ಬೆಂಗಳೂರು | ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ‌ ಎರಡು ನಕಲಿ ಆದೇಶ; ₹4 ಕೋಟಿ ಗುತ್ತಿಗೆ ವಂಚನೆ

Date:

ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ ಎರಡು ನಕಲಿ ಆದೇಶದ ಪ್ರತಿಗಳು ಹರಿದಾಡಿದ್ದು, ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿರುವುದರಿಂದ ಭಾರೀ ಸಮಸ್ಯೆ ಉಂಟಾಗುತ್ತಿದೆ. ಒಂದು ನಕಲಿ ಆದೇಶ ಪ್ರತಿಯಲ್ಲಿ, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲೇ ನೇಮಕಾತಿ ಬಗ್ಗೆ ಹೊರಡಿಸಿದ್ದರೆ, ಮತ್ತೊಂದರಲ್ಲಿ ವಕ್ಫ್ ಬೋರ್ಡ್ ಕಾರ್ಯದರ್ಶಿ ಹೆಸರಿನಲ್ಲಿ ಕಾಂಟ್ರಾಕ್ಟ್ ಪಡೆದ ನಕಲಿ ಆದೇಶವಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎನ್‌ಎಚ್‌ಎಂಗಳನ್ನು (ನ್ಯಾಷನಲ್‌ ಹೆಲ್ತ್‌ ಮಿಷನ್‌ ಸಿಬ್ಬಂದಿ) ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಆದರೆ, ಎನ್‌ಎಚ್‌ಎಂ ನೌಕರರನ್ನು ಕಾಯಂಗೊಳಿಸಿ ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಯವರ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದೆ. ನಕಲಿ ಆದೇಶದ ಪ್ರತಿಯನ್ನು ದುಷ್ಕರ್ಮಿಗಳು ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆದೇಶ ಕುರಿತು ನೈಜತೆ ಪರಿಶೀಲನೆ ವೇಳೆ ನಕಲಿ ಆದೇಶ ಪತ್ರ ಎಂಬುವುದು ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುಖ್ಯಮಂತ್ರಿ‌ ಮುಖ್ಯ ಕಾರ್ಯದರ್ಶಿ ಸಿದ್ದೇಶ ಪೊತಲಕಟ್ಟಿ ಅವರು ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದು ನಕಲಿ ಪತ್ರ

ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಕಾಲೋನಿ ಮೂಲ ಸೌಕರ್ಯಗಳ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದೆ.

ವಕ್ಫ್ ಬೋರ್ಡ್ ಕಾರ್ಯದರ್ಶಿ ನಾಗರಾಜ್ ಅವರ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಲಾಗಿದ್ದು, ಈ ನಕಲಿ ಆದೇಶದಲ್ಲಿ ನಾಲ್ಕು ಕೋಟಿ ಗುತ್ತಿಗೆ ನೀಡಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಾ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಸದ್ಯ ನಕಲಿ‌ ಆದೇಶವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ‌ ಕಚೇರಿಗೆ ಸಲ್ಲಿಸಿದ್ದ ನಕಲಿ ಗುತ್ತಿಗೆ ನಿಖಿಲ್ ವಿರುದ್ಧ ಸರ್ಕಾರಿ ‌ವಕ್ಫ್ ಬೋರ್ಡ್ ಕಾರ್ಯದರ್ಶಿ ನಾಗರಾಜ್ ಅವರು ದೂರು ನೀಡಿದ್ದಾರೆ.

ಸದ್ಯ ಈ ಎರಡು ಪ್ರಕರಣಗಳನ್ನು ವಿಧಾನಸೌಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...