ಬೆಂಗಳೂರು | ವಿಜಯನಗರ ಹೋಟೆಲ್​ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಬಂಧನ

Date:

ಬೆಂಗಳೂರಿನ ವಿಜಯನಗರ ಹೋಟೆಲ್‌ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ”ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ” ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಚಂದನ್ ಬಂಧಿತ ಆರೋಪಿ. ಈತ ಬೆಂಗಳೂರಿನ ಹಂಪಿನಗರ ನಿವಾಸಿಯಾಗಿದ್ದು, ಗ್ಯಾಸ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾನೆ.

ಬೆಂಗಳೂರಿನ ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಯುವತಿಯೊಬ್ಬರ ಜತೆ ಬಂಧಿತ ಆರೋಪಿ ಅಸಭ್ಯವಾಗಿ ವರ್ತಿಸಿದ್ದನು. ಈ ಘಟನೆಗೆ ಸಾಕ್ಷಿಯಾಗಿದ್ದ ವಿಜಯನಗರ ಹೋಟೆಲ್ ಮಹಿಳಾ ಕ್ಯಾಷಿಯರ್ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ಬಂಧಿತ ಆರೋಪಿ ಚಂದನ ತನ್ನ ಸ್ನೇಹಿತರ ಜತೆಗೆ, ಡಿಸೆಂಬರ್ 30ರಂದು ಸಂಜೆ 7:30ರ ಸುಮಾರಿಗೆ ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ವೊಂದಕ್ಕೆ ತಿಂಡಿ ತಿನ್ನಲು ಬಂದಿದ್ದರು. ತಿಂಡಿ ತಿಂದು ಹೋಟೆಲ್‌ನಲ್ಲಿ ನಿಂತು ಮೂವರು ಸ್ನೇಹಿತರು ಮಾತನಾಡುತ್ತಿದ್ದರು.

ಇದೇ ಸಮಯಕ್ಕೆ ಹೋಟೆಲ್‌ಗೆ ಬಂದ ಯುವತಿಯೊಬ್ಬರು ಕ್ಯಾಷ್‌ ಕೌಂಟರ್‌ನಲ್ಲಿ ಇರುವುದನ್ನು ಮೂವರು ಗಮನಿಸಿದ್ದಾರೆ. ಈ ವೇಳೆ, ಬಂಧಿತ ಆರೋಪಿ ಚಂದನ್ ಯುವತಿಯ ಬಳಿ ಬಂದು ಹಿಂಬದಿಯಿಂದ ಆಕೆಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ. ಚಂದನ್ ಯುವತಿಯನ್ನು ಮುಟ್ಟಿದ ಬಳಿಕ ಆತನ ಸ್ನೇಹಿತರು ಶಿಳ್ಳೆ ಹೊಡೆದಿದ್ದಾರೆ.

ಈ ವೇಳೆ, ಯುವತಿ ಗಲಾಟೆ ಆರಂಭಿಸಿದಾಗ ಹೋಟೆಲ್‌ನಲ್ಲಿ ಜನ ಜಮಾಯಿಸಿದ್ದಾರೆ. ಆರೋಪಿ ಯುವಕರು ಈ ವೇಳೆ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯ ಹೋಟೆಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಘಟನೆಯ ಪ್ರತ್ಯಕ್ಷದರ್ಶಿ ಮಹಿಳಾ ಕ್ಯಾಷಿಯರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ದೌರ್ಜನ್ಯ ನಡೆಸುವ ಸಂಚಿಗೆ ಸಂಬಂಧಿಸಿದ್ದು) ಮತ್ತು 509 (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ವಿಶ್ವದ ‘ಕುಖ್ಯಾತ ಮಾರುಕಟ್ಟೆ’ಗಳ ಪಟ್ಟಿಯಲ್ಲಿ ಬೆಂಗಳೂರಿನ ಎಸ್‌ಪಿ ರೋಡ್ ಉಲ್ಲೇಖ

ಸ್ನೇಹಿತರೊಬ್ಬರು ಸವಾಲು ಹಾಕಿದ್ದರಿಂದ ಮಹಿಳೆಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಯು ಪೊಲೀಸರಿಗೆ ತಿಳಿಸಿದ್ದಾನೆ.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಬುಧವಾರ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...