ಬೆಂಗಳೂರು | ಲೌಡ್ ಸ್ಪೀಕರ್ ಜಗಳ; ಐವರ ಬಂಧನ

Date:

ಬೆಂಗಳೂರಿನ ನಗರತ್​ಪೇಟೆಯ ಮೊಬೈಲ್ ಶಾಪ್‌ವೊಂದರಲ್ಲಿ ಹಾಕಲಾಗಿದ್ದ ಸ್ಪೀಕರ್‌ನ ಶಬ್ದ ಜಾಸ್ತಿಯಾಗಿದೆ ಎಂದು ಗಲಾಟೆ ನಡೆದಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆಯ ಪೊಲೀಸರು ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳಾದ ಸುಲೇಮಾನ್, ತರುಣ್, ಶನವಾಜ್, ರೋಹಿತ್ ಹಾಗೂ ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ನಗರತ್​ಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮಾ.17ರ ಸಾಯಂಕಾಲ ಕೃಷ್ಣ ಟೆಲಿಕಾಂ ಅಂಗಡಿ ಮಾಲೀಕ ಮುಕೇಶ್ ಎಂಬಾತನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಗೆ ಸಂಬಂಧಿಸಿದಂತೆ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಲೌಡ್ ಸ್ಪೀಕರ್ ಜೋರಾಗಿ ಇಟ್ಟಿದ್ದಕ್ಕೆ ಯುವಕರ ಗುಂಪು ನನ್ನ ಮೇಲೆ ಹಲ್ಲೆ ಮಾಡಿದೆ’ ಎಂದು ದೂರುದಾರ ಮುಕೇಶ್ ಆರೋಪಿಸಿದ್ದಾರೆ.

ಆತನ ದೂರಿನ ಮೇರೆಗೆ ಸುಲೇಮಾನ್, ಶಾನವಾಝ್, ರೋಹಿತ್, ದಾನಿಶ್, ತರುಣಾ ಅಲಿಯಾಸ್ ದಡಿಯ ಹಾಗೂ ಇತರರ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ 1860ರ ಅಡಿಯಲ್ಲಿ ಬರುವ ಕಲಂ 506, 504, 149, 307, 323 8 324 ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವು ಮೊಬೈಲ್ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳಕ್ಕೆ ಕೋಮು ಬಣ್ಣ ಬಳಿಯಲೆತ್ನಿಸಿದ ಬಿಜೆಪಿ; ಎಫ್‌ಐಆರ್‌ನಲ್ಲಿ ಇರೋದೇನು?

ಈ ಪ್ರಕರಣಕ್ಕೆ ಕೋಮು ಬಣ್ಣ ಬಳೆಯಲು ಯತ್ನಿಸಿದ ಬಿಜೆಪಿ, ಕಾಂಗ್ರೆಸ್ ಸರ್ಕಾರ ವಿರುದ್ಧ ಹರಿಹಾಯ್ದಿದೆ. ಜೋರಾದ ಧ್ವನಿಯಲ್ಲಿ ಹಾಡು ಹಾಕಿದ್ದಕ್ಕೆ ಗಲಾಟೆ ನಡೆದಿದ್ದನು. ಯುವಕ ಪೂಜೆ ಮಾಡುವ ಸಮಯದಲ್ಲಿ ಹನುಮಾನ ಚಾಲೀಸ್‌ ಹಾಕಿದ್ದಕ್ಕೆ ಮತಾಂಧರ ಗುಂಪೊಂದು ಯುವಕನ ಮೇಲೆ ಹಲ್ಲೆ ಮಾಡಿದೆ ಎಂದು ಪ್ರಕರಣವನ್ನು ತಿರುಚಿದೆ.

ಅಲ್ಲದೇ, ಸ್ಥಳಕ್ಕೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆಯಲ್ಲಿ ಎಲ್ಲ ಕಡೆಯೂ ಹನುಮಾನ್ ಚಾಲೀಸಾ ಮತ್ತು ಹನುಮ ಧ್ವಜ ಹಾಕುವಂತೆ ಕರೆ ನೀಡಿ ಕೋಮು ಧ್ವೇಷ ಹರಡಲು ಯತ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...