ಬೆಂಗಳೂರು | ಮಹಾಶಿವರಾತ್ರಿ ದಿನ ರೌಡಿಶೀಟರ್ ಕೊಲೆ: ಆರು ಜನರ ಬಂಧನ

Date:

ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ.

35 ವರ್ಷದ ರೌಡಿ ಶಿವ ಅಲಿಯಾಸ್ ವರ್ತೆ ಎಂಬಾತನನ್ನು ಸೆಂಟ್ರಲ್ ಬೆಂಗಳೂರಿನ ಕಾಟನ್‌ಪೇಟೆಯ ಅಂಜನಪ್ಪ ಗಾರ್ಡನ್ನ ಓಣಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಳೆಯ ದ್ವೇಷ ಹಾಗೂ ಸ್ಥಳೀಯ ಗ್ಯಾಂಗ್ಗಳ ನಡುವಿನ ಕಿತ್ತಾಟವೇ ಕೊಲೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಟೀಫನ್ ಅಲಿಯಾಸ್ ಸೈಲೆಂಟ್, ಚಂದ್ರಶೇಖರ್, ಸಿಂಬಾ ಅಲಿಯಾಸ್ ಸಿಂಬು, ಶೇಖರ್ ಅಲಿಯಾಸ್ ಡೋರಿ, ಮಣಿ ಮತ್ತು ಕಿರಣ ಬಂಧಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ಯೆಯಾದ ಶಿವ ಮಾರ್ಚ್ 8ರಂದು ರಾತ್ರಿ 9.30ರ ಸುಮಾರಿಗೆ ಪಾರ್ಟಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಹೊಂಚು ಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇನ್ನಿತರ ಮಾಹಿತಿ ಆಧರಿಸಿ ಶಂಕಿತರನ್ನು ಪತ್ತೆಹಚ್ಚಿದ್ದಾರೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಡಂಪಿಂಗ್ ಯಾರ್ಡ್‌ನಲ್ಲಿ ಸಿಗರೇಟ್‌ನಿಂದ ಹೊತ್ತಿಕೊಂಡ ಬೆಂಕಿ

“ಆರೋಪಿ ಚಂದ್ರಶೇಖರನ ಆಪ್ತ ಸ್ನೇಹಿತನಿಗೆ ಶಿವ ಥಳಿಸಿದ್ದನು. ಈ ಮಧ್ಯೆ, ಶಿವು ಸಿಂಬು ಮತ್ತು ಡೋರಿಯೊಂದಿಗೆ ಜಗಳವಾಡಿದ್ದನು. ಈ ಮೂವರು ವ್ಯಕ್ತಿಗಳು ಶಿವನೊಂದಿಗೆ ವೈಯಕ್ತಿಕ ದ್ವೇಷ ಹೊಂದಿದ್ದರು. ಇನ್ನೂ ಮೂವರನ್ನು ಕರೆತಂದು, ಸ್ಥಳ ಆಯ್ಕೆ ಮಾಡಿ ಹಬ್ಬದ ದಿನ ರಾತ್ರಿಯೇ ಕೊಲೆ ಮಾಡಿದ್ದಾರೆ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

2020ರಲ್ಲಿ ರೌಡಿಶೀಟರ್ ಪ್ರಭಾಕರ್ ಅಲಿಯಾಸ್ ಸಾಕ್ರೆ ಕೊಲೆ ಪ್ರಕರಣದಲ್ಲಿ ಶಿವನನ್ನು ಬಂಧಿಸಲಾಗಿತ್ತು. ಕೊಲೆಯ ನಂತರ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಶಿವ ವಿರುದ್ಧ ರೌಡಿ ಶೀಟ್ ತೆರೆಯಲಾಗಿತ್ತು. ಶಿವ ಜಾಮೀನಿನ ಮೇಲೆ ಹೊರಗಿದ್ದರೂ ವಿಚಾರಣೆ ಪ್ರಗತಿಯಲ್ಲಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...