ಬೆಂಗಳೂರು | ಆಗಸ್ಟ್ 15ರಂದು ಕೋರಮಂಗಲ ರಾಜಕಾಲುವೆ ಉದ್ಘಾಟನೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೋರಮಂಗಲ ಕಣಿವೆ ಜಲಮಾರ್ಗ (ರಾಜಕಾಲುವೆ) ಯೋಜನೆಯನ್ನು ಆಗಸ್ಟ್ 15 ರಂದು ಪೂರ್ಣಗೊಳಿಸಲು ಮುಂದಾಗಿದೆ. ಇದೀಗ, ಈ ಪ್ರದೇಶ ಸಂಪೂರ್ಣವಾಗಿ ಕೊಳಚೆ ಮುಕ್ತವಾಗಿದೆ.

ಕೆ.ಆರ್.ಮಾರುಕಟ್ಟೆಯಲ್ಲಿ ಕಣಿವೆಯ ಮೇಲ್ದಂಡೆಯಲ್ಲಿರುವ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಒಂದು ತಿಂಗಳಲ್ಲಿ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿದೆ. ಆದರೆ, ಪಾಲಿಕೆಯೂ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ ಇನ್ನಿತರ ಕಾರ್ಯಗಳನ್ನು ಪೂರ್ಣಗೊಳಿಸಲು ಯೋಜಿಸಿದೆ. ಆದರೂ, ಈ ಯೋಜನೆಯನ್ನು ಪೂರ್ಣ ಮಾಡಲು ಇದು ಮೂರನೇ ಗಡುವಾಗಿದೆ.

“ಕಣಿವೆಗೆ 97% ರಷ್ಟು ಒಳಚರಂಡಿ ನೀರು ಪೋಲಾಗುವುದನ್ನು ಕಡಿಮೆ ಮಾಡಿದ್ದೇವೆ. ನಾಲೆಯಲ್ಲಿ ಕಪ್ಪು ನೀರು ಹರಿಯುವುದನ್ನು ನಾಗರಿಕರು ಗಮನಿಸಿದರೆ, ಈ ಯೋಜನೆ ಯಶಸ್ವಿಯಾಗುವುದಿಲ್ಲ. ಆದ್ದರಿಂದ, ಕೊಳಚೆ ನೀರನ್ನು ನೇರವಾಗಿ ಕಣಿವೆಗೆ ಬಿಡುತ್ತಿರುವ ಎಲ್ಲ ಖಾಸಗಿ ಸಂಸ್ಥೆಗಳನ್ನು ಗುರುತಿಸಲು ಬಿಎಬ್ಲೂಎಸ್‌ಎಸ್‌ಬಿ ಎಂಜಿನಿಯರ್‌ಗಳಿಗೆ ಹೇಳಲಾಗಿದೆ” ಎಂದು ಬಿಬಿಎಂಪಿಯ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

9.6 ಕಿ.ಮೀ ಕೋರಮಂಗಲದ ಕಣಿವೆಯನ್ನು ಗುಜರಾತ್‌ನ ಸಬರಮತಿ ನದಿಯ ಮುಂಭಾಗದಂತೆಯೇ ಜಲಾಭಿಮುಖವಾಗಿ ಪರಿವರ್ತಿಸುವ ಭರವಸೆಯೊಂದಿಗೆ ಬಿಬಿಎಂಪಿಯು 2021ರಲ್ಲಿ ಕೆ-100 ಕಣಿವೆಗೆ ₹175 ಕೋಟಿ ವೆಚ್ಚದ ಯೋಜನೆಯನ್ನು ಪ್ರಾರಂಭ ಮಾಡಿತ್ತು. ಗುತ್ತಿಗೆದಾರರು 10 ತಿಂಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಬೇಕು ಎಂದು ಹೇಳಲಾಗಿತ್ತು. ಆದರೆ, ನೀರೀಕ್ಷಯಂತೆ ಯೋಜನೆ ಪೂರ್ಣವಾಗಿರಲಿಲ್ಲ.

