರಾಟದಲ್ಲಿ ಶೇ.60 ಏರಿಕೆ

Date:

ರಾಜ್ಯ ರಾಜಧಾನಿ ಬೆಂಗಳೂರು ತನ್ನದೇ ಆದ ವಾತಾವರಣಕ್ಕೆ ಹೆಸರುವಾಸಿಯಾಗಿದೆ. ಈ ನಗರದಲ್ಲಿ ಮೂಲ ಬೆಂಗಳೂರಿಗರಿಗಿಂತ ವಲಸೆ ಬಂದು ನೆಲೆಸಿದವರನ್ನೆ ಹೆಚ್ಚಾಗಿ ಕಾಣಬಹುದು. ಏಕೆಂದರೆ, ಬೆಂಗಳೂರಿನ ವಾತಾವರಣ ಎಲ್ಲರನ್ನು ಸೆಳೆಯುತ್ತದೆ. ಆದರೆ, ಈಗ ನಗರವು ಗರಿಷ್ಠ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಲೇ ಇದ್ದು, ಜನರು ಬಿಸಿಲ ಝಳಕ್ಕೆ ಕಂಗಾಲಾಗಿದ್ದಾರೆ. ನಡುವೆ ನೀರಿನ ಸಮಸ್ಯೆ ಕೂಡ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಸಾಕಷ್ಟು ಜನರು ನಿರ್ಜಲೀಕರಣ (ಡಿಹೈಡ್ರೇಶನ್) ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ನಗರದ ಹಲವು ಆಸ್ಪತ್ರೆಗಳಿಗೆ ವಾಂತಿ ಮತ್ತು ಅತಿಸಾರ ರೋಗ ಲಕ್ಷಣಗಳೊಂದಿಗೆ ಹಲವು ಜನರು ದಾಖಲಾಗುತ್ತಿದ್ದಾರೆ. ನಡುವೆಆರ್‌ಎಸ್‌ (ORS)ಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಜನರು ಔಷಧಾಲಯಗಳಿಂದಷ್ಟೇ ಅಲ್ಲದೆ, ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕವೂ ಒಆರ್‌ಎಸ್‌ಗಳನ್ನು ಖರೀದಿ ಮಾಡುತ್ತಿದ್ದಾರೆ.

ಮಕ್ಕಳ ತಜ್ಞ ಮತ್ತು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಡಾ.ನಾರಾಯಣಸ್ವಾಮಿ ಮಾತನಾಡಿ, “ಕಳೆದ ಕೆಲವು ವಾರಗಳಿಂದ ಸಾಕಷ್ಟು ಜನರು ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 23 ಮಕ್ಕಳು ಮತ್ತು 20 ವಯಸ್ಕರು ದಾಖಲಾಗಿದ್ದಾರೆ. ಸಮಸ್ಯೆಯು ಎಲ್ಲ ವಯೋಮಾನದವರಿಗೂ ಸಮಾನ್ಯವಾಗಿ ಪರಿಣಾಮ ಬೀರುತ್ತದೆ. ಆದರೆ, ಚಿಕ್ಕಮಕ್ಕಳು, ದೀರ್ಘಕಾಲಿಕ ರೋಗಳಿಂದ ಬಳಲುತ್ತಿರುವವರು ಹಾಗೂ ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಪಮಾನ ಹೆಚ್ಚಾದಂತೆ ಬೆವರುವಿಕೆ ಹೆಚ್ಚಾಗುತ್ತಿದೆ. ಇದರಿಂದ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ. ಸಮಸ್ಯೆಯಿಂದ ದೂರ ಉಳಿಯಲು ಜನರು ಹೆಚ್ಚೆಚ್ಚು ನೀರು ಹಾಗೂ ದ್ರವ ಪದಾರ್ಥಗಳನ್ನು ಸೇವನೆ ಮಾಡುವುದು ಮುಖ್ಯ” ಎಂದು ತಿಳಿಸಿದ್ದಾರೆ.

ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ಸಲಹೆಗಾರ ಡಾ.ನಿಧಿನ್ ಮೋಹನ್, “ವಯಸ್ಸಾದ ವ್ಯಕ್ತಿಗಳು, ವಿಶೇಷವಾಗಿ ಬೆವರು ಸ್ರವಿಸುವಿಕೆಯನ್ನು ಕಡಿಮೆ ಮಾಡುವ ಔಷಧಿಗಳನ್ನು ಸೇವಿಸುವವರು ಹಾಗೂ ಆಗಾಗ್ಗೆ ಆಲ್ಕೊಹಾಲ್ ಸೇವಿಸುವವರು ಶಾಖದ ಹೊಡೆತಕ್ಕೆ ಹೆಚ್ಚು ಒಳಗಾಗುತ್ತಾರೆಎಂದು ಹೇಳಿದ್ದಾರೆ.

“ದೇಹದ ಉಷ್ಣತೆಯ ಹೆಚ್ಚಳ, ಹೆಚ್ಚಿದ ನಾಡಿ ಬಡಿತ ಮತ್ತು ಮಾನಸಿಕ ಗೊಂದಲದಂತಹ ರೋಗಲಕ್ಷಣಗಳನ್ನು ಇರುವ ರೋಗಿಗಳಿಗೆ ಕನಿಷ್ಠ 48 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಾಗಬೇಕು. ಅವರು ತೀವ್ರ ನಿಗಾದಲ್ಲಿರುವ ಅಗತ್ಯವಿರುತ್ತದೆ. ಏಕೆಂದರೆ, ತೀವ್ರ ಶಾಖದ ಹೊಡೆತವು ಮೂತ್ರಪಿಂಡಗಳಿಗೆ ಹಾನಿ ಮತ್ತು ಇತರ ಪ್ರಮುಖ ಅಂಗಗಳಿಗೆ ಹಾನಿಗೆ ಕಾರಣವಾಗಬಹುದುಎಂದು ಡಾ. ಮೋಹನ್ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ : ಹಾಸ್ಟೆಲ್​​ನಲ್ಲಿ ಕನಿಷ್ಠ ಸ್ವಚ್ಛತೆಯ ಕೊರತೆ ಆರೋಪ

ಓಆರ್‌ಎಸ್‌ನ ಮಾರಾಟವು ನಗರದಲ್ಲಿ ಶೇ.60 ರಷ್ಟು ಏರಿಕೆಯಾಗಿದೆ. ಪ್ರತಿ ದಿನ ಕನಿಷ್ಠ ನಾಲ್ಕು ಸ್ಟಾಕ್ಗಳ ಪೈಕಿ 2 ಸ್ಟಾಕ್‌ಗಳು ಸಂಪೂರ್ಣವಾಗಿ ಮಾರಾಟವಾಗುತ್ತಿದೆ. ಇದಲ್ಲದೆ, ನಗರದಲ್ಲಿನ ಔಷಧಾಲಯಗಳು ಓಆರ್‌ಎಸ್‌ಮಾರಾಟದಲ್ಲಿ ಹೆಚ್ಚಳವನ್ನು ಕಂಡಿವೆ ಎಂದು ಆನ್ಲೈನ್ ವಿತರಣಾ ವೇದಿಕೆಗೆ ಸಂಬಂಧಿಸಿದ ಮಾರಾಟ ಕಾರ್ಯನಿರ್ವಾಹಕರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...