ಬೆಂಗಳೂರು | ಆಸ್ತಿಯಲ್ಲಿ ಪಾಲು ಕೇಳಿದ ಮಗನ ಮೇಲೆ ಆ್ಯಸಿಡ್ ಎರಚಿದ ತಂದೆ

Date:

ಆಸ್ತಿಯಲ್ಲಿ ಪಾಲು ನೀಡುವಂತೆ ಕೇಳಿದ ಮಗನ ಮೇಲೆ ತಂದೆಯೊಬ್ಬ (ನಿವೃತ್ತ ಪೊಲೀಸ್ ಅಧಿಕಾರಿ) ಆ್ಯಸಿಡ್ ಎರಚಿದ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಲ್ಲಸಂದ್ರದಲ್ಲಿ ನಡೆದಿದೆ.

ಆರೋಪಿ ತಂದೆ ನಿವೃತ್ತ ಪಿಎಸ್‌ಐ ರಾಮಕೃಷ್ಣಯ್ಯ, ಅವರ ಹಿರಿಯ ಮಗ ಉಪೇಂದ್ರ ಹಾಗೂ ಪುತ್ರಿ ಕಲಾವತಿ ಬಂಧಿತರು. ಸಂತ್ರಸ್ತ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ತಿಯಲ್ಲಿ ಪಾಲು ನೀಡುವಂತೆ ತಂದೆ ರಾಮಕೃಷ್ಣಯ್ಯ ಬಳಿ ಆಗಾಗ ಕಿರಣ್ ಕೇಳುತ್ತಿದ್ದರು. ಆ ಆಸ್ತಿ ಮತ್ತು ಮನೆಯನ್ನು ಸ್ವಯಾರ್ಜಿತವಾಗಿ ಸಂಪಾದಿಸಿದ್ದೇನೆ. ನಿನಗೆ ನೀಡುವುದಿಲ್ಲ ಎಂದು ರಾಮಕೃಷ್ಣಯ್ಯ ಹೇಳಿದ್ದರು. ಈ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ, ನಿವೃತ್ತ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಆದ ರಾಮಕೃಷ್ಣಯ್ಯ ಅವರ ಹಿರಿಯ ಮಗ ಉಪೇಂದ್ರಕುಮಾರ್‌ ಹಾಗೂ ಮಗಳು ಕಲಾವತಿ ಜತೆ ಬೆಂಗಳೂರಿನ ಮಲ್ಲಸಂದ್ರದ ಮನೆಯಲ್ಲಿ ವಾಸವಾಗಿದ್ದಾರೆ. ವಿವಾಹಿತರಾದ ಕಿರಣ್‌ ಪತ್ನಿಯೊಂದಿಗೆ ಶೆಟ್ಟಿಹಳ್ಳಿಯಲ್ಲಿ ವಾಸವಾಗಿದ್ದಾರೆ.

ಮಾ.22ರಂದು ರಾತ್ರಿ ಕಿರಣ್‌ ತನ್ನ ತಂದೆಯ ಮನೆ ಬಳಿ ಹೋಗಿ ಆಸ್ತಿ ಮತ್ತು ಮನೆಯಲ್ಲಿ ಪಾಲು ಕೊಡುವಂತೆ ಕೇಳಿದ್ದರು. ಇದರಿಂದ ಕೆರಳಿದ ರಾಮಕೃಷ್ಣಯ್ಯ, ಕಿರಣ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಟಿ ದಾಸರಹಳ್ಳಿಯಲ್ಲಿದೆ ಎನ್ನಲಾದ ಆಸ್ತಿಯಲ್ಲಿ ರಾಮಕೃಷ್ಣಯ್ಯ ಮತ್ತು ಕಿರಣ್ ಪಾಲು ಕೇಳಿದ್ದರಿಂದ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ, ನಿವೃತ್ತ ಪಿಎಸ್‌ಐ ರಾಮಕೃಷ್ಣಯ್ಯ ಉಪೇಂದ್ರ ಹಾಗೂ ಕಲಾವತಿ ಅವರು ಕಿರಣ್‌ ಮೇಲೆ ಆಸಿಡ್‌ ಎರಚಿ ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಉಪೇಂದ್ರಕುಮಾರ್‌ ಮತ್ತು ಕಲಾವತಿ ಸಹ ತಂದೆಯ ಜತೆ ಸೇರಿ ಕಿರಣ್‌ಗೆ ಹಿಗ್ಗಾಮುಗ್ಗಾ ಥಳಿಸಿ, ಬೆದರಿಕೆ ಹಾಕಿದ್ದಾರೆ. ಕಿರಣ್‌ನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಸಿಡ್ ಎರಚಿದ ಕಾರಣ ಕಿರಣ್ ಅವರ ಒಂದು ಕಣ್ಣಿನಲ್ಲಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಅವರ ದೇಹದ ಮೇಲೆ ತೀವ್ರ ಸುಟ್ಟಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೆಟ್ರೋ ಕಾಮಗಾರಿ | ಏಪ್ರಿಲ್ 1ರಿಂದ ‘ಒಂದು ವರ್ಷ’ ಈ ರಸ್ತೆಯಲ್ಲಿ ಸಂಚಾರ ಬಂದ್

ಯಾವ ರಾಸಾಯನಿಕವನ್ನು ಬಳಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತನ ದೂರಿನ ಮೇರೆಗೆ ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಲ್ಲೆ, ಆಸಿಡ್‌ ದಾಳಿ, ನಿಂದನೆ, ಅಪರಾಧ ಸಂಚು ಆರೋಪದಡಿ ರಾಮಕೃಷ್ಣಯ್ಯ, ಉಪೇಂದ್ರಕುಮಾರ್‌ ಮತ್ತು ಕಲಾವತಿ ವಿರುದ್ಧ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...