ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ

Date:

“ಬೆಂಗಳೂರಿನಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಜಲಮಂಡಳಿಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ನೀರು ಸರಬರಾಜು ಮಾತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿದರು.

ಮಾರ್ಚ್‌ 19ರಂದು ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ಎಸ್‌ಟಿಪಿ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನ ಕೆಂಗೇರಿ ಕೆರೆಗೆ ತುಂಬಿಸಲು ಕೈಗೊಂಡಿರುವ ಕಾಮಗಾರಿಯ ಸ್ಥಳ ಪರಿಶೀಲನೆ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ದುಬಾಸಿಪಾಳ್ಯ, ಹೊಸಹಳ್ಳಿಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ತುಂಬಿಸುವ ಸಲುವಾಗಿ ನಡೆಸುತ್ತಿರುವ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

“ಬೆಂಗಳೂರಿನಲ್ಲಿ ಅವ್ಯಾಹತವಾಗಿ ಅಂತರ್ಜಲದ ಬಳಕೆ ಆಗುತ್ತಿದೆ. ಸಮರ್ಪಕವಾದ ಮಳೆ ನೀರು ಮರುಪೂರಣ ವ್ಯವಸ್ಥೆ ಮಾಡದೇ ಇರುವ ಹಿನ್ನಲೆ, ಹೆಚ್ಚಿನ ಪ್ರಮಾಣದ ನೀರು ಒಳಚರಂಡಿಗೆ ಹರಿಯುತ್ತಿದೆ. ಇದು ಒಳಚರಂಡಿಯ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಅಲ್ಲದೇ, ಅಂತರ್ಜಲ ಮರುಪೂರಣ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಈ ಕೊರತೆಯನ್ನು ತಪ್ಪಿಸಲು ಹಾಗೂ ಭವಿಷ್ಯದ ನೀರಿನ ಅವಶ್ಯಕತೆಯನ್ನು ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅನಗತ್ಯ ನೀರು ಪೋಲು ತಡೆಗೆ ‘ವಾಟರ್‌ ಟ್ಯಾಪ್ ಮಾಸ್ಕ್‌’ ಅಳವಡಿಕೆ ಕಡ್ಡಾಯ: ಜಲಮಂಡಳಿ ಅಧ್ಯಕ್ಷ

ಸಂಸ್ಕರಿಸಿದ ನೀರನ್ನ ಕೆರೆಗಳಿಗೆ ತುಂಬಿಸುವ ಕಾರ್ಯ ಚುರುಕು ಗೊಳಿಸಲು ಸೂಚನೆ

“ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ನಮ್ಮ ಗುರಿಯಾಗಿದೆ. ಕೆಂಗೇರಿ ಕೆರೆ, ದುಬಾಸಿ ಪಾಳ್ಯ, ಹೊಸಹಳ್ಳಿ ಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ನೀರು ತುಂಬಿಸುವಂತಹ ಕಾಮಗಾರಿಗಳನ್ನು ಚುರುಕುಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...