ಬೆಂಗಳೂರು | ಮಳೆಗಾಲದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಮರ ಕಟಾವು ತಂಡಗಳು

Date:

ಬೆಂಗಳೂರಿನಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರಿಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿದೆ.

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಧರೆಗುರುಳುವ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ ಮರ ಕಟಾವು ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರಗುರುಳಿದ ಮರಗಳನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸಲಾಗುತ್ತಿದೆ” ಎಂದು ಪಾಲಿಕೆ ತಿಳಿಸಿದೆ.

ಪಾಲಿಕೆಯ ನಿಯಂತ್ರಣ ಕೊಠಡಿಗಳಿಗೆ ಮರ, ಮರದ ರೆಂಬೆ/ಕೊಂಬೆಗಳು ಬಿದ್ದಂತಹ ದೂರುಗಳು ಬಂದ ಕೂಡಲೇ ಆ ದೂರುಗಳನ್ನು ಆಯಾ ವಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಿದ್ದಾರೆ. ಅನಂತರ ಅಧಿಕಾರಿಗಳು ಮರ, ಮರದ ರೆಂಬೆ/ಕೊಂಬೆ ಬಿದ್ದಿರುವ ಸ್ಥಳಕ್ಕೆ ಮರ ಕಟಾವು ತಂಡಗಳನ್ನು ಕಳುಹಿಸಿ ಧರೆಗುರುಳಿದ ಮರಗಳನ್ನು ಕಟಾವು ಮಾಡಿ ನಾಗರಿಕರು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಲಿಕೆ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 28 ಮರ ಕಟಾವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದರ ಜತೆಗೆ ತುರ್ತಾಗಿ ಮರಗಳನ್ನು ತೆರವುಗೊಳಿಸುವ ಸಲುವಾಗಿ ಹೆಚ್ಚುವರಿಯಾಗಿ 11 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ. ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರೆ ಸಲಕರಣೆಗಳಿರಲಿವೆ. ಜೊತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗಾಗಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಮಳೆಗಾಲದಲ್ಲಿ ಬಿದ್ದಂತಹ ಮರಗಳನ್ನು ತೆರವುಗೊಳಿಸುವ ಸಲುವಾಗಿ ಈ ಬಾರಿ ವಿನೂತನವಾಗಿ 5 ಬೈಕ್(ದ್ವಿಚಕ್ರ ತಂಡ) ತಂಡಗಳನ್ನು ನಿಯೋಜಿಸಿಕೊಳ್ಳಲಾಗಿದೆ. ಅದರಂತೆ ರಸ್ತೆ ಮೇಲೆ ಬಿದ್ದಂತಹ ಅಥವಾ ತುರ್ತಾಗಿ ಮರಗಳನ್ನು ತೆಗೆಯಬೇಕಾದ ಸ್ಥಳಗಳಿಗೆ ಬೈಕ್ ತಂಡಗಳು ಕೊಂಬೆ ಕಟಾವು ಯಂತ್ರವನ್ನು ತೆಗೆದುಕೊಂಡು ಸ್ಥಳಕ್ಕೆ ತೆರಳಿ ಮರವನ್ನು ಕಟಾವು ಮಾಡಿ ತೆರವುಗೊಳಿಸಲಿದ್ದಾರೆ.

ಮಳೆಗಾಲದ ವೇಳೆ ಬೃಹತ್ ಮರಗಳು ಬಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ ಪಾಲಿಕೆ ಅರಣ್ಯ ವಿಭಾಗವು 2 ಕ್ರೇನ್ ಹಾಗೂ 2 ಜೆಸಿಬಿಗಳನ್ನು ನಿಯೋಜನೆ ಮಾಡಿಕೊಂಡಿದೆ. ಅಲ್ಲದೆ, ಅದನ್ನು ಸಾಗಾಣೆ ಮಾಡುವ ಸಲುವಾಗಿ 8 ಟ್ರ‍್ಯಾಕ್ಟರ್‌ಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಎಎಸ್‌ ಅಧಿಕಾರಿಯ ಪತ್ನಿ ಅನುಮಾನಾಸ್ಪದ ಸಾವು

ಧರೆಗುಳಿದ ಮರಗಳನ್ನು ಕಟಾವು ಮಾಡಿದ ನಂತರ ಮರದ ದಿಮ್ಮಿಗಳು, ರೆಂಬೆ, ಕೊಂಬೆಗಳ ವಿಲೇವಾರಿಗಾಗಿ ವಲಯಕ್ಕೆ ಒಂದರಂತೆ ಆಯಾ ವಲಯಗಳಲ್ಲಿ 8 ಡಂಪಿಂಗ್ ಯಾರ್ಡ್‌ಗಳಿದ್ದು, ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ 6 ಕಡೆ ಡಂಪಿಂಗ್ ಯಾರ್ಡ್‌ಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಮರದ ದಿಮ್ಮಿ, ರೆಂಬೆ, ಕೊಂಬೆಗಳನ್ನು ವಿಲೇವಾರಿ ಮಾಡಲಾಗುತ್ತದೆ.

ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಮೇ 6 ರಿಂದ ಮೇ 10 ರವರೆಗೆ 271 ಮರ ಹಾಗೂ 483 ರೆಂಬೆ, ಕೊಂಬೆಗಳು ಧರೆಗುರುಳಿದಿವೆ. ಮರ ಕಟಾವು ತಂಡಗಳ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಗರಿಕರಿಂದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...