ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

Date:

“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ಎಲ್ಲಿಯೂ ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಲಯ ಕಚೇರಿಯಲ್ಲಿ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಸಿಂಟೆಕ್ಸ್ ಟ್ಯಾಂಕ್ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ಪೂರೈಕೆ ಮಾಡಬೇಕು” ಎಂದು ಹೇಳಿದರು.

“ಮಹದೇವಪುರ ವಲಯ ವ್ಯಾಪ್ತಿಯಲ್ಲಿ 46 ಶುದ್ಧ ಕುಡಿಯುವ ನೀರಿನ ಘಕಟಗಳು ಬರಲಿದ್ದು, 42 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 4 ಘಟಕಗಳು ಸ್ಥಗಿತಗೊಂಡಿದ್ದು, ಸದ್ಯ ಇರುವ ಘಟಕಗಳಿಗೆ ಕೂಡಲೇ ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡಿಕೊಂಡು ನೀರಿನ ಪೂರೈಕೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಲಮಂಡಳಿಯ ಜಲಗಾರಗಳಲ್ಲಿ ಏಕ ಕಾಲದಲ್ಲಿ ಮೂರು/ನಾಲ್ಕು ಟ್ಯಾಂಕರ್ ಗಳಿಗೆ ನೀರು ಪೂರೈಕೆ ಮಾಡುವ ಹಾಗೇ ಪೈಪ್ ಅಳವಡಿಸಿಕೊಂಡು ನೀರಿನ ಸಮಸ್ಯೆಯಿರುವ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಎಷ್ಟು ಕೊಳವೆ ಬಾವಿಗಳು ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ, ಎಷ್ಟು ಬತ್ತಿ ಹೋಗಿವೆ. ಎಷ್ಟು ಕೊಳವೆ ಬಾವಿಗಳಿಗೆ ವಿದ್ಯುತ್ ಸಮಸ್ಯೆಯಿದೆ. ಯಂತ್ರಗಳು ಹಾಳಾಗಿವೆ, ಎಲ್ಲೆಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಬೇಕಿದೆ ಎಂಬುದನ್ನು ಸರಿಯಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

ನೋಂದಣಿಯಾದ ಟ್ಯಾಂಕರ್‌ಗಳು ಸ್ಟಿಕ್ಕರ್ ಅಂಟಿಸಬೇಕು

“ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಟಿಕರ್‌ಗಳನ್ನು ಅಂಟಿಸಿಕೊಳ್ಳಬೇಕಿದೆ” ಎಂದು ತಿಳಿಸಿದರು.

ಪ್ರತಿ ಟ್ಯಾಂಕರ್ ಮಾಲೀಕರು ಸ್ವಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕರ್‌ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಸ್ಟಿಕ್ಕರ್ ಅಂಟಿಸದಿರುವ ಟ್ಯಾಂಕರ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾರಿವಾಳಗಳಿಗೆ ಆಹಾರ ಹಾಕಿದರೆ ₹200 ದಂಡ

ವೇಳೆ ವಲಯ ಆಯುಕ್ತರಾದ ರಮೇಶ್, ವಿಪತ್ತು ನಿರ್ವಹಣೆಯ ನೋಡಲ್ ಅಧಿಕಾರಿಯಾದ ಸುರೋಳ್ಕರ್ ವಿಕೋಸ್ ಕಿಶೋರ್, ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...