ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

Date:

“ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಜನರ ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ” ಎಂದು ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ. ಸೋಮಶೇಖರ್ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ಎಐಡಿವೈಒ ಆಯೋಜಿಸಿದ್ದ ‘ರಾಜ್ಯಮಟ್ಟದ ಬರಹಗಾರರ ಕಮ್ಮಟ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ನಾನಾ ವಿಭಾಗದ ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟುವುದು ಒಂದೆಡೆಯಾದರೆ, ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಬರವಣಿಗೆಗಳ ಮೂಲಕ ಜನರಿಗೆ ತಲುಪಿಸುವುದು ಕೂಡಾ ಅಷ್ಟೇ ಅವಶ್ಯಕ. ಇಂದು ಅಂತಹ ಲೇಖನಗಳನ್ನು ಬರೆಯುವ ಲೇಖಕರ ಕೊರತೆಯನ್ನು ನಾವು ಕಾಣುತ್ತಿದ್ದೇವೆ” ಎಂದರು.

“ಉತ್ತಮ ಬರಹಗಾರರನ್ನು ಸೃಷ್ಟಿಸಲು ಬರಹಗಾರರ ಕಮ್ಮಟ ಪ್ರಸ್ತುತವಾದದ್ದು ಹಾಗೂ ಅವಶ್ಯಕವಾದುದು. ಸೋವಿಯತ್ ರಷ್ಯಾದ ಸಮಾಜವಾದಿ ಕ್ರಾಂತಿಯ ಶಿಲ್ಪಿ ಲೆನಿನ್ ಅವರು ‘ಸಂಘಟನೆಯ ಮುಖ ಪತ್ರಿಕೆಯೇ ಓರ್ವ ಸಂಘಟನಾಕಾರನಿದ್ದಂತೆ’ ಎಂದಿದ್ದರು. ಅವರ ಮಾತಿನ ಸಾರವನ್ನು ಗ್ರಹಿಸಿ, ಸಾಮಾಜಿಕ ಬದ್ಧತೆಯೊಂದಿಗೆ ಯುವ ಬರಹಗಾರರನ್ನು ರೂಪಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಡಿವೈಓ ರಾಷ್ಟ್ರ ಉಪಾಧ್ಯಕ್ಷ ಡಾ. ಜಿ.ಎಸ್. ಕುಮಾರ್ ಮಾತನಾಡಿ, “ಎಐಡಿವೈಓ ದೇಶದಾದ್ಯಂತ ಯುವಜನರ ಜ್ವಲಂತ ಸಮಸ್ಯೆಗಳಾದ ನಿರುದ್ಯೋಗ, ಸಾಂಸ್ಕೃತಿಕ ಅಧಃಪತನಗಳ ವಿರುದ್ಧ ಯುವಜನ ಚಳುವಳಿಯನ್ನು ಸಂಘಟಿಸುತ್ತಿದೆ. ಜೊತೆಗೆ, ಯುವಜನರ ನಡುವೆ ಸದಭಿರುಚಿಯ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಸಮಾಜದಲ್ಲಿನ ಸಮಸ್ಯೆಗಳ ಕುರಿತು, ಯುವಜನರು ಎದುರಿಸುತ್ತಿರುವ ನಾನಾ ಸಮಸ್ಯೆಗಳ ಕುರಿತು ಲೇಖನಗಳನ್ನು ಬರೆಯಲು, ಸಮಾಜದಲ್ಲಿ ಉನ್ನತ ನೀತಿ ನೈತಿಕತೆಯನ್ನು ಬಿತ್ತಲು ಅವಶ್ಯಕತೆಯಿರುವ ಲೇಖನಗಳನ್ನು ಬರೆಯುವುದನ್ನು ಶಿಬಿರಾರ್ಥಿಗಳು ಪರಿಣಿತಿ ಹೊಂದಲಿ. ಸಾಮಾಜಿಕ ಬದ್ಧತೆಯೊಂದಿಗೆ ಸಾಹಿತ್ಯವನ್ನು ಒಂದು ಸಾಮಾಜಿಕ ಪರಿವರ್ತನೆಯ ಮಾಧ್ಯಮವಾಗಿ ಬಳಸಲು ಈ ಕಮ್ಮಟ ಸಹಕಾರಿಯಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಇಂಧನ ದರ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟ; ಖಾಸಗಿ ಸಾರಿಗೆ ಸಂಘಟನೆಗಳ ಎಚ್ಚರಿಕೆ

ಎಐಡಿವೈಓ ರಾಜ್ಯ ಉಪಾಧ್ಯಕ್ಷರಾದ ಚನ್ನಬಸವ ಜಾನೇಕಲ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ವೇದಿಕೆಯಲ್ಲಿದ್ದರು. ರಾಜ್ಯದ ವಿವಿಧ ಜಿಲ್ಲೆಗಳ 50ಕ್ಕೂ ಹೆಚ್ಚು ಯುವ ಬರಹಗಾರರು ಈ ಬರಹಗಾರರ ಕಮ್ಮಟದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...