ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

Date:

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ ಆತನನ್ನು ಅಪಹರಿಸಿ ಹಲ್ಲೆ ಮಾಡಿ ಹಣ ಎಗರಿಸಿದ್ದ ಖದೀಮರನ್ನು ಇದೀಗ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅಲೋಕ್ ರಾಣಾ ಅಪಹರಣಕ್ಕೊಳಗಾದವರು. ಇವರು ಆಸ್ಟ್ರೇಲಿಯಾ ಪ್ರಜೆ. ಇವರು ಮೋನಿಶ್​​​, ಲೋಕೇಶ್​​​, ಕಿಶೋರ್​​, ರವಿ, ದಿಲೀಪ್​​​​​​​​ ಹಾಗೂ ಸತೀಶ್​​​​ ಬಂಧಿತರು. ಆರೋಪಿ ಮೋನಿಶ್ ಟ್ಯಾಟೋ ಹಾಕುವ ಕೆಲಸ ಮಾಡುತ್ತಿದ್ದನು. ಇತರ ಆರೋಪಿಗಳು ಬಟ್ಟೆ ವ್ಯಾಪಾರ, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು.

ಆಸ್ಟ್ರೇಲಿಯಾ ಪ್ರಜೆಯಾಗಿರುವ ಅಲೋಕ್ ರಾಣಾ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನೆಲೆಸಿರುವ ತನ್ನ ಅಣ್ಣ ಅಮಿತ್​​ ರಾಣಾನನ್ನು ಭೇಟಿಯಾಗಲು ನಗರಕ್ಕೆ ಬಂದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡ್ರಗ್ಸ್‌ಗೆ ಅಡಿಕ್ಟ್‌ ಆಗಿದ್ದ ಅಲೋಕ್ ರಾಣಾ ಡಾರ್ಕ್​ ವೆಬ್​ ಮೂಲಕ ಮೊನೀಶ್ ಬಳಿ ಡಗ್ಸ್​​ ಖರೀದಿಸುತ್ತಿದ್ದನು. ಅಲ್ಲದೇ, ಆರೋಪಿ ಮೊನೀಶ್ ಜತೆಗೆ​ ಸಂಪರ್ಕ ಕೂಡ ಹೊಂದಿದ್ದನು.

ಬೆಂಗಳೂರಿಗೆ ಬಂದ ನಂತರ ಅಲೋಕ್ ರಾಣಾ ಮೋನಿಶ್​ನಿಂದ ಐದು ಬಾರಿ ಗಾಂಜಾ ಖರೀದಿ ಮಾಡಿದ್ದನು. ಇದರಿಂದ ಈತನ ಬಳಿ ಹೆಚ್ಚು ಹಣ ಇರಬಹುದು ಎಂದು ಭಾವಿಸಿದ್ದ ಮೋನಿಶ್ ತನ್ನ ಸಹಚರರೊಂದಿಗೆ ಸೇರಿ ಅಲೋಕ್​ನನ್ನು ಅಪಹರಣ ಮಾಡಿದ್ದಾರೆ.

ಅಲೋಕ್ ರಾಣಾನನ್ನು ಅಪಹರಿಸಿ ಆತನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಆತನ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹78 ಸಾವಿರ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಜತೆಗೆ, ಆತನ ಅಣ್ಣ ಅಮಿತ್ ಖಾತೆಯಿಂದ ₹40 ಸಾವಿರ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯ; ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ ಕೊಲೆ

ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಅಲೋಕ್ ರಾಣಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಡ್ರಗ್ಸ್​ ವಿಷಯ ಬಹಿರಂಗವಾಗುತ್ತದೆ ಎಂದು ತಿಳಿದು 15 ದಿನಗಳ ಬಳಿಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರು ಆಗ್ನೇಯ ಡಿಸಿಪಿ ಬಾಬಾಗೆ ಮಾಹಿತಿ ನೀಡಲಾಗಿದೆ. ಬಳಿಕ, ಬೊಮ್ಮನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...