ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಜತೆಗೆ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಹಲವು ವಾಹನ ಮಾಲೀಕರು ಸುತ್ತಾಡುತ್ತಿದ್ದಾರೆ. ಇದೀಗ, ಅವರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಬೆಂಗಳೂರು ಸಂಚಾರ ಪೊಲೀಸರು ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.

ಹೌದು, ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ಮನೆಗೆ ಇಷ್ಟು ದಿನ ಸಂಚಾರ ಪೊಲೀಸರು ತೆರಳಿ ದಂಡ ಪಾವತಿ ಮಾಡಿಸಿಕೊಳ್ಳುತ್ತಿದ್ದರು. ಇಲ್ಲವೇ ನೋಟಿಸ್‌ ನೀಡುತ್ತಿದ್ದರು. ಇನ್ನು ಮುಂದೆ ನೋಟಿಸ್ ಜತೆಗೆ ಕ್ಯೂ ಆರ್ ಕೋಡ್ ಕೂಡ ಮನೆ ಬಾಗಿಲಿಗೆ ಬರಲಿದೆ.

ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಸಂಪರ್ಕ ರಹಿತ ನಿಯಮ ಜಾರಿಯಡಿಯಲ್ಲಿ ದಾಖಲು ಮಾಡುವ ನಿಯಮ ಉಲ್ಲಂಘನಾ ಪ್ರಕರಣಗಳಿಗೆ ಆಟೋಮೇಷನ್ ಸೆಂಟರ್ ವಿಭಾಗದಿಂದ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಮಾಲೀಕರಿಗೆ, ಕಲಂ 133 ಮೋಟಾರು ವಾಹನ ಕಾಯ್ದೆ ರೀತ್ಯಾ ನೊಟೀಸ್‌ ಮುದ್ರಿಸಿ ಅಂಚೆ ಮುಖಾಂತರ ಕಳುಹಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ 1 ರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಮಾಲೀಕರಿಗೆ ಕಳುಹಿಸುವ 133 ನೋಟೀಸ್‌ನ ಬಲಭಾಗದಲ್ಲಿ ಕ್ಯೂ ಆರ್ ಕೋಡನ್ನು ಸಹ ಮುದ್ರಿಸಿ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕ್ಯೂಆರ್ ಕೋಡ್‌ ಮುಖಾಂತರ ನಿಯಮ ಉಲ್ಲಂಘನೆಯ ವಿಧ. ಉಲ್ಲಂಘನೆಯ ಸ್ಥಳ, ದಿನಾಂಕ, ಸಮಯ, ದಂಡದ ಮೊತ್ತದ ವಿವರಗಳ ಜತೆಗೆ ಬಹು ಮುಖ್ಯವಾಗಿ ಉಲ್ಲಂಘನೆಯ ಸಾಕ್ಷ್ಯಾಧಾರಿತ ಛಾಯಾಚಿತ್ರವನ್ನೂ ಸಹಾ ನೋಡಬಹುದಾಗಿದೆ.

ಉಲ್ಲಂಘನೆಯ ದಂಡದ ಮೊತ್ತವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲು ಆದೇ ಕ್ಯೂ ಆರ್ ಕೋಡ್‌ನಲ್ಲಿ ಪಾವತಿಯ ಲಿಂಕನ್ನೂ ಸಹ ಒದಗಿಸಲಾಗಿದೆ.

“ನಿಯಮ ಉಲ್ಲಂಘನೆಗಳಿಗೆ ಸಂಬಂಧಪಟ್ಟ ಯಾವುದೇ ಬಗ್ಗೆ ದೂರು/ವಿವಾದಗಳಿದ್ದಲ್ಲಿ btp.gov.inಗೆ ಲಾಗಿನ್ ಆಗುವ ಮೂಲಕ ಅಥವಾ ಕೆಎಸ್‌ಪಿ ಆಪ್‌ ಅನ್ನು ಪ್ಲೇಸ್ಟೋರ್‌ನಿಂದ ಡೌನ್‌ ಲೋಡ್ ಮಾಡಿಕೊಂಡು, ಉಲ್ಲಂಘನೆಯ ವಿವರಗಳನ್ನು ವೀಕ್ಷಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದಂಡ ಪಾವತಿಸಬಹುದಾಗಿದೆ” ಎಂದು ಹೇಳಿದೆ.

“2021ರ ನಂತರದ ನಿಯಮ ಉಲ್ಲಂಘನೆಗಳಿಗೆ ಮಾತ್ರ ಸಾಕ್ಷ್ಯಾಧಾರಿತ ಛಾಯಾಚಿತ್ರಗಳು ಲಭ್ಯವಿದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...