ಕೆ.ಆರ್.ಮಾರುಕಟ್ಟೆಯಲ್ಲಿ ಎಸ್‌ಟಿಪಿ ಸಿದ್ಧವಾಗಿದೆ. ವಿದ್ಯುತ್ ತನಿಖಾಧಿಕಾರಿಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾವರಕ್ಕೆ ಅನುಮೋದನೆ ನೀಡಿದೆ. ಸರಬರಾಜು ಮಾರ್ಗ ಸಿದ್ಧವಾದ ನಂತರ ಸಂಸ್ಕರಣಾ ಸೌಲಭ್ಯವನ್ನು ಕಾರ್ಯಗತಗೊಳಿಸುತ್ತೇವೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಸ್ಕರಿಸಿದ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಕಣಿವೆಗೆ, ಇದುವರೆಗೆ ಎಲ್ಲ ಮೂಲೆಗಳಿಂದ ಕೊಳಚೆನೀರು ತುಂಬಿತ್ತು. ತಡೆಗೋಡೆಗಳು ಮತ್ತು ಪಾದಚಾರಿ ಮಾರ್ಗಗಳ ನಿರ್ಮಾಣ, ಕೋರ್ ಸಿವಿಲ್ ಕಾಮಗಾರಿಗಳು ಸಹ ಸುಮಾರು 85% ಪೂರ್ಣಗೊಂಡಿವೆ. ಕೋರಮಂಗಲದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಳಿ ಒತ್ತುವರಿ ತೆರವು ಮಾಡುವಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದ್ದೇವೆ. ಆದರೆ, ಉನ್ನತ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸಮಸ್ಯೆಯನ್ನು ಪರಿಹರಿಸಲಾಗಿದೆ. ಆಗಸ್ಟ್ 15 ರೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಪ್ರಹ್ಲಾದ್ ಹೇಳಿದರು.

‘ಕೆ-100 ರಾಜಕಾಲುವೆ’ ಯೋಜನೆಯಡಿ ರಾಜಕಾಲುವೆಗಳು ಹರಿಯುವ ಪ್ರದೇಶಗಳ ಅಭಿವೃದ್ಧಿಗೆ ರೂಪರೇಷೆ ರೂಪಿಸಲಾಗಿತ್ತು. ಕೆ.ಆರ್‌. ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆಯನ್ನು ಜಲಮಾರ್ಗ ಯೋಜನೆಗಾಗಿ ಅಭಿವೃದ್ಧಿಗೊಳಿಸುವ ಮತ್ತು ಸುಂದರೀಕರಣಗೊಳಿಸುವ ಯೋಜನೆಗೆ ಚಾಲನೆ ನೀಡಲಾಗಿತ್ತು.

ಬೆಂಗಳೂರು ನಗರದಲ್ಲಿ ನಾಲ್ಕು ಬೃಹತ್‌ ಮಳೆ ರಾಜಕಾಲುವೆಗಳಿದ್ದು, ಇವುಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಇಂತಹ ರಾಜಕಾಲುವೆಗಳನ್ನು ಹಲವಾರು ನಗರ ಪಟ್ಟಣಗಳಲ್ಲಿ ಜಲಮಾರ್ಗವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಕೋರಮಂಗಲ ರಾಜಕಾಲುವೆಯನ್ನು ಸಹ ಜಲಮಾರ್ಗವಾಗಿ ಕೆ.ಆರ್‌.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗೆ ಪರಿವರ್ತಿಸಲು ಉದ್ದೇಶಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 3 ವರ್ಷಗಳ ಬಳಿಕ ಎಲ್‌ಇಡಿ ದೀಪ ಅಳವಡಿಕೆ ಯೋಜನೆಗೆ ಮರುಜೀವ

ಜಲಮಾರ್ಗದ ಯೋಜನೆಯಲ್ಲಿ ನಾಗರಿಕ ಒಳಚರಂಡಿ ಕೈಗಾರಿಕಾ ತ್ಯಾಜ್ಯ ನೀರನ್ನು ರಾಜಕಾಲುವೆಯಿಂದ ಬೇರ್ಪಡಿಸಿ ಪರಿಸರ ಹಾನಿಯನ್ನು ನಿಯಂತ್ರಿಸುವುದು. ಕಲುಷಿತಗೊಂಡಿರುವ ರಾಜಕಾಲುವೆಯ ತಳಭಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಇಂಗುವಂತೆ ವಿನ್ಯಾಸಗೊಳಿಸುವುದು. ಪಾದಚಾರಿ ಮಾರ್ಗವನ್ನು ಚರ್ಚ್‌ ಸ್ಟ್ರೀಟ್‌ ಮಾದರಿಯಲ್ಲಿ ನಿರ್ಮಿಸಿ ಒಂದು ನಗರ ಪ್ರದೇಶದಿಂದ ಮತ್ತೊಂದು ನಗರ ಪ್ರದೇಶಕ್ಕೆ ಸುಲಲಿತವಾಗಿ ಕಾಲ್ನಡಿಗೆಯಲ್ಲಿ ತೆರಳುವಂತೆ ಮಾಡುವುದು ಇದರ ಉದ್ದೇಶವಾಗಿತ್ತು.

ವರ್ಷದ 365 ದಿನವು ಜಲಮಾರ್ಗದಲ್ಲಿ ಶುದ್ಧೀಕರಿಸಿದ ನೀರು ಹರಿಯುವಂತೆ ಮಾಡಲು 5 ಎಂಎಲ್‌ಡಿ ಎಸ್‌ಟಿಪಿಯನ್ನು ಸ್ಥಾಪಿಸುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನ, ಕಾರಂಜಿ, ಶೌಚಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...