ಬೆಂಗಳೂರು | ಮೀಟರ್ ಬಡ್ಡಿ ದಂಧೆ; ಸೈಕಲ್ ರವಿ ಸಹಚರರ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್‌ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ, ಮೀಟರ್ ಬಡ್ಡಿ ದಂಧೆಯಲ್ಲಿ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಉಮೇಶ್, ಸುರೇಶ್ ಹಾಗೂ ಮಂಜುನಾಥ್​ ಬಂಧಿತ ಆರೋಪಿಗಳು. ಈ ಬಗ್ಗೆ ಆರ್​ಆರ್​ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಂಗನಾಥ್ ಎಂಬುವವರು ಟ್ರಾವೆಲ್ಸ್‌ ವ್ಯವಹಾರಕ್ಕಾಗಿ ಆರೋಪಿ ಮಂಜುನಾಥ್ ಎಂಬುವವರ ಬಳಿ ₹23 ಲಕ್ಷ ಹಣವನ್ನು ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. ರಂಗನಾಥ್ ಅವರು ಪಡೆದ ₹23 ಲಕ್ಷ ಹಣವನ್ನ ಬಡ್ಡಿ ಸಮೇತ ಆರೋಪಿ ಮಂಜುನಾಥ್‌ಗೆ ಹಿಂದಿರುಗಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಆರೋಪಿ ಮಂಜುನಾಥ್, “ಮೀಟರ್ ಬಡ್ಡಿಗೆ ಹಣ ನೀಡಿದ್ದೇನೆ. ಇನ್ನು ₹5 ಲಕ್ಷ ಹಣ ಕೊಡಬೇಕು” ಎಂದು ಪಟ್ಟು ಹಿಡಿದಿದ್ದನು. ರಂಗನಾಥ್‌ ಹಣ ನೀಡಲು ನಿರಾಕರಿಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ನಾಮಫಲಕ ಬಳಸದ 18 ಉದ್ದಿಮೆಗಳು ತಾತ್ಕಾಲಿಕ ಬಂದ್

ಆರೋಪಿ ಮಂಜುನಾಥ್ ಈ ಸಾಲದ ಹಣವನ್ನು ವಸೂಲಿ ಮಾಡಿಕೊಡಲು ಸೈಕಲ್ ರವಿ ಸಹಚರನಾದ ಉಮೇಶ್​ಗೆ ಹೇಳಿದ್ದನು. ಉಮೇಶ್ ತನ್ನ ಸಹಚರನಾದ ಸುರೇಶ್ ಜತೆಗೆ ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದನು. ರೌಡಿಶೀಟರ್ ಉಮೇಶ್ ಹಾಗೂ ಸುರೇಶ್ ರಂಗನಾಥ್​​ಗೆ ಹಣ ಕೊಡುವಂತೆ ಜೀವ ಬೆದರಿಕೆ ಹಾಕಿದ್ದಾರೆ. ಹೊಸಕೆರೆಹಳ್ಳಿ ಉಮೇಶ್​ ರಂಗನಾಥನಿಗೆ ಅವಾಜ್ ಹಾಕಿರುವ ಆಡಿಯೋ ವೈರಲ್ ಆಗಿದೆ.

ಈ ವಿಚಾರ ತಿಳಿದ ಸಿಸಿಬಿ ಪೊಲೀಸರು ಉಮೇಶ್, ಸುರೇಶ್ ಹಾಗೂ ಮಂಜುನಾಥ್​​ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಆರೋಪಿಗಳ ವಿರುದ್ಧ ಆರ್​ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...