ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ ಬಳಕೆಯ ವಸ್ತುಗಳ ದರ ಏರಿಕೆಯಾಗುತ್ತಿದೆ. ಸದ್ಯ ₹50ರ ಗಡಿಯಲ್ಲಿದ್ದ ತರಕಾರಿಗಳ ದರ ಇದೀಗ ₹100ರ ಗಡಿ ದಾಟಿದೆ. ಟೊಮೆಟೊ ಬೆಲೆ ₹50 ಏರಿಕೆಯಾಗಿದ್ದು, ತೊಗರಿಬೇಳೆ ₹200ರ ಗಡಿ ಮುಟ್ಟಿದೆ.

ಈ ಹಿಂದೆ ₹50 ರ ಅಸುಪಾಸಿನಲ್ಲಿ‌ ಸಿಗುತ್ತಿದ್ದ ತರಕಾರಿಗಳು ಇದೀಗ ₹100 ರ ಗಡಿ ದಾಟಿವೆ. ನಗರದಲ್ಲಿ ಹೆಚ್ಚು‌ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಬಂದ ಬೆಳೆಯೂ ಹಾಳಾಗುತ್ತಿದೆ. ಜತೆಗೆ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ತರಕಾರಿಗಳು ಸಿಗದ ಪರಿಣಾಮ ತರಕಾರಿ ಬೆಲೆ‌‌ ಏರಿಕೆಯಾಗಿದೆ. ದರ ಏರಿಕೆಯಾಗುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ.

ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ ₹200ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ. ತರಕಾರಿ ಬೆಲೆಯ ಜತೆಗೆ ದಿನಸಿ ಪದಾರ್ಥಗಳ‌ ಬೆಲೆ‌ ಕೂಡ ಏರಿಕೆಯಾಗಿದೆ. ಕೆಜಿ ತೊಗರಿ ಬೇಳೆಗೆ ಹೋಲ್ ಸೇಲ್​​ನಲ್ಲಿ ₹195‌ ಇದ್ದರೆ, ಚಿಲ್ಲರೆ ಅಂಗಡಿಗಳಲ್ಲಿ‌ ₹220 ಇದೆ.‌ ಕಡ್ಲೆ ಬೇಳೆ ಕೆಜಿ ₹72 ಇತ್ತು.‌ ಇದೀಗ ₹110 ಆಗಿದೆ.‌ ಅಲ್ಲದೇ, ಸ್ಟೀಮ್ ಅಕ್ಕಿ ₹48 ಇದ್ದು, ಈಗ ₹58 ಆಗಿದೆ. ಹೊಸ ಸ್ಟಾಕ್ ಇಲ್ಲದ ಕಾರಣ ಬೇಳೆ, ಅಕ್ಕಿ ಬೆಲೆ ಜಾಸ್ತಿಯಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಮಳೆಯಿಲ್ಲದೇ ತರಕಾರಿ ಬೆಳೆದಿಲ್ಲ. ಸಕಾಲಕ್ಕೆ ಮಳೆಯಾಗದ ಕಾರಣ ಹಲವು ತರಕಾರಿಗಳು ಒಣಗಿವೆ. ಜತೆಗೆ, ತಾಪಮಾನ ಹೆಚ್ಚಳವಾಗಿದ್ದಕ್ಕೆ ತರಕಾರಿ ಬೆಲೆ ಜಾಸ್ತಿಯಾಗಿತ್ತು ಎಂಬ ಕಾರಣವಿತ್ತು. ಇದೀಗ, ಮಳೆಯಾಗುತ್ತಿರುವುದರಿಂದ ತರಕಾರಿ ಬೆಲೆ ಏರಿಕೆಯಾಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ನೀಟ್ ಅಕ್ರಮ | ಹಣಕ್ಕಾಗಿ ಬದ್ಧತೆ ಮರೆತವಾ ಮಾಧ್ಯಮಗಳು?

ಅಲ್ಲದೇ, ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗುತ್ತಿಲ್ಲ. ಸದ್ಯ ಕೇವಲ‌ ಕರ್ನಾಟಕದ ಜಿಲ್ಲೆಗಳಿಂದ‌ ಮಾತ್ರ ತರಕಾರಿ ಪೂರೈಕೆಯಾಗುತ್ತಿದೆ. ಜತೆಗೆ, ಮಳೆಗೆ ಟೊಮೆಟೊ ‌ಹಾಗೂ ಈರುಳ್ಳಿ ಸರಿಯಾಗಿ ಫಸಲು ಬರುತ್ತಿಲ್ಲ.‌ ಈ‌‌‌ ಕಾರಣದಿಂದಾಗಿ ತರಕಾರಿಗಳ‌ ಬೆಲೆ‌ ಜಾಸ್ತಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ‌ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪರಸ್ಥರು ಅಭಿಪ್ರಾಯಪಟ್ಟಿದ್ದಾರೆ.

₹80 ಇದ್ದ ಕ್ಯಾರೆಟ್ ಬೆಲೆ ಇದೀಗ ₹82 ಆಗಿದೆ. ನವಿಲುಕೋಸು ₹102, ಬದನೆಕಾಯಿ ₹30, ದಪ್ಪಮೆನಸಿನಕಾಯಿ ₹65, ಬಟಾಣಿ ₹120, ಬೆಂಡೆಕಾಯಿ ₹30, ಆಲೂಗಡ್ಡೆ ₹40, ಬೆಳ್ಳುಳ್ಳಿ ₹180 ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...