ಬೆಂಗಳೂರು | ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಸ್ಟಿಕ್ಕರ್ ಕಡ್ಡಾಯ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ ಪ್ರದರ್ಶಿಸಲು ಪಾಲಿಕೆ ಸೂಚನೆ ನೀಡಿದೆ.

“ಪಾಲಿಕೆ‌ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್‌ ಅಂಟಿಸಿಕೊಳ್ಳಬೇಕಿದೆ. ಸ್ವಯಂ ನೋಂದಣಿಯಾಗಿರುವ ವಾಹನಗಳಿಗೆ ಜಲಮಂಡಳಿ ವತಿಯಿಂದ ಸ್ಟಿಕ್ಕರ್‌ಗಳನ್ನು ಸಿದ್ದಪಡಿಸಿ ಪಾಲಿಕೆಗೆ ನೀಡಿದೆ. ಸದರಿ ಸ್ಟಿಕ್ಕರ್‌ಗಳನ್ನು ವಲಯವಾರು ಹಂಚಿಕೆ ಮಾಡಲಾಗಿದೆ” ಎಂದು ಹೇಳಿದೆ.

“ಅದರಂತೆ, ಪ್ರತಿ ಟ್ಯಾಂಕರ್ ಮಾಲೀಕರು ಪಾಲಿಕೆಯಲ್ಲಿ ಸ್ವಯಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕ್ಕರ್‌ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಸ್ವಯಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆಯಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಮಾಲೀಕರಿಗೆ ಈಗಾಗಲೇ ನಿಗದಿಪಡಿಸಿರುವ ದರದ ಅನುಸಾರ ನೀರು ಪೂರೈಕೆ‌ ಮಾಡಲು ಸೂಚಿಸಲಾಗಿದೆ. ನೋಂದಣಿಯಾಗದ ಟ್ಯಾಂಕರ್‌ಗಳಿಗೆ ನೀರು ಪೂರೈಕೆ ಮಾಡಲು ಅವಕಾಶ ನೀಡುವುದಿಲ್ಲ. ಸರ್ಕಾರದಿಂದ ನಿಗದಿಪಡಿಸಿರುವ ದರಕ್ಕಿಂದ ಹೆಚ್ಚಾಗಿ ಮಾರಾಟ ಮಾಡಿದಲ್ಲಿ ಅಥವಾ ನೀರಿನ ಗುಣಮಟ್ಟದ ಸಮಸ್ಯೆ ಉಂಟಾದಲ್ಲಿ ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916ಗೆ ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಗೆ ಸಂಪರ್ಕಿಸಬಹುದಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹20 ಲಕ್ಷ ವಶಕ್ಕೆ

“ಪಾಲಿಕೆ ತೆರೆದಿದ್ದ ಪೋರ್ಟಲ್‌ನಲ್ಲಿ ಸ್ವಯಂ ನೋಂದಣಿಯಾಗಿದ್ದ ಟ್ಯಾಂಕರ್‌ಗಳನ್ನು ಈಗಾಗಲೇ ವಲಯವಾರು ನಿಯೋಜಿಸಲಾಗಿದ್ದು, ಆಯಾ ವಲಯ ಆಯುಕ್ತರಿಗೆ ಆಯಾ ವಲಯಗಳಿಗೆ ನೀಡಿರುವ ಟ್ಯಾಂಕರ್ ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ನೀರು ಪೂರೈಕೆ‌ ಮಾಡುವ ಪ್ರದೇಶದ ಮಾಹಿತಿಯನ್ನು ನೀಡಲಾಗಿದೆ” ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.

ಸ್ಟಿಕರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...