ಬೆಂಗಳೂರು | ಮಾರ್ಚ್ ತಿಂಗಳ ನಂತರ ಅತಿ ಕಡಿಮೆ ತಾಪಮಾನ ದಾಖಲು

Date:

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿತ್ತು. ಬಿಸಿಲಿನ ತಾಪಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಬೇಸತ್ತಿದ್ದರು. ಕಳೆದ ಎರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ವೇಳೆ ಮಳೆಯಾಗುತ್ತಿದೆ. ಸುಮಾರು ಎರಡು ತಿಂಗಳ ಕಾಲ ವಿಪರೀತ ಬಿಸಿಲಿನ ವಾತಾವರಣಕ್ಕೆ ಬೇಸತ್ತಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಜತೆಗೆ, ಬೆಂಗಳೂರಿನಲ್ಲಿ ಮಾರ್ಚ್‌ನಿಂದ ಕನಿಷ್ಠ ತಾಪಮಾನ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ಪ್ರಕಾರ, “ಶುಕ್ರವಾರ ನಗರದಲ್ಲಿ ಗರಿಷ್ಠ ತಾಪಮಾನ 31.9 ಡಿಗ್ರಿ ಸೆಲ್ಸಿಯಸ್‌ನಲ್ಲಿದೆ. ಫೆಬ್ರುವರಿಯಲ್ಲಿ ಕೇವಲ ಒಂದೆರಡು ದಿನ ಮಾತ್ರ ತಾಪಮಾನ ಕಡಿಮೆಯಾಗಿತ್ತು. ತೀವ್ರವಾದ ಬಿಸಿ ವಾತಾವರಣದ ದೀರ್ಘಾವಧಿಯ ನಂತರ ಶುಕ್ರವಾರ ಗರಿಷ್ಠ 31.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿಗೆ ಮೇ ತಿಂಗಳ ಸರಾಸರಿಗಿಂತ 1.3 ಡಿಗ್ರಿ ಕಡಿಮೆಯಾಗಿದೆ” ಎಂದು ತಿಳಿಸಿದೆ.

“ಏಪ್ರಿಲ್‌ನಲ್ಲಿ ಮಳೆಯ ಕೊರತೆಯಿಂದ ಬೆಂಗಳೂರು ಅಧಿಕ ತಾಪಮಾನ ಅನುಭವಿಸಿತು. ಮಾರ್ಚ್‌ 22ರಂದು ಗರಿಷ್ಠ ತಾಪಮಾನ 32.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಏಪ್ರಿಲ್‌ನಲ್ಲಿ ದಾಖಲಿಸಿದ ಅತ್ಯಂತ ಕಡಿಮೆ ತಾಪಮಾನ ಎಂದರೆ ಅದು 34 ಡಿಗ್ರಿ ಸೆಲ್ಸಿಯಸ್ ಆಗಿದೆ ”ಎಂದು ಐಎಂಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆಯು ತಾಪಮಾನ ತಣ್ಣಗಾಗಲು ಸಹಾಯ ಮಾಡಿದೆ. ಮುಂದಿನ ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ” ಎಂದು ಐಎಂಡಿ ವಿಜ್ಞಾನ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಅವರು ಮುನ್ಸೂಚನೆಯನ್ನು ನೀಡಿದ್ದಾರೆ.

“ಈ ಮೇ ತಿಂಗಳಲ್ಲಿ ನಗರವು ಸಾಮಾನ್ಯ ಮಳೆಯನ್ನು ಪಡೆಯುತ್ತದೆ ಎಂದು ನಮಗೆ ವಿಶ್ವಾಸವಿದೆ. ನಿರೀಕ್ಷೆಯಂತೆ ಮಳೆ ಬಂದರೆ ತಾಪಮಾನ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 128.7 ಮಿಮೀ ಮಳೆಯಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

ಮೇ ತಿಂಗಳಲ್ಲಿ ಆರಂಭವಾದ ಮಳೆಯಿಂದಾಗಿ ತಾಪಮಾನವು ಗಮನಾರ್ಹವಾಗಿ ಕುಸಿತ ಕಂಡಿದೆ. ಮೇ 1ರಂದು 38.1 ಡಿಗ್ರಿ ಸೆಲ್ಸಿಯಸ್‌ನಿಂದ 10 ದಿನಗಳ ಅಂತರದಲ್ಲಿ 31.9 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ನಗರದಲ್ಲಿ ಮೇ 14ರವರೆಗೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯು ಹೆಚ್ಚಾಗಿ ಸಂಜೆ ಅಥವಾ ರಾತ್ರಿಯಲ್ಲಿ ಸಂಭವಿಸುತ್ತದೆ. ಮುಂದಿನ ಎರಡು ದಿನಗಳಲ್ಲಿ ತಾಪಮಾನವು ಕ್ರಮವಾಗಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಮೂಲ : ಡೆಕ್ಕನ್ ಹೆರಾಲ್ಡ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...