ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ.

ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಚಿಕಿತ್ಸೆಗಾಗಿ ವೆಂಕಟೇಶ್ ಐಸಿಯುನಲ್ಲಿ ಇರುವ ವೇಳೆ, ಆಸ್ಪತ್ರೆಯ ವಾರ್ಡ್‌ಬಾಯ್‌ ಧನಂಜಯ್ ಎಂಬಾತ ಆತನಿಗೆ ಹಿಗ್ಗಾಮುಗ್ಗಾ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ರೋಗಿ ಚಿಕಿತ್ಸೆ ಪಡೆಯುವ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಗಾಯಾಳು ವೆಂಕಟೇಶ್ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಷ ಕುಡಿದು ನಮ್ಮವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ರೋಗಿ ಕೂಗಾಡುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಧನಂಜಯ ಎಂಬಾತ ನಮ್ಮವ ಬಾಯಿ ಹಾಗೂ ಮೂಗಿನ ಮೇಲೆ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಪೋಲಿಸರಿಗೂ ಸಹ ದೂರು ನೀಡಿದ್ದೇವೆ” ಎಂದು ರೋಗಿ ಸಂಬಂಧಿ ಲಲಿತ ಹೇಳಿದ್ದಾರೆ.

“ಮೇ 24ರಂದು ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ವೈದ್ಯರಿಗೂ ಸಹ ಮಾಹಿತಿ ನೀಡಿದ್ದೇವೆ. ಹಲ್ಲೆ ಮಾಡಿದ ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುವಂತೆ ಹೇಳಿದರೆ, ಅದು ವರ್ಕ್ ಆಗುತ್ತಿಲ್ಲ. ಮೊದಲು ರೋಗಿ ಗುಣ ಆಗುವ ಕಡೆ ಗಮನವಹಿಸಿ ಅಂತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

“ವಿಷ ಕುಡಿದ ಹಿನ್ನೆಲೆ ರೋಗಿಯೂ ಮೊದಲಿಗೆ ಆನೇಕಲ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಕೆ.ಸಿ.ಜನರಲ್ ಆಸ್ಪತ್ರೆಗೆ ಮೇ 22ರಂದು ಬಂದಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಸೂಕ್ಷ್ಮ ಚಿಕಿತ್ಸೆ ಕೊಡುವಾಗ ರೋಗಿಗಳು ಒಮ್ಮೊಮ್ಮೆ ವ್ಯತಿರಿಕ್ತವಾಗಿ ವರ್ತಿಸುತ್ತಾರೆ. ಅದರಲ್ಲೂ ಅವರು ತೀವ್ರ ನಿಗಾ ಘಟಕದಲ್ಲಿ ಇರುವುದರಿಂದ ಅವರನ್ನು ಕಂಟ್ರೋಲ್ ಮಾಡುವುದು ಕಷ್ಟ” ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಇಂದಿರಾ ಕಬಾಡೆ ಹೇಳಿದ್ದಾರೆ.

“ನಮ್ಮ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ನಂಬುವುದಕ್ಕೆ ಸಾಧ್ಯ ಇಲ್ಲ. ಸಿಸಿಟಿವಿ ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅವರ ಬಳಿ ಹೋಗಿ ಸಮಸ್ಯೆ ಕೇಳಿದ್ದೇನೆ. ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂಬುವುದು ಸುಳ್ಳು. ಸಿಬ್ಬಂದಿ ಹಲ್ಲೆ ಮಾಡಿದ್ದರೇ ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮೇಲ್ನೋಟಕ್ಕೆ ಹಲ್ಲೆ ಆಗಿದೆ ಎಂದು ಕಾಣಿತ್ತಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...