ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.

ಮಳೆಯಿಲ್ಲದೇ, ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಾಗಿತ್ತು. ಮಳೆ ಕೊರತೆಯಿಂದ ಹೆಚ್ಚಿನ ಪ್ರಮಾಣದಲ್ಲಿ‌ ಫಸಲು ಬಂದಿಲ್ಲ. ಈ ಹಿನ್ನೆಲೆ, ಮಾರುಕಟ್ಟೆಗೆ ತರಕಾರಿಗಳು ಬರುತ್ತಿಲ್ಲ. ಹೀಗಾಗಿ, ತರಕಾರಿಗಳ ಬೆಲೆ ಗಗನಕ್ಕೇರಿದೆ.

ಸದ್ಯ, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗುತ್ತಿದೆ. ಹೀಗಾಗಿ, ಮಾರುಕಟ್ಟೆಗೆ ಕಡಿಮೆ ಪ್ರಮಾಣದ ತರಕಾರಿ ಬರುತ್ತಿದ್ದು, ತರಕಾರಿಗಳಿಗೆ ಹೆಚ್ಚಿನ ಬೆಲೆ ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ, ತರಕಾರಿಗಳ‌ ಬೆಲೆ‌ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮಾರುಕಟ್ಟೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ತರಕಾರಿಗಳ ದರ ಏರಿಕೆಯಾಗಿದೆ. ಆದರೆ, ಬಡವಾಣೆಗಳ, ಮನೆಗಳ ಬಳಿಯ ತರಕಾರಿ ಅಂಗಡಿಗಳು, ತಳ್ಳುವ ಗಾಡಿ ವ್ಯಾಪಾರಸ್ಥರು, ಹಾಪ್ ಕಾಮ್ಸ್​​​​ಗಗಳಲ್ಲಿ ತರಕಾರಿ ಬೆಲೆ ವಿಪರೀತ ಏರಿಕೆಯಾಗಿದೆ.

ಇಂದಿನ ತರಕಾರಿ ಬೆಲೆ

ಬಟಾಣಿ:140-180, ಬೆಂಡೆಕಾಯಿ:60-66, ಟೊಮೆಟೋ:30-60, ಆಲೂಗೆಡ್ಡೆ:30-56, ಹಾಗಲಕಾಯಿ:60- 82, ಗೋರಿಕಾಯಿ:50-89, ಹಸಿ ಮೆಣಸಿನಕಾಯಿ:80-106, ಬಿಟ್ರೋಟ್: 40-46, ಈರುಳ್ಳಿ:20-39, ಕ್ಯಾರೇಟ್: 80-82, ಬೀನ್ಸ್:220-220, ನವಿಲುಕೋಸು:60-102, ಬದನೆಕಾಯಿ:60-70, ದಪ್ಪ ಮೆಣಸಿನಕಾಯಿ:40- 65, ಸೋರೆಕಾಯಿ:40-50, ಬೆಳ್ಳುಳ್ಳಿ: 300-338, ಶುಂಠಿ:180-195, ಪಡುವಲಕಾಯಿ: 30-60 ರೂಪಾಯಿ ಇದೆ.

ವಿಜಯನಗರ ಸೇರಿದಂತೆ ನಗರದ ವಿವಿಧೆಡೆ ಒಂದು ಕಟ್ಟು ನಾಟಿ ಕೊತ್ತಂಬರಿ ಸೊಪ್ಪು ಬರೋಬ್ಬರಿ ₹100 ಮಾರಾಟವಾಗುತ್ತಿದೆ. ಇನ್ನು ಕಳೆದ ವಾರ ಬೀನ್ಸ್ ಬೆಲೆ ಬರೋಬ್ಬರಿ ₹200 ಇತ್ತು. ಇದೀಗ ₹220 ಆಗಿದೆ. ಸೌತೆಕಾಯಿ ಹಾಗೂ ಲಿಂಬೆಹಣ್ಣಿನ ಬೆಲೆ ಕೂಡ ಜಾಸ್ತಿಯಾಗಿದೆ. ಬೀನ್ಸ್ ಬಟಾಣಿ ಬೆಲೆ ಗ್ರಾಹಕರ ಕೈ ತಪ್ಪಿ ಹೋಗಿದ್ದು, ಬೆಲೆ ಕೇಳಿದ ಗ್ರಾಹಕರು ಖಾಲಿ ಚೀಲ ಹಿಡಿದುಕೊಂಡು ವಾಪಸ್ ಮನೆಗೆ ಹೋಗುವಂತಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿರುವ ಜನರಿಗೆ ತರಕಾರಿ ಖರೀದಿ ಕಷ್ಟವಾಗಿದೆ. ಬೇಡಿಕೆಗೆ ತಕ್ಕಂತ ತರಕಾರಿ ಇಲ್ಲದೇ ಇರುವುದು ಬೆಲೆ ಏರಿಕೆಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ದರ ಏರಿಕೆಯಾದ ಹಿನ್ನೆಲೆ, ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಕೆಜಿ ಖರೀದಿ ಮಾಡುತ್ತಿದ್ದ ಜನರು ಅರ್ಧ ಕೆಜಿ ಖರೀದಿ ಮಾಡುತ್ತಾರೆ. ಇದರಿಂದ ವ್ಯಾಪಾರ ಕುಂಠಿತವಾಗಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